ಉಡುಪಿ: ಅಂಬಲಪಾಡಿ ಹೆದ್ದಾರಿಯಲ್ಲಿ ಸರಣಿ ಅಪಘಾತ: ನಾಲ್ವರಿಗೆ ಗಾಯ
Team Udayavani, Jan 5, 2023, 6:10 PM IST
ಉಡುಪಿ : ಅಂಬಲಪಾಡಿ ಜಂಕ್ಷನ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಭಿನಂದನಾ ಪೆಟ್ರೋಲ್ ಬಂಕ್ ಎದುರು ಸರಣಿ ಅಪಘಾತ ಸಂಭವಿಸಿ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿರುವ ಘಟನೆ ಗುರುವಾರ ಸಂಭವಿಸಿದೆ.
ಸರಕು ತುಂಬಿದ ಲಾರಿ ಹಾಗೂ 3 ಪ್ರಯಾಣಿಕರ ಕಾರುಗಳ ಮಧ್ಯೆ ಈ ಅಪಘಾತ ಸಂಭವಿಸಿದ್ದು, ಕಾರುಗಳಲ್ಲಿದ್ದ ಇಬ್ಬರು ಮಹಿಳೆಯರು, ಓರ್ವ ಗಂಡಸು ಹಾಗೂ ಒಂದು ಮಗು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಶು ಶೆಟ್ಟಿ ಅವರು ಸಾರ್ವಜನಿಕರ ಸಹಕಾರದೊಡನೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಹಾಗೂ ಅಪಘಾತಕ್ಕೀಡಾದ ವಾಹನಗಳನ್ನು ಹೆದ್ದಾರಿಯಿಂದ ತೆರವುಗೊಳಿಸಿ ಹೈವೆ ಬ್ಲಾಕ್ ಆಗದಂತೆ ಶ್ರಮಿಸಿದರು. ಅಪಘಾತ ಭೀಕರತೆ ಎಷ್ಟಿತ್ತೆಂದರೆ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿವೆ.
ಅಂಬಲಪಾಡಿ ಜಂಕ್ಷನ್ ಪರಿಸರದಲ್ಲಿ ದಿನ ನಿತ್ಯ ಎಂಬಂತೆ ಅಪಘಾತಗಳು ಸಂಭವಿಸುತ್ತಿವೆ. ಹಲವಾರು ಮಂದಿ ಮೃತ ಪಟ್ಟಿದ್ದಾರೆ. ಈ ಪರಿಸರದಲ್ಲಿ ಮೇಲ್ಸೇತುವೆ ನಿರ್ಮಿಸಬೇಕು ಎಂಬ ಸಾರ್ವಜನಿಕರ ಹಲವಾರು ದಶಕಗಳ ಬೇಡಿಕೆ ಇನ್ನೂ ಈಡೇರಿಲ್ಲ.
ಇದನ್ನೂ ಓದಿ: ಸಿದ್ಧೇಶ್ವರ ಶ್ರೀಗಳ ಚಿತಾಭಸ್ಮ ಸಂಗ್ರಹ: ಕೂಡಲಸಂಗಮ, ಗೋಕರ್ಣದಲ್ಲಿ ವಿಸರ್ಜನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
MUST WATCH
ಹೊಸ ಸೇರ್ಪಡೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ