ಕಾವ್ಯಗಳು ಆತ್ಮವಿಶ್ವಾಸ ಮೂಡಿಸಲಿ : ಡಾ| ಹಂಪನಾ
Team Udayavani, Jun 9, 2018, 4:10 AM IST
ಉಡುಪಿ: ಕಾವ್ಯಗಳು ಸೋತು ಹೋಗಿರುವ ಜೀವಗಳಲ್ಲಿ ಆತ್ಮಸ್ಥೈರ್ಯ ಮೂಡಿಸಬೇಕೇ ವಿನಾ ಹತಾಶರನ್ನಾಗಿಸಬಾರದು. ಮನಸ್ಸು- ಮನುಷ್ಯರನ್ನು ಒಂದುಗೂಡಿಸುವ ಸೇತುವೆ ಕಾವ್ಯವಾಗಬೇಕು ಎಂದು ಹಿರಿಯ ವಿದ್ವಾಂಸ ಡಾ| ಹಂಪ ನಾಗರಾಜಯ್ಯ ಹೇಳಿದರು. ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಶುಕ್ರವಾರ ಜರಗಿದ ಸಮಾರಂಭದಲ್ಲಿ ಮಣಿಪಾಲ ಮಾಹೆಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ವತಿಯಿಂದ ನೀಡಲಾದ ‘ಸೇಡಿಯಾಪು ಕೃಷ್ಣಭಟ್ಟ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದರು.
ಸೇಡಿಯಾಪು ಪ್ರಶಸ್ತಿ ಶಿಖರ ಪ್ರಾಯವಾದುದು. ಅದು ನನಗೆ ಸಂದಿರುವುದು ಸಂತಸ ತಂದಿದೆ ಎಂದು ಅವರು ತಿಳಿಸಿದರು. ಹಿರಿಯ ಸಾಹಿತಿ ಡಾ| ಏರ್ಯ ಲಕ್ಷ್ಮೀನಾರಾಯಣ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿ ಆಫ್ ಜನರಲ್ ಎಜುಕೇಶನ್ ನ ಆಡಳಿತಾಧಿಕಾರಿ ಡಾ| ಎಚ್. ಶಾಂತಾರಾಮ್ ಮುಖ್ಯ ಅತಿಥಿಯಾಗಿದ್ದರು. ಹಿರಿಯ ಲೇಖಕ ಪ್ರೊ| ತಾಳ್ತಜೆ ವಸಂತ ಕುಮಾರ್ ಅಭಿನಂದನ ಮಾತುಗಳನ್ನಾಡಿದರು. ಹಿರಿಯ ವಿದ್ವಾಂಸ ಪ್ರೊ| ಕೆ.ಪಿ. ರಾವ್ ‘ಸೇಡಿಯಾಪು ಕಥಾ ಸಾಹಿತ್ಯ’ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಪ್ರಶಸ್ತಿ ಸಮಿತಿಯ ಡಾ| ಎಸ್.ಜೆ. ಭಟ್ ಉಪಸ್ಥಿತರಿದ್ದರು.
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಸಂಯೋಜನಾಧಿಕಾರಿ ಪ್ರೊ| ವರದೇಶ ಹಿರೇಗಂಗೆ ಸ್ವಾಗತಿಸಿ, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಪುತ್ತಿ ವಸಂತ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಸುಷ್ಮಿತಾ ಎ. ವಂದಿಸಿದರು.
ಬಳಕೆ ನಿಲ್ಲಲಿ
ಎಲ್ಲರಿಗೂ ಅವರವರ ಧರ್ಮದ ಪ್ರಕಾರ ಪ್ರಾರ್ಥಿಸುವ ಹಕ್ಕಿದೆ. ಆದರೆ ದೇವಾಲಯ- ಪ್ರಾರ್ಥನಾಲಯಗಳಲ್ಲಿ ಧ್ವನಿವರ್ಧಕ ಬಳಕೆ ನಿಲ್ಲಿಸಬೇಕು. ದೇಶದಲ್ಲಿ ಇದ್ದ ಮೇಲೆ ಎಲ್ಲರೂ ರಾಷ್ಟ್ರಗೀತೆ ಹಾಡಲೇಬೇಕು. ಹಿಂದೂ ದೇಶ ಎಂದಿಗೂ ಹೋಳಾಗಬಾರದು. ವಂದೇ ಮಾತರಂ ಮೊಳಗುತ್ತಿರಲಿ; ಸಮನ್ವಯದ ಹಣತೆ ನಿತ್ಯ ಬೆಳಗುತ್ತಿರಲಿ ಎಂದು ಡಾ| ಹಂಪನಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು
MUST WATCH
ಹೊಸ ಸೇರ್ಪಡೆ
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ
ನಮ್ಮ ವಿರುದ್ಧ ಷಡ್ಯಂತ್ರ: ಎಚ್.ಡಿ. ರೇವಣ್ಣ