ಅನ್ನಭಾಗ್ಯಕ್ಕೆ ಸರ್ವರ್‌ ಸಂಕಟ :ಗ್ರಾಮೀಣ ಭಾಗದಲ್ಲಿ ಸಮಸ್ಯೆ , ಪಡಿತರ ವಿತರಣೆಗೆ ತೊಡಕು


Team Udayavani, Dec 25, 2020, 6:20 AM IST

ಅನ್ನಭಾಗ್ಯಕ್ಕೆ ಸರ್ವರ್‌ ಸಂಕಟ :ಗ್ರಾಮೀಣ ಭಾಗದಲ್ಲಿ ಸಮಸ್ಯೆ , ಪಡಿತರ ವಿತರಣೆಗೆ ತೊಡಕು

ಕಾರ್ಕಳ: ಪಡಿತರ ವಿತರಣೆ ಸಮಸ್ಯೆಗಳಿಗೆ ಕೊನೆಯೇ ಇಲ್ಲ ಎನ್ನು ವಂತಾಗಿದೆ. ಈಗ ಪಡಿತರ ವಿತರಣೆಗೆ ಸರ್ವರ್‌ ಸಮಸ್ಯೆ ಅಡ್ಡಿಯಾಗುತ್ತಿದ್ದು, ಗ್ರಾಮೀಣ ಭಾಗದ ಜನ ನಿತ್ಯದ ಕೆಲಸ ಕಾರ್ಯ ಬಿಟ್ಟು ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಪಡಿತರ ವಿತರಣೆಯ ಬಯೋಮೆಟ್ರಿಕ್‌ ವಿಧಾನದಲ್ಲಿ ಪದೇ ಪದೆ ಕಂಡುಬರುತ್ತಿರುವ ತಾಂತ್ರಿಕ ಸಮಸ್ಯೆ ಇಂದಿಗೂ ಮುಂದುವರಿದಿದೆ. ಗ್ರಾಮೀಣ ಭಾಗಗಳಲ್ಲಿಯೇ ಈ ಸಮಸ್ಯೆ ಹೆಚ್ಚು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವೆಬ್‌ಸೈಟ್‌ನ ತಾಂತ್ರಿಕ ದೋಷದಿಂದ ಸದಾ ಕಾಲ ಸರ್ವರ್‌ ಬಿಝಿ ಬರುತ್ತಿದೆ. ನ್ಯಾಯಬೆಲೆ ಅಂಗಡಿಯವರು ಪಡಿತರ ಚೀಟಿದಾರರಿಗೆ ತಾಂತ್ರಿಕ ಕಾರಣ ಹೇಳಿ ಸುಸ್ತಾಗಿದ್ದಾರೆ. ದಾಸ್ತಾನಿದ್ದರೂ ಸಕಾಲದಲ್ಲಿ ವಿತರಣೆಗೆ ಕಷ್ಟವಾಗುತ್ತಿದೆ. ಸಾಲಿನಲ್ಲಿ ಕಾದು ನಿಂತರೂ ನ್ಯಾಯಬೆಲೆ ಅಂಗಡಿಯವರು ಬೆರಳಚ್ಚು ಪಡೆದುಕೊಳ್ಳುತ್ತಿಲ್ಲ, ಸಬೂಬು ಹೇಳುತ್ತಾರೆ, ಪಡಿತರ ಸಿಗುವಾಗ ತೀರಾ ವಿಳಂಬವಾಗುತ್ತಿದೆ ಎಂಬುದು ಗ್ರಾಹಕರ ಅಳಲು.

ಬಯೋಮೆಟ್ರಿಕ್‌ ವಿಧಾನದ ಬದಲು ಮೊಬೈಲ್‌ ಒಟಿಪಿ ಕೊಟ್ಟು ಪಡಿತರ ನೀಡುವ ಮಾರ್ಗ ಅನುಸರಿಸಿದರೆ ಸಮಸ್ಯೆ ಬಗೆಹರಿಯುತ್ತದೆ. ನಮಗೆ ತೊಂದರೆಯಾಗದಂತೆ ವಿತರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎನ್ನುತ್ತಾರೆ ನಾಗರಿಕರು. ಈಗಿನ ಬಯೋಮೆಟ್ರಿಕ್‌ ವಿಧಾನ ತ್ರಾಸದಾಯಕವಾಗಿದೆ. ಕೆಲವು ಹಿರಿಯರ ಬೆರಳಚ್ಚು ಸ್ವಿಕಾರವಾಗುತ್ತಿಲ್ಲ. ಪಕ್ಕದ ಕೇರಳದಲ್ಲಿ ಒಟಿಪಿ ಮೂಲಕ ಪಡಿತರ ವಿತರಣೆಯಾಗುತ್ತಿದ್ದು, ಇಲ್ಲೂ ಅದೇ ವಿಧಾನ ಅನುಸರಿಸಬೇಕು ಎನ್ನುವ ಒತ್ತಾಯವಿದೆ.

ಬಯೋಮೆಟ್ರಿಕ್‌ ಹೊರತಾದ ಆಯ್ಕೆಗಳು ಮೂರ್‍ನಾಲ್ಕು ಇದ್ದರೂ ಅನುಸರಿಸದಿರುವುದರ ಹಿಂದೆ ಅಧಿಕಾರಿಗಳ ನಿರ್ಲಕ್ಷ ಇದೆ ಎನ್ನುತ್ತಾರೆ ನ್ಯಾಯಬೆಲೆ ಅಂಗಡಿಯವರೊಬ್ಬರು.

ಸಮಸ್ಯೆನಿವಾರಣೆಯಾಗಿಲ್ಲ
ದಕ್ಷಿಣ ಕನ್ನಡದಲ್ಲಿ ಸಮಸ್ಯೆ ಅಷ್ಟೇನೂ ಇಲ್ಲ ಎಂದು ಜಿಲ್ಲೆಯ ಆಹಾರ ಇಲಾಖೆ ಅಧಿಕಾರಿ ರಮ್ಯಾ ತಿಳಿಸಿದ್ದಾರೆ. ಆದರೆ ನ್ಯಾಯಬೆಲೆ ಅಂಗಡಿಯವರು ಮತ್ತು ಪಡಿತರ ಚೀಟಿದಾರರ ಪ್ರಕಾರ ಸಮಸ್ಯೆ ಇದೆ; ಸರ್ವರ್‌ ಆಗಾಗ ಕೈಕೊಡುತ್ತಿದೆ.

ಸರ್ವರ್‌ ಸಮಸ್ಯೆ ಬಗ್ಗೆ ಇನ್ನಿತರ ಜಿಲ್ಲೆಗ ಳಿಂದಲೂ ಮಾಹಿತಿ ಲಭ್ಯವಾಗಿದೆ. ಆಯಾ ತಿಂಗಳ ಪಡಿತರ ಹಂಚಿಕೆಯನ್ನು ತಿಂಗಳ ಅಂತ್ಯದೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕಿರುವುದರಿಂದ ಸಮಸ್ಯೆ ಹೆಚ್ಚು ಇರುವ ಜಿಲ್ಲೆಗಳಲ್ಲಿ ಮ್ಯಾನುವಲ್‌ ಆಗಿ ವಿತರಿಸಿ ವಿವರಗ ಳನ್ನು ದತ್ತಾಂಶದಲ್ಲಿ ಅಪ್‌ಲೋಡ್‌ ಮಾಡುವಂತೆ ಜಿಲ್ಲೆಗಳ ಜಂಟಿ ಉಪನಿರ್ದೇಶಕರಿಗೆ ಸೂಚಿಸಲಾಗಿದೆ.
-ಡಾ| ಶಮ್ಲಾ ಇಕ್ಬಾಲ್‌, ಆಯುಕ್ತರು, ಆಹಾರ ಇಲಾಖೆ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.