ಹಿರಿಯ ಪತ್ರಕರ್ತ ಎ. ಈಶ್ವರಯ್ಯ ಇನ್ನಿಲ್ಲ


Team Udayavani, Dec 31, 2018, 12:30 AM IST

33.jpg

ಉಡುಪಿ: ಹಿರಿಯ ಪತ್ರಕರ್ತ, ಬಹುಮುಖ ಪ್ರತಿಭೆ ಅನಂತಪುರ ಈಶ್ವರಯ್ಯ (78) ಅಸೌಖ್ಯದಿಂದ ಡಿ. 30ರಂದು ವಿಬುಧಪ್ರಿಯನಗರದ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 1972ರಲ್ಲಿ “ಉದಯವಾಣಿ’ಗೆ ಸಹಾಯಕ ಸಂಪಾದಕರಾಗಿ ಸೇರಿದ ಈಶ್ವರಯ್ಯನವರು, ನಾಲ್ಕು ದಶಕಗಳ ಕಾಲ ಪತ್ರಕರ್ತರಾಗಿ “ಉದಯವಾಣಿ’ ಸಮೂಹದಲ್ಲಿಯೇ ಸೇವೆ ಸಲ್ಲಿಸಿದರು. ಸೇರಿದ ಕೆಲವೇ ತಿಂಗಳಲ್ಲಿ ಹೊಸ “ತುಷಾರ’ ಮಾಸಪತ್ರಿಕೆಯ ಸಂಪಾದಕರಾದರು. ಬಳಿಕ ಉದಯವಾಣಿ ಪುರವಣಿ ವಿಭಾಗ ಸಂಪಾದಕರಾಗಿ ಪತ್ರಿಕೆ ಗುಣಮಟ್ಟ ಹೆಚ್ಚಿಸುವಲ್ಲಿ ಅತ್ಯಪೂರ್ವ ಕೊಡುಗೆ ನೀಡಿದ್ದ ಅವರು ಪ್ರತಿ ಶುಕ್ರವಾರದ “ಕಲಾವಿಹಾರ’ದಲ್ಲಿ ಹೊಸತನಕ್ಕೆ ಶ್ರಮಿಸಿದ್ದರು. “ಉದಯವಾಣಿ’ಯಲ್ಲಿ “ಈಶ’ ಕಾವ್ಯನಾಮದಲ್ಲಿ ರಾಜಕೀಯ ವಿಶ್ಲೇಷಣಾತ್ಮಕ ಬರೆಹಗಳನ್ನು ಬರೆಯುತ್ತಿದ್ದರು. 

ಅನಂತಪುರದ ಈಶ್ವರಯ್ಯ 
ಈಶ್ವರಯ್ಯನವರು ಮೂಲತಃ ಕಾಸರಗೋಡಿನ  ಅನಂತಪುರದವರು. ಉಡುಪಿ ಎಂಜಿಎಂ ಕಾಲೇಜಿ ನಲ್ಲಿ ಬಿ.ಎ. ಪದವಿಗಳಿಸಿ ಕೆಲವು ವರ್ಷ
ಲೋಕೋಪಯೋಗಿ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು. ಈ ಅವಧಿಯಲ್ಲಿ  ಲೇಖನಗಳು ಸುಧಾ, ಮಯೂರ, ಕಸ್ತೂರಿ, ಪ್ರಜಾಮತ  ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದವು. ಸಿನೆಮಾ, ಸಂಗೀತ ಲೇಖನಗಳು ಫಿಲ್ಮ್ ಫೇರ್‌ ಪತ್ರಿಕೆಯಲ್ಲೂ ಪ್ರಕಟ ವಾಗಿತ್ತು. ಕಲಾವಿದರೂ ಆಗಿದ್ದ ಈಶ್ವರಯ್ಯನವರು ವಿವಿಧ ಸಂಗೀತ ಉಪಕರಣ, ಕರ್ನಾಟಕ ಸಂಗೀತ ಹಾಡುಗಾರಿಕೆ, ಯಕ್ಷಗಾನ ಭಾಗವತಿಕೆ ತಿಳಿದವರಾಗಿದ್ದರು.  ವಿದ್ವತೂರ್ಣ ವಿಚಾರ ಮಂಡಿಸುವ ವಾಗ್ಮಿಗಳೂ ಆಗಿದ್ದರು. 

ಆಂಗ್ಲ ಭಾಷೆಯ ಹಿಡಿತ
ಈಶ್ವರಯ್ಯನವರಿಗೆ ಆಂಗ್ಲ ಭಾಷೆ, ಸಾಹಿತ್ಯದಲ್ಲಿ  ಅಪಾರ ಜ್ಞಾನ ಹೊಂದಿದ್ದರು.  “ತರಂಗ’ದಲ್ಲಿ ಪ್ರಕಟವಾಗುತ್ತಿದ್ದ “ಸರಸ’ ಲಘು ಹಾಸ್ಯಮಿಶ್ರಿತ ಒಯ್ನಾರದ ಬರವಣಿಗೆ ಬಲು ಜನಪ್ರಿಯವಾಗಿತ್ತು. ಸಂಗೀತ ಕಲೆಗಾಗಿಯೇ ಇವರು ಸ್ಥಾಪಿಸಿದ “ರಾಗಧನ’ ಸಂಸ್ಥೆಯ ಅನೇಕ ಕಲಾ ಕಾರ್ಯಕ್ರಮಗಳನ್ನು ಸಂಘಟಿಸಿದ್ದರು. ಉತ್ತಮ ಛಾಯಾಗ್ರಾಹಕರಾಗಿಯೂ ಹೆಸರು ಮಾಡಿದ್ದರು. ಇವರ ಸಾಧನೆಗೆ ರಾಜ್ಯ ಪತ್ರಿಕಾ ಅಕಾಡೆಮಿ, ಲಲಿತಕಲಾ ಅಕಾಡೆಮಿ, ಪೇಜಾವರ ಮಠದ ರಾಮವಿಟ್ಟಲ ಪ್ರಶಸ್ತಿ ಹಲವಾರು ಗೌರವ ಸಂದಿವೆ.  ಈಶ್ವರಯ್ಯ ನವರಿಗೆ 70 ತುಂಬಿದಾಗ 2010ರಲ್ಲಿ ಉಡುಪಿ ಅಂಬಲಪಾಡಿ ದೇವಸ್ಥಾನದ ವಠಾರದಲ್ಲಿ ಇವರ ಎಲ್ಲ ಕ್ಷೇತ್ರಗಳ ಬಗೆಗೆ ವಿಚಾರ ಸಂಕಿರಣ, ಅಭಿನಂದನೆ ಡೆದಿತ್ತು.    

ಅಂತಿಮ ದರ್ಶನ
ಈಶ್ವರಯ್ಯನವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಡಿ. 31ರ ಬೆಳಗ್ಗೆ 8.30ರಿಂದ 9.30 ಗಂಟೆವರೆಗೆ  ಮಣಿಪಾಲ ವಿಬುಧಪ್ರಿಯನಗರದ ಸ್ವಗೃಹದಲ್ಲಿ ಇರಿಸಲಾಗುವುದು. 

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.