ಮಣಿಪಾಲದಲ್ಲಿ ಸರಣಿ ಅಪಘಾತ: ಕಾರು, ಬೈಕ್ ಸೇರಿ ಮೂರು ವಾಹನಗಳಿಗೆ ಹಾನಿ
Team Udayavani, Apr 10, 2022, 1:37 PM IST
ಉಡುಪಿ: ಮಣಿಪಾಲದಲ್ಲಿ ನಿನ್ನೆ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೂರು ಕಾರು ಹಾಗೂ ಒಂದು ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರುಗಳಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಶನಿವಾರ ತಡರಾತ್ರಿ ಸಮಯಕ್ಕೆ ಮಣಿಪಾಲ ಡಿಸಿ ಆಫೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಅಪಘಾತದ ಭೀಕರತೆಗೆ ಒಂದು ಇನ್ನೋವಾ, ಒಂದು ಹುಂಡೈ ವೆರ್ನಾ, ಒಂದು ಎಕ್ಸ್ಯು ವಿ ಕಾರು ಮತ್ತು ಒಂದು ಮೋಟಾರ್ ಬೈಕ್ ನಜ್ಜುಗುಜ್ಜಾಗಿದೆ.
ಮೂಲಗಳ ಪ್ರಕಾರ ಇನ್ನೋವಾ ಕಾರು ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ ಡಿಸಿ ಆಫೀಸ್ ಕಡೆಗೆ ಸಂಚರಿಸುತಿತ್ತು ಮಣಿಪಾಲದ ಪೋಲಾರ್ ಬೇರ್ ಬಳಿ ಇರುವ ಡಿವೈಡರ್ ನಲ್ಲಿ ಓರ್ವ ಬುಲೆಟ್ ಬೈಕ್ ಸವಾರ ಒಮ್ಮೆಲೇ ಯೂ ಟರ್ನ್ ತೆಗೆದುಕೊಳ್ಳುವಾಗ ಬೈಕ್ ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಇನ್ನೋವಾ ಕಾರು ರಸ್ತೆ ಬದಿಯಲ್ಲಿರುವ ಮನೆಯ ಎದುರಿನ ಚರಂಡಿಗೆ ಉರುಳಿ ಬಿದ್ದಿದೆ. ಈ ಅಪಘಾತದ ಬಗ್ಗೆ ಮಾಹಿತಿ ಪಡೆದ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತಿದ್ದ ಪ್ರಯಾಣಿಕರ ಸಹಪಾಠಿಗಳು ಮತ್ತೊಂದು ಎಕ್ಸ ಯು ವಿ ಕಾರು ಮತ್ತು ಬೈಕ್ ನಲ್ಲಿ ಸ್ಥಳಕ್ಕೆ ಆಗಮಿಸಿ ತಮ್ಮ ಕಾರು ಹಾಗೂ ಬೈಕ್ ಅನ್ನು ರಸ್ತೆ ಪಕ್ಕ ನಿಲ್ಲಿಸಿದ್ದರು. ಇದೇ ಸಂಧರ್ಭದಲ್ಲಿ ಅತಿವೇಗದಿಂದ ಆಗಮಿಸಿದ ಹುಂಡೈ ವೆರ್ನಾ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯ ತಡೆಗೋಡೆಗೆ ಹೊಡೆದು, ರಸ್ತೆ ಪಕ್ಕ ನಿಲ್ಲಿಸಿದ್ದ ಎಕ್ಸ್ ಯು ವಿ ಕಾರು ಮತ್ತು ಬೈಕ್ ನ ಮೇಲೇರಿ ನಿಂತಿದೆ.
ಸ್ಥಳದಲ್ಲಿದ್ದ ಸಾರ್ವಜನಿಕರು ಕೂಡಲೇ ಕಾರ್ಯಪ್ರವರ್ತರಾಗಿ ತಕ್ಷಣವೇ ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗಿನ ವರೆಗೂ ಎಲ್ಲಾ ವಾಹನಗಳು ರಸ್ತೆ ಬದಿಯಲ್ಲಿಯೇ ಇದ್ದು ಅಪಾರ ಸಂಖ್ಯೆಯ ಸಾರ್ವಜನಿಕರು ವೀಕ್ಷಣೆ ಮಾಡುತಿದ್ದಾರೆ. ಘಟನೆಯಿಂದಾಗಿ ರಸ್ತೆ ಬದಿಯಲ್ಲಿರುವ ಮೂರು ಮನೆಗಳ ತಡೆಗೋಡೆಗಳಿಗೆ ಕೂಡಾ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?