ದ್ವಿತೀಯ ಪಿಯುಸಿ ವಿಜ್ಞಾನ: ಥಿಯರಿ ಪರೀಕ್ಷೆ ಬರೆದೂ ತೇರ್ಗಡೆ!


Team Udayavani, Apr 15, 2022, 8:00 AM IST

Untitled-1

ಉಡುಪಿ: ವಿವಿಧ ಕಾರಣಗಳಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ (ಪ್ರಾಕ್ಟಿಕಲ್‌) ಪರೀಕ್ಷೆ ಬರೆಯದ ವಿದ್ಯಾರ್ಥಿಗಳು ಥಿಯರಿ ಪರೀಕ್ಷೆಯನ್ನಷ್ಟೇ ಚೆನ್ನಾಗಿ ಬರೆದರೂ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಬಹುದು.

ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪ್ರಾಯೋಗಿಕ ತರಗತಿಗಳು ಅತೀ ಮುಖ್ಯ. ಥಿಯರಿಯ ಜತೆಗೆ ಪ್ರಾಯೋಗಿಕವಾಗಿ ವಿಜ್ಞಾನವನ್ನು ಓದಿದರಷ್ಟೇ ಸರಿಯಾಗಿ ಅರ್ಥೈಸಿಕೊಳ್ಳಲು ಸಾಧ್ಯ. ಈಗಾಗಲೇ ನಡೆದಿರುವ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯನ್ನು ವಿವಿಧ ಕಾರಣಕ್ಕೆ ಬರೆಯದ ವಿದ್ಯಾರ್ಥಿಗಳು ತಮಗೆ ಲಭ್ಯವಿರುವ ಕಾಲಾವಕಾಶದಲ್ಲಿ ಥಿಯರಿಗೆ ಹೆಚ್ಚಿನ ಆದ್ಯತೆ ನೀಡಿ ಓದಿ ಪರೀಕ್ಷೆ ಬರೆದು ಪಾಸಾಗಲು ಮುಕ್ತ ಅವಕಾಶವಿದೆ.

ಅಂಕ ಹಂಚಿಕೆ ಹೇಗೆ? :

ವಿಜ್ಞಾನದ ಪ್ರತೀ ವಿಷಯದ ಪರೀಕ್ಷೆ 100 ಅಂಕಗಳಿಗೆ ಇರುತ್ತದೆ. ಇದರಲ್ಲಿ 70 ಥಿಯರಿ ಮತ್ತು 30 ಪ್ರಾಯೋಗಿಕ ಪರೀಕ್ಷೆಗೆ ನಿಗದಿಯಾಗಿದೆ. 70 ಅಂಕಗಳ ಥಿಯರಿ ಪರೀಕ್ಷೆಯಲ್ಲಿ ಕನಿಷ್ಠ 21 ಅಂಕ ಪಡೆಯಲೇಬೇಕು. ಆದರೆ ಪ್ರಾಯೋಗಿಕ ಪರೀಕ್ಷೆಯಲ್ಲಿ ಈ ನಿಯಮ ಇಲ್ಲ. 30 ಅಂಕಗಳಲ್ಲಿ ಶೂನ್ಯ ಬಂದರೂ ಥಿಯರಿಯಲ್ಲಿ ಉತ್ತೀರ್ಣರಾಗಲು ಬೇಕಾದ ಕನಿಷ್ಠ ಅಂಕ 30 ಅಥವಾ 35 ಬಂದಿದ್ದರೆ ಮುಂದಿನ ತರಗತಿಗೆ ಹೋಗಬಹುದು.

ಉನ್ನತ, ಅತ್ಯುನ್ನತ ಶ್ರೇಣಿ ಬಯ ಸುವ ವಿದ್ಯಾರ್ಥಿಗಳು ಪ್ರಾಯೋಗಿಕ ಮತ್ತು ಥಿಯರಿ ಪರೀಕ್ಷೆಯನ್ನು ಚೆನ್ನಾಗಿ ಬರೆಯಬೇಕು. ಥಿಯರಿಯಲ್ಲಿ ಪೂರ್ಣ ಅಂಕ ಪಡೆಯುವುದು ಕಷ್ಟ. ಆದರೆ ಪ್ರಾಯೋಗಿಕ ಪರೀಕ್ಷೆಯಲ್ಲಿ 30ಕ್ಕೆ 30 ಅಂಕವನ್ನು ಸುಲಭವಾಗಿ ಪಡೆಯಬಹುದು.

ಥಿಯರಿಯನ್ನು ಚೆನ್ನಾಗಿ ಬರೆದು 70ಕ್ಕೆ 70 ಅಂಕ ಪಡೆದರೆ ನೂರಕ್ಕೆ ನೂರು ಅಂಕ ಪಡೆಯಬಹುದು. ಥಿಯರಿಯಲ್ಲಿ ಕನಿಷ್ಠ 21 ಅಂಕ ಪಡೆಯದ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಾರೆ.

ಏನಿದು 30 ಅಥವಾ 35? :

ವಿಜ್ಞಾನದ ಪ್ರಮುಖ ನಾಲ್ಕು ವಿಷಯದಲ್ಲಿ ಒಟ್ಟಾರೆ ವಿದ್ಯಾರ್ಥಿ ಗಳಿಸುವ ಕನಿಷ್ಠ ಅಂಕ 140ಕ್ಕಿಂತ ಹೆಚ್ಚಿರಬೇಕು. ಉದಾಹರಣೆಗೆ, ಭೌತಶಾಸ್ತ್ರದಲ್ಲಿ 40, ರಸಾಯನಶಾಸ್ತ್ರದಲ್ಲಿ 40, ಜೀವಶಾಸ್ತ್ರದಲ್ಲಿ 35 ಅಂಕ ಪಡೆದಿರುವ ವಿದ್ಯಾರ್ಥಿ ಗಣಿತದಲ್ಲಿ 30 ಅಂಕ ಪಡೆದರೂ ಉತ್ತೀರ್ಣನಾಗಬಹುದು. ಆದರೆ ಇದರಲ್ಲಿ ಎರಡು ವಿಷಯಗಳಲ್ಲಿ ಒಟ್ಟು 30ಕ್ಕಿಂತ ಕಡಿಮೆ ಅಂಕ ಪಡೆಯುವಂತಿಲ್ಲ. ಪಡೆದರೆ ಅನುತ್ತೀರ್ಣರಾಗುತ್ತಾರೆ ಎಂದು ಪಿಯುಸಿ ವಿಜ್ಞಾನ ವಿಷಯ ತಜ್ಞರಾದ ಗೋಪಾಲಕೃಷ್ಣ ಗೋರೆ ಮಾಹಿತಿ ನೀಡಿದ್ದಾರೆ.

ಹಾಜರಾತಿ ವಿನಾಯಿತಿ :

ಕೊರೊನಾಕ್ಕೆ ಮುನ್ನ ವಾರ್ಷಿಕ ಪರೀಕ್ಷೆ ಬರೆಯುವ ಪ್ರತೀ ವಿದ್ಯಾರ್ಥಿಗೂ ಹಾಜರಾತಿ ಕಡ್ಡಾಯ ಇತ್ತು. ಕೊರೊನಾ ಬಂದ ಅನಂತರ ತರಗತಿ ಹಾಜರಾತಿ ಕಡ್ಡಾಯ ಎಂಬ ನಿಯಮ ಸಡಿಲಿಸಲಾಗಿದೆ. ಶೈಕ್ಷಣಿಕ ತರಗತಿ ಆರಂಭವೇ ವಿಳಂಬವಾದದ್ದರಿಂದ ಈ ವರ್ಷವೂ ಹಾಜರಾತಿ ವಿನಾಯಿತಿಯನ್ನು ಮುಂದುವರಿಸಲಾಗಿದೆ. ಹಾಜರಾತಿ ಕಡಿಮೆ ಇದೆ ಎಂದು ವಿದ್ಯಾರ್ಥಿಗಳು ಪರೀಕ್ಷೆಯಿಂದ ಹೊರಗೆ ಉಳಿಯಬಾರದು ಎಂಬ ಕಾರಣಕ್ಕೆ ವಿನಾಯಿತಿ ನೀಡಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷೆ ವಿಭಾಗದ ಉಪನಿರ್ದೇಶಕಿ ಶೈಲಜಾ ಸಿ.ಎಲ್‌. ಮಾಹಿತಿ ನೀಡಿದ್ದಾರೆ.

ಪ್ರಾಯೋಗಿಕ ಪರೀಕ್ಷೆ ಬರೆಯದೆ ಇರುವ ವಿದ್ಯಾರ್ಥಿಗಳು ಥಿಯರಿ ಪರೀಕ್ಷೆ ಬರೆದು ಉತ್ತೀರ್ಣರಾಗಬಹುದು. ವಿವಿಧ ಕಾರಣಕ್ಕೆ ಪ್ರಾಯೋಗಿಕ ಪರೀಕ್ಷೆ  ಬರೆಯದವರು ಥಿಯರಿಯನ್ನು ಚೆನ್ನಾಗಿ ಬರೆದು ಶಿಕ್ಷಣ ಮುಂದುವರಿಸಲು ಅವಕಾಶವಿದೆ.-ಮಾರುತಿ, ಡಿಡಿಪಿಯು, ಉಡುಪಿ 

 

- ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.