ಸರ್ವರ್ ಸಮಸ್ಯೆ: ತಿಂಗಳ ರೇಶನ್ ಕಟ್
Team Udayavani, Jun 25, 2019, 5:26 AM IST
ಉಡುಪಿ: ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆಯಿಂದ ಅನ್ನಭಾಗ್ಯ ಯೋಜನೆ ಯಡಿ ಸಾಮಗ್ರಿ ಪಡೆಯಲು ಜನರು ಪರದಾಡುತ್ತಿದ್ದಾರೆ.
ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ಪದ್ಧತಿ ಅಳವಡಿಸಿ ವರ್ಷವೇ ಕಳೆದಿದೆ. ಅಂದಿನಿಂದ ಇಂದಿನ ವರೆಗೆ ಪಡಿತರ ವಿತರಣೆಯಲ್ಲಿ ಒಂದಲ್ಲ ಒಂದು ಸಮಸ್ಯೆ. ಪ್ರಾರಂಭದಲ್ಲಿ ಫಲಾನುಭವಿಗಳ ಬೆರಳಚ್ಚು ಸಮಸ್ಯೆ ಯಿತ್ತು. ಈಗ 3 ತಿಂಗಳುಗಳಿಂದ ಸರ್ವರ್ ಸಮಸ್ಯೆ.
ಸಮಸ್ಯೆಗಳ ಆಗರ
ನ್ಯಾಯಬೆಲೆ ಅಂಗಡಿ ಸಮಸ್ಯೆಗಳ ಆಗರವಾಗಿದೆ. ಸರಿಯಾದ ಸಮಯಕ್ಕೆ ಪಡಿತರ ಸಿಗದೆ ಜನರು ಸಿಬಂದಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಒಮ್ಮೆ ಸರ್ವರ್ ಸಂಪರ್ಕವನ್ನು ಕಳೆದುಕೊಂಡರೆ ಮತ್ತೆ ಸಂಪರ್ಕ ಸಾಧಿಸಲು ಅರ್ಧ ಗಂಟೆಯಾದರೂ ಬೇಕು. ಕೆಲವೊಮ್ಮೆ ದಿನಪೂರ್ತಿ ಸಂಪರ್ಕ ಸಿಗದೆ ಇರುವುದೂ ಇದೆ.
ಪಡಿತರ ಸಾಮಗ್ರಿ ಸಿಗುತ್ತಿಲ್ಲ
ಸರ್ವರ್ ದೋಷದಿಂದ ಗ್ರಾಹಕರು ದಿನಪೂರ್ತಿ ಸರತಿಯಲ್ಲಿ ಕಾಯಬೇಕಾಗಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 4ರ ವರೆಗೆ ಕಾದರೂ ಸಾಮಗ್ರಿಗಳು ಸಿಗುತ್ತಿಲ್ಲ. ಇದರಿಂದಾಗಿ ದಿನಗೂಲಿ ಕಾರ್ಮಿಕರ ದಿನವೇ ವ್ಯರ್ಥ ವಾಗುತ್ತಿದೆ. ಆಯಾ ತಿಂಗಳ ಪಡಿತರ ಆಯಾ ತಿಂಗಳಲ್ಲಿ ಪಡೆಯಬೇಕಾಗಿರುವುದರಿಂದ ಸಾರ್ವಜನಿಕರು ಪಡಿತರದಿಂದ ವಂಚಿತವಾಗುತ್ತಿದ್ದಾರೆ.
ಸಿಬಂದಿಗೆ ಸಂಕಷ್ಟ
ಸರ್ವರ್ ಸಮಸ್ಯೆಯಿಂದ ಪಡಿತರ ಸಾಮಗ್ರಿಯನ್ನು ನಿಗದಿ ಸಮಯದೊಳಗೆ ನೀಡಲು ಸಾಧ್ಯವಾಗುತ್ತಿಲ್ಲ. ಸರ್ವರ್ ಸಮಸ್ಯೆಯಿಂದ ನಿತ್ಯ 15 ಜನರಿಗೆ ಪಡಿತರ ವಿತರಿಸಲು ಸಾಧ್ಯವಾಗುತ್ತಿಲ್ಲ.
ಅಧಿಕಾರಿಗಳ ಪರದಾಟ!
ಸರ್ವರ್ ಸಮಸ್ಯೆಯಿಂದ ಹೆಸರು ಸೇರ್ಪಡೆಯಾಗಿ ಬಂದಿರುವ ಹೊಸ ಕಾರ್ಡ್ ಪ್ರತಿಯನ್ನು ಮುದ್ರಿಸಲು ಅಧಿಕಾರಿಗಳು ಪರದಾಡುತ್ತಿದ್ದಾರೆ. ತಾಲೂಕು ಕಚೇರಿಯಲ್ಲಿ ಸಾರ್ವಜನಿಕರು ನಿತ್ಯ ಗಂಟೆಗಟ್ಟಲೆ ಕಾಯಬೇಕಾಗಿದೆ. ಫಲಾನುಭವಿಗಳು ಹೊಸ ಕಾರ್ಡ್ ಪ್ರತಿ ಸಿಗದೆ ಇರುವುದರಿಂದ ರೇಶನ್ನಿಂದ ವಂಚಿತರಾಗುತ್ತಿದ್ದಾರೆ.
ಎರಡು ತಿಂಗಳ ರೇಶನ್ ಸಿಕ್ಕಿಲ್ಲ!
ಪಡಿತರ ಪಡೆಯಲು ತಿಂಗಳಿಗೆ ಮೂರು ಬಾರಿ ನ್ಯಾಯಬೆಲೆ ಅಂಗಡಿಗೆ ಹೋಗಬೇಕಾಗಿದೆ. ಕೆಲಸಕ್ಕೆ ರಜೆ ಮಾಡಿ ರೇಶನ್ ತರುವ ಸ್ಥಿತಿ. ಸರ್ವರ್ ಸಮಸ್ಯೆಯಿಂದ ಎರಡು ತಿಂಗಳುಗಳಿಂದ ರೇಶನ್ ಸಿಕ್ಕಿಲ್ಲ.
– ಸುಚಿತ್ರಾ, ಉಪ್ಪಿನಕೋಟೆ
ರಾಜ್ಯದ ಸಮಸ್ಯೆ
ನ್ಯಾಯಬೆಲೆ ಅಂಗಡಿ ಸರ್ವರ್ ಸಮಸ್ಯೆ ಜಿಲ್ಲೆ ಯಲ್ಲಿ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ಇದೆ.
-ಡಾ| ನಾಗರಾಜ್ ಎಲ್., ಉಪ ನಿರ್ದೇಶಕರು, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ