ವರ್ಷದಲ್ಲಿ 40 ಎಸ್‌ಎಲ್ಆರ್‌ಎಂ ಘಟಕ ಸ್ಥಾಪನೆ ಗುರಿ

ತ್ಯಾಜ್ಯ ಮುಕ್ತ ಸಂಕಲ್ಪಕ್ಕೆ ಬೇಕಿದೆ ಸಹಕಾರ

Team Udayavani, Jun 29, 2019, 5:41 AM IST

SLRM

ಸಾಂದರ್ಭಿಕ ಚಿತ್ರ.

ಉಡುಪಿ: ಜಿಲ್ಲಾಡಳಿತ ತ್ಯಾಜ್ಯ ಮುಕ್ತ ಉಡುಪಿ ಮಿಷನ್‌ ಸಂಕಲ್ಪ ಹೊಂದಿದ್ದರೂ ಸೂಕ್ತ ಮಾಹಿತಿ ಕೊರತೆಯಿಂದಾಗಿ ಜನರು ಎಸ್‌ಎಲ್ಆರ್‌ಎಂನಂತಹ ಘಟಕಗಳನ್ನು ಸ್ಥಾಪಿಸಲು ಹಿಂದೇಟು ಹಾಕುತ್ತಿದ್ದಾರೆ.

ಅಲೆವೂರು ಗ್ರಾಮ ಪಂಚಾಯತ್‌ ಹಾಗೂ ಸಾೖಬ್ರಕಟ್ಟೆ ಮುಖ್ಯಪೇಟೆಯಲ್ಲಿರುವ ಯಡ್ತಾಡಿ ಗ್ರಾ.ಪಂ. ಕಚೇರಿ ಪಕ್ಕದಲ್ಲಿ ಎಸ್‌ಎಲ್ಆರ್‌ಎಂ ಘಟಕ ಸ್ಥಾಪಿಸುವ ಕುರಿತು ಸ್ಥಳೀಯಾಡಳಿತ ತಯಾರಿ ನಡೆಸಿದ್ದರೂ ಸ್ಥಳೀಯರು ಇದನ್ನು ವಿರೋಧಿಸುತ್ತಿದ್ದಾರೆ.

ಜಿಲ್ಲೆಯಲ್ಲಿರುವ ಎಲ್ಲ ಗ್ರಾ.ಪಂ. ವ್ಯಾಪ್ತಿಗೆ ಒಂದರಂತೆ ಈ ಘಟಕವನ್ನು ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ. ಈಗಾಗಲೇ ವಂಡ್ಸೆ, ವಾರಂಬಳ್ಳಿ, ಕುಕ್ಕುಂದೂರು, ಹೆಬ್ರಿ, ನಿಟ್ಟೆ ಸಹಿತ ಜಿಲ್ಲೆಯಲ್ಲಿ ಸುಮಾರು 51 ಗ್ರಾ.ಪಂ.ಗಳಲ್ಲಿ ಈ ಘಟಕ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ.

ವಿರೋಧ ಏಕೆ?
ಈ ಘಟಕ ಸಮರ್ಪಕವಾಗಿ ಕಾರ್ಯ ನಿರ್ವಹಿಸದಿದ್ದರೆ ಸಾವಿರಾರು ಜನ ವಾಸಿಸುವ ಪ್ರದೇಶದಲ್ಲಿ ತೊಂದರೆ ಉಂಟಾಗಬಹುದು ಎಂಬುದು ಜನರ ವಿರೋಧಕ್ಕೆ ಕಾರಣವಾಗಿದೆ. ಆದರೆ ಅನುಷ್ಠಾನಗೊಂಡ ಎಲ್ಲ ಕಡೆಯೂ ಈ ಘಟಕದ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ. ಅಲ್ಲದೆ ಇದರಿಂದ ಉತ್ತಮ ರೀತಿಯಲ್ಲಿ ತ್ಯಾಜ್ಯಗಳ ವಿಲೇವಾರಿ ನಡೆಯುತ್ತಿದೆ.

ಏನಿದು ಎಸ್‌ಎಲ್ಆರ್‌ಎಂ ಘಟಕ?
ಎಸ್‌ಎಲ್ಆರ್‌ಎಂ ಕಸವನ್ನು ಸಂಪನ್ಮೂಲವನ್ನಾಗಿ ಪರಿವರ್ತಿಸುವ ಒಂದು ಯೋಜನೆ. ಈ ಯೋಜನೆಯಡಿ ತರಬೇತಿ ಪಡೆದ ನುರಿತ ಕಾರ್ಯಕರ್ತರು ಪರಿಸರ ಸ್ನೇಹಿ ವಿಧಾನಗಳ ಮೂಲಕ ಕಸವನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಿ ಆದಾಯದ ಮೂಲವನ್ನಾಗಿ ಪರಿವರ್ತನೆ ಮಾಡುತ್ತಾರೆ. ಈ ವಿಧಾನದಲ್ಲಿ ಹಸಿ ತ್ಯಾಜ್ಯ ಮತ್ತು ಒಣ ತ್ಯಾಜ್ಯವನ್ನು ಪ್ರತ್ಯೇಕ ಪ್ರತ್ಯೇಕವಾಗಿ ನಿರ್ವಹಣೆ ಮಾಡಲಾಗುತ್ತದೆ.

ಎಸ್‌ಎಲ್ಆರ್‌ಎಂನಲ್ಲಿ ಏನು ಮಾಡ್ತಾರೆ?
ಪ್ರತ್ಯೇಕ ಪ್ರತ್ಯೇಕವಾಗಿ ಸಂಗ್ರಹಿಸಿದ ತ್ಯಾಜ್ಯವನ್ನು ಎಸ್‌ಎಲ್ಆರ್‌ಎಂ ಘಟಕಕ್ಕೆ ತರಲಾಗುತ್ತದೆ. ಅಲ್ಲಿಂದ ಹಸಿ ತ್ಯಾಜ್ಯವನ್ನು ವಿಂಗಡಿಸಿ ಗೋವುಗಳಿಗೆ ಆಹಾರವಾಗಿ ನೀಡಿ, ಉಳಿದ ತ್ಯಾಜ್ಯವನ್ನು ಕಾಂಪೋಸ್ಟ್‌ ಮಾಡಲಾಗುತ್ತದೆ. ಒಣ ತ್ಯಾಜ್ಯವನ್ನು ಪ್ಲಾಸ್ಟಿಕ್‌ ಚೀಲ, ಪ್ಲಾಸ್ಟಿಕ್‌ ವಸ್ತುಗಳು, ಪೇಪರ್‌, ರಟ್ಟು, ಲೆದರ್‌, ಮೆಟಲ್, ಗಾಜು, ಬಟ್ಟೆ, ಇಲೆಕ್ಟ್ರಾನಿಕ್‌ ವಸ್ತುಗಳು, ಥರ್ಮಕೋಲ್ ಇತ್ಯಾದಿ ಸುಮಾರು 18ರಿಂದ 20 ವಿಧವಾಗಿ ವಿಂಗಡಿಸಿ ಸ್ವಚ್ಛಗೊಳಿಸಿ, ತೂಕ ಮಾಡಿ ದಾಸ್ತಾನು ಕೊಠಡಿಯಲ್ಲಿ ಶೇಖರಿಸಲಾಗುತ್ತದೆ. ಅನಂತರದಲ್ಲಿ ವಿವಿಧ ರಿಸೈಕ್ಲಿಂಗ್‌ ಲಿಂಗ್‌ ಕಂಪೆನಿಗಳಿಗೆ ಮಾರಾಟ ಮಾಡಿ, ಬರುವ ಆದಾಯವನ್ನು ಎಸ್‌ಎಲ್ಆರ್‌ಎಂ ಘಟಕಗಳ ನಿರ್ವಹಣೆಗೆ ಬಳಸಲಾಗುತ್ತದೆ. ಈ ಮಹತ್ತರವಾದ ಕಾರ್ಯದಲ್ಲಿ ವೃತ್ತಿಪರ ತರಬೇತಿ ಪಡೆದ ಎಸ್‌ಎಲ್ಆರ್‌ಎಂ ಕಾರ್ಯಕರ್ತರ ಘನ ಮತ್ತು ದ್ರವ ನಿರ್ವಹಣಾ ಸಂಘಗಳು ಕರ್ತವ್ಯ ನಿರ್ವಹಿಸುತ್ತಿವೆ.

ಸ್ವಚ್ಛ ಪರಿಸರಕ್ಕೂ ಸಹಕಾರಿ
ಈ ರೀತಿಯಾಗಿ ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡುವುದರಿಂದ ಪರಿಸರ ಹಾಗೂ ಜೀವ ವೈವಿಧ್ಯದ ಸಂರಕ್ಷಣೆ ಮಾಡುವುದರ ಜತೆಗೆ ಸುಂದರ ಸ್ವಚ್ಛ ಪರಸರ ನಿರ್ಮಾಣ ಸಾಧ್ಯವಿದೆ.

ಹಸಿರು ಬಕೆಟ್‌
ಸಾರ್ವಜನಿಕರು ತರಕಾರಿ ಸಿಪ್ಪೆ, ಹಣ್ಣಿನ ಸಿಪ್ಪೆ, ಹೂವು, ಮೊಟ್ಟೆ ಚಿಪ್ಪು, ಉಳಿಕೆಯಾದ ಆಹಾರ ಪದಾರ್ಥ ಮುಂತಾದ ಹಸಿ ತ್ಯಾಜ್ಯವನ್ನು ಹಸಿರು ಬಣ್ಣದ ಬಕೆಟ್’ನಲ್ಲಿ ಶೇಖರಿಸಿಟ್ಟು, ಪ್ರತಿನಿತ್ಯ ನೀಡಬೇಕಾಗುತ್ತದೆ. ಅಥವಾ ಪೈಪ್‌ ಕಾಂಪೋಸ್ಟ್‌ ವಿಧಾನಗಳ ಮೂಲಕ ಮನೆಯ ಹಂತದಲ್ಲಿಯೇ ಸಾವಯವ ಗೊಬ್ಬರವನ್ನಾಗಿ ಮಾಡಿಕೊಳ್ಳಬಹುದು.

ಕೆಂಪು ಬಕೆಟ್‌
ಪ್ಲಾಸ್ಟಿಕ್‌ ಚೀಲ, ಪ್ಲಾಸ್ಟಿಕ್‌ ಬಾಟಲ್, ಪೇಪರ್‌, ರಟ್ಟು, ಬಾಟಲಿ, ಗಾಜು, ಬಟ್ಟೆ, ರಬ್ಬರ್‌, ಲೋಹ ಮುಂತಾದ ಒಣ ತ್ಯಾಜ್ಯಗಳನ್ನು (ಕೊಳೆಯದ ತ್ಯಾಜ್ಯ) ಕೆಂಪು ಬಣ್ಣದ ಬಕೆಟ್‌ನಲ್ಲಿ ಹಾಕಿ ನೀಡಬೇಕು. ವಾರಕ್ಕೊಮ್ಮೆ ಅಥವಾ 15 ದಿನಗಳಿಗೊಮ್ಮೆ ತ್ಯಾಜ್ಯ ಸಂಗ್ರಹಣೆ ಮಾಡುತ್ತಿದ್ದಲ್ಲಿ ತಮಗೆ ನೀಡಿರುವ ಬ್ಯಾಗ್‌ ನಲ್ಲಿ ಒಣ ತ್ಯಾಜ್ಯವನ್ನು ಸಂಗ್ರಹಿಸಿಟ್ಟು, ವಾಹನಕ್ಕೆ ನೀಡಬೇಕು.

ಸಹಕಾರ ಅಗತ್ಯ
ಈ ಯೋಜನೆ ಯಶಸ್ವಿಯಾಗಬೇಕಾದರೆ ಸಾರ್ವಜನಿಕರ ಸಹಕಾರ ಅಗತ್ಯ. ಸಾರ್ವ ಜನಿಕರು ತಾವು ಉತ್ಪಾದಿಸುವ ತ್ಯಾಜ್ಯವನ್ನು ಮೂಲದಲ್ಲಿಯೇ ಹಸಿ ಹಾಗೂ ಒಣ ಎಂಬುದಾಗಿ ವಿಂಗಡಿಸಿ ಎಸ್‌ಎಲ್‌ಆರ್‌ಎಂ ವಾಹನಕ್ಕೆ ನೀಡಬೇಕು.

ಜಿಲ್ಲೆಯಲ್ಲಿ ಯಶಸ್ವಿ ಅನುಷ್ಠಾನ
ಎಸ್‌ಎಲ್‌ಆರ್‌ಎಂ ಯೋಜನೆ ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ಅನುಷ್ಠಾನವಾಗುತ್ತಿದೆ. ಪ್ರತೀ ಶಾಲೆಯಲ್ಲೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗುತ್ತಿದೆ. ಪರಿಸರಸ್ನೇಹಿ ಯೋಜನೆಯಾಗಿದ್ದು, ಈ ವರ್ಷ 40 ಪಂಚಾಯತ್‌ಗಳಲ್ಲಿ ಘಟಕ ಸ್ಥಾಪಿಸಲು ರೂಪುರೇಷೆ ಸಿದ್ಧಪಡಿಸಲಾಗಿದೆ. ಜಿಲ್ಲೆಯಲ್ಲಿ ಈ ಯೋಜನೆ ಆರಂಭವಾಗಿ ಒಂದೂವರೆ ವರ್ಷ ಆಗುತ್ತಿದ್ದು, 35ರಿಂದ 40 ಲ.ರೂ.ಆದಾಯ ಬಂದಿದೆ. ಎಸ್‌ಎಲ್‌ಆರ್‌ಎಂ ಘಟಕದ ನಿರ್ವಹಣೆ, ಸಿಬಂದಿ ವೇತನಕ್ಕೆ ಇದನ್ನು ಬಳಸಿಕೊಳ್ಳಲಾಗುತ್ತಿದೆ.
-ಶ್ರೀನಿವಾಸ ರಾವ್‌, ಮುಖ್ಯ ಯೋಜನಾಧಿಕಾರಿ, ಉಡುಪಿ ಜಿ.ಪಂ.

-ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.