ರಾಜ್ಯಾದ್ಯಂತ ಮಂಗಳವಾರವೂ ಶೂನ್ಯನೋಂದಣಿ!

ಉಪನೋಂದಣಿ ಕಚೇರಿಯಲ್ಲಿ ಸರ್ವರ್‌ ಸಮಸ್ಯೆ

Team Udayavani, Feb 19, 2020, 6:07 AM IST

skin-37

ಉಡುಪಿ: ರಾಜ್ಯದ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಮಂಗಳವಾರವೂ ನೋಂದಣಿಗೆ ಸರ್ವರ್‌ ಕೈ ಕೊಟ್ಟಿದ್ದು, ದಾಖಲೆಗಳ ನೋಂದಣಿಗಾಗಿ ಕಚೇರಿಗೆ ಬಂದ ಜನ ದಿನವಿಡೀ ಕಾಯುವ ಸ್ಥಿತಿ ನಿರ್ಮಾಣವಾಯಿತು. ಶನಿವಾರವೇ ಸರ್ವರ್‌ ನಿಧಾನಗತಿಯಲ್ಲಿ ಕೆಲಸ ಮಾಡುತ್ತಿತ್ತು. ಸೋಮವಾರ ಬೆಳಗ್ಗಿನಿಂದ ಕಾರ್ಯಾಚರಣೆ ಸಂಪೂರ್ಣ ಸ್ಥಗಿತವಾಗಿತ್ತು. ಮಂಗಳವಾರ ಅಪರಾಹ್ನ 3.15ಕ್ಕೆ ಮತ್ತೆ ನಿಧಾನವಾಗಿ ಸರ್ವರ್‌ ಕಾರ್ಯಾರಂಭಿಸಿತು. ಆದರೂ ಇಸಿ ಮತ್ತು ಸ್ಕೇನ್‌ ಡಾಟಾಗಳು ಸ್ಟೇಟ್‌ ಡಾಟಾಕ್ಕೆ ರವಾನೆ ಆಗುತ್ತಿರಲಿಲ್ಲ.

ಮಂಗಳವಾರವೂ ಶೂನ್ಯ!
ಉಡುಪಿ ನೋಂದಣಾಧಿಕಾರಿ ಕಚೇರಿಯಲ್ಲಿ ಸಾಮಾನ್ಯವಾಗಿ ದಿನವೊಂದಕ್ಕೆ 250 ವಿವಿಧ ಸೇವೆಗಳ ನೋಂದಣಿಯಾಗುತ್ತಿತ್ತು. ಸೊಮವಾರ ಮತ್ತು ಮಂಗಳವಾರ ಸಂಜೆ ತನಕ ಒಂದೇ ಒಂದು ನೋಂದಣಿ ಆಗಿರಲಿಲ್ಲ. ಉಪನೋಂದಣಿ ಕಚೇರಿಯಲ್ಲಿ ನೂರಾರು ಮಂದಿ ದೂರದ ಊರುಗಳಿಂದ ಬಂದವರು ಸಂಜೆ ತನಕವೂ ತಮ್ಮ ಕೆಲಸ ಆಗಲಿಲ್ಲ ಎಂದು ಕಾದು ಕುಳಿತು ಅಳಲು ತೋಡಿಕೊಳ್ಳುತ್ತಿದ್ದರು.

ಬಹುತೇಕ ಎಲ್ಲವೂ ಸ್ತಬ್ಧ
ಆಸ್ತಿ ಖರೀದಿ, ಮಾರಾಟ, ವಿವಾಹ ನೋಂದಣಿ, ಬ್ಯಾಂಕ್‌ ಲೋನ್‌ಗಳಿಗೆ ದಾಖಲೆ, ಇಸಿ, ಹಳೆಯ ಪಹಣಿ, ಭೂಮಿ ಮನೆ ದಾಖಲೆಗಳ ಸೇವೆಗಳು ಸೇರಿ ಬಹುತೇಕ ಸೇವೆಗಳು ಸ್ಥಗಿತಗೊಂಡಿದ್ದರಿಂದ ಸಾರ್ವಜನಿಕರು ಬಹಳಷ್ಟು ತೊಂದರೆ ಅನುಭವಿಸಿದರು. ಸಮಸ್ಯೆ ನಿವಾರಣೆಗೆ ಅಧಿಕಾರಿಗಳು ತತ್‌ಕ್ಷಣ ಮುಂದಾಗಬೇಕು ಎಂದು ವಕೀಲ ಚಂದ್ರಶೇಖರ ಶೆಟ್ಟಿ ತಿಳಿಸಿದರು.

ಸಮಸ್ಯೆ ನಿವಾರಿಸದಿದ್ದರೆ ಧರಣಿ
ರಾಜ್ಯಾದ್ಯಂತ ತಿಂಗಳಿಂದ ಸರ್ವರ್‌ ಸಮಸ್ಯೆ ಇದೆ. ಪಡಿತರ ಚೀಟಿ, ಆಧಾರ್‌ ಕಾರ್ಡ್‌, ಸರಕಾರಿ ಕೆಲಸಗಳನ್ನು ಮಾಡಿಸಲು ಸಾಧ್ಯವಾಗದೆ ಜನಸಾಮಾನ್ಯರು ತೊಂದರೆ ಅನಿಭವಿಸುತ್ತಿದ್ದಾರೆ. ಫೆ. 15ರಿಂದ 18ರ ವರೆಗೆ ಸರ್ವರ್‌ ಇಲ್ಲದೆ ಜನ ಸಂಕಷ್ಟಕ್ಕೆ ಒಳಗಾಗಿದ್ದರು. ಕೂಡಲೇ ಸರ್ವರ್‌ ಸಮಸ್ಯೆ ನಿವಾರಣೆಗೆ ಸರಕಾರ ಮುಂದಾಗಬೇಕು. ಇಲ್ಲವಾದಲ್ಲಿ ತಾಲೂಕು ಕಚೇರಿಗಳ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು ಎಚ್ಚರಿಸಿದ್ದಾರೆ.

ಹೊಸ ತಂತ್ರಜ್ಞಾನದಿಂದ ಸಮಸ್ಯೆ
ನೋಂದಣಿ ಕಚೇರಿಯ ವಿದ್ಯುನ್ಮಾನ ವ್ಯವಸ್ಥೆಗೆ ಫೆ. 2ರಂದು ಹೊಸ ತಂತ್ರಜ್ಞಾನವಾಗಿ 6.8 ಸರ್ವಿಸ್‌ ಪ್ಯಾಚ್‌ ಸಿಸ್ಟಮ್‌ ಅಳವಡಿಸಲಾಗಿದೆ. ಅನಂತರದ ದಿನಗಳಲ್ಲಿ ಸರ್ವರ್‌ ಸಮಸ್ಯೆ ಹೆಚ್ಚಳಗೊಂಡಿದೆ ಅನ್ನುವ ಅಂಶ ಬೆಳಕಿಗೆ ಬಂದಿದೆ. ಹಿಂದೆ ದಿನವೊಂದಕ್ಕೆ 50ಕ್ಕೂ ಮೇಲ್ಪಟ್ಟು ದಸ್ತಾವಣೆ ದಾಖಲು ಆಗುತ್ತಿತ್ತು. ಹೊಸ ಪ್ಯಾಚ್‌ ಅಳವಡಿಸಿದ ಬಳಿಕ ಇಸಿ ಮತ್ತು ದೃಢೀಕೃತ ನಕಲು ರಶೀದಿ ತ್ವರಿತವಾಗಿ ಆಗದೆ ಸಮಸ್ಯೆ ತಂದೊಡ್ಡಿದೆ. ಒಟಿಪಿ ಕೂಡ ವೇಗವಾಗಿ ಅಪ್‌ಲೋಡ್‌ ಆಗುತ್ತಿಲ್ಲ. ಈಗ ದಿನದಲ್ಲಿ 35ರಿಂದ 40ರಷ್ಟು ಮಾತ್ರ ಸಾಧ್ಯವಾಗುತ್ತಿದೆ ಎನ್ನುತ್ತಾರೆ ಅಧಿಕಾರಿಗಳು.

ಉಪ ನೋಂದಣಿ ಕಚೇರಿಗಳಲ್ಲಿ ಸರ್ವರ್‌ ಸಮಸ್ಯೆಯಿಂದ ತೊಂದರೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಈ ಕುರಿತು ಬುಧವಾರವೇ ಅಧಿಕರಾರಿಗಳ ಜತೆ ಮಾತನಾಡಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುವೆ.
– ಕೋಟ ಶ್ರೀನಿವಾಸ ಪೂಜಾರಿ, ಸಚಿವರು

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.