ಉತ್ತಮ ಬೆಲೆ ನಿರೀಕ್ಷೆಯಲ್ಲಿ ಸೇವಂತಿಗೆ ಬೆಳೆಗಾರರು

ಕೋವಿಡ್ ಹಿನ್ನೆಲೆ "ಹೆಮ್ಮಾಡಿ ಸೇವಂತಿಗೆ' ಬೆಳೆ ಪ್ರಮಾಣ ಕುಂಠಿತ

Team Udayavani, Jan 11, 2021, 12:10 PM IST

ಉತ್ತಮ ಬೆಲೆ ನಿರೀಕ್ಷೆಯಲ್ಲಿ ಸೇವಂತಿಗೆ ಬೆಳೆಗಾರರು

ಕುಂದಾಪುರ: ಹೆಮ್ಮಾಡಿ ಸೇವಂತಿಗೆಯು ಅರಳಿ ನಿಂತಿದ್ದು, ಕೊಯ್ಯಲು ಸಿದ್ಧವಾಗಿದೆ. ಆದರೆ ಕೋವಿಡ್ ಅನಿಶ್ಚಿತತೆ ಹಿನ್ನೆಲೆಯಲ್ಲಿ ಈ ಬಾರಿ ಹೆಮ್ಮಾಡಿ ಸೇವಂತಿಗೆ ಕಡಿಮೆ ಪ್ರಮಾಣದಲ್ಲಿ ಬೆಳೆದಿರುವುದರಿಂದ ಈ ಬಾರಿ ಸೇವಂತಿಗೆ ಬೆಳೆಗಾರರರು ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದಾರೆ.

ಕೋವಿಡ್ ಸಂಕಷ್ಟದಿಂದಾಗಿ ಈ ವರ್ಷವೂ ಕುಂದಾಪುರ ಭಾಗದ ದೇವಸ್ಥಾನಗಳ ವಾರ್ಷಿಕ ಜಾತ್ರೆ, ದೈವಸ್ಥಾನಗಳ ಕೆಂಡೋತ್ಸವ ಅದ್ದೂರಿಯಾಗಿ ನಡೆಯುವುದು ಅನುಮಾನ ಎನ್ನುವ ಕಾರಣಕ್ಕೆ, ಹೆಚ್ಚು ಹೂವು ಬೆಳೆದಲ್ಲಿ, ಜಾತ್ರೆಗಳಿಗೆ ಅವಕಾಶವಿಲ್ಲವಾದರೆ ನಷ್ಟವಾಗಲಿದೆ ಎನ್ನುವ ಕಾರಣಕ್ಕೆ ಹೆಚ್ಚೆಚ್ಚು ಹೂವು ಬೆಳೆಯುತ್ತಿದ್ದ ಬೆಳೆಗಾರರು ಈ ಬಾರಿ ಕಡಿಮೆ ಬೆಳೆದಿದ್ದಾರೆ.

ಹೆಮ್ಮಾಡಿ ಸೇವಂತಿಗೆ ಮಾರಣಕಟ್ಟೆಯ ಬ್ರಹ್ಮಲಿಂಗೇಶ್ವರ ದೇವರಿಗೆ ಇಷ್ಟದ ಹೂವು. ಸೇವಂತಿಗೆ ಬೆಳೆಗಾರರು ತಮ್ಮಲ್ಲಿ ಬೆಳೆದ ಹೂವನ್ನು ಮೊದಲಿಗೆ ಮಕರ ಸಂಕ್ರಮಣದಂದು ನಡೆಯುವ ಮಾರಣಕಟ್ಟೆಯ ಜಾತ್ರೆಯಂದು ಬ್ರಹ್ಮಲಿಂಗೇಶ್ವರನಿಗೆ ಅರ್ಪಿಸಿದ ಬಳಿಕವೇ ಮಾರಾಟಕ್ಕೆ ಮುಂದಾಗುವುದು ವಾಡಿಕೆ.

ಹೂವು ಮಾರಾಟಕ್ಕೆ ಅವಕಾಶ :

ವಾರ್ಷಿಕ ಜಾತ್ರೆ, ಕೆಂಡ ಸೇವೆಗಳಲ್ಲಿ ಹೂವು ಮಾರಾಟಕ್ಕೆ ಅವಕಾಶ ನೀಡಬೇಕು ಎನ್ನುವುದಾಗಿ ಹೆಮ್ಮಾಡಿ ಸೇವಂತಿಗೆ ಬೆಳೆಗಾರರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಅವರಿಗೆ ಮನವಿ ಸಲ್ಲಿಸಿದ್ದು, ಅವರು ಕೂಡಲೇ ಈ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದು ಸಹಕರಿಸುವಂತೆ ಸೂಚಿಸಿದ್ದು, ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದು ಬೆಳೆಗಾರರಿಗೆ ಸ್ವಲ್ಪ ಮಟ್ಟಿಗೆ ಸಮಾಧಾನ ತಂದಿದೆ.

ಹೆಮ್ಮಾಡಿ, ಕಟ್‌ಬೆಲ್ತೂರು, ಕನ್ಯಾನ ಗ್ರಾಮಗಳ ಅಂದಾಜು 22 ಎಕರೆ ಪ್ರದೇಶಗಳಲ್ಲಿ ಸೇವಂತಿಗೆ 50ಕ್ಕೂ ಅಧಿಕ ಮಂದಿ ಹೂವು ಬೆಳೆಯುತ್ತಿದ್ದು, ಈ ಬಾರಿ ಇವರಲ್ಲಿ ಕೆಲವರು ನಿರಾಸಕ್ತಿ ತೋರಿದ್ದಾರೆ.

ಕೆಂಡ ಸೇವೆ- ಜಾತ್ರೆಗಳಿಗೆ ಬಲು ಬೇಡಿಕೆ :

ಹೆಮ್ಮಾಡಿ ಸೇವಂತಿಗೆ ಹೂವಿಗೆ ಕುಂದಾಪುರ ಭಾಗದ ಮಾರಣಕಟ್ಟೆ ಜಾತ್ರೆಯಿಂದ ಆರಂಭಗೊಂಡು, ಉಡುಪಿ, ಮಂಗಳೂರು, ಭಟ್ಕಳ, ಹೊನ್ನಾವರದ ಕೆಂಡ ಸೇವೆ, ವಾರ್ಷಿಕ ಜಾತ್ರೋತ್ಸವಗಳಲ್ಲಿ ಬಲು ಬೇಡಿಕೆಯಿದೆ. ಕುಂದಾಪುರ ಭಾಗದಲ್ಲಿ ಜನವರಿಯಿಂದ ಆರಂಭಗೊಂಡು ಮಾರ್ಚ್‌ವರೆಗೂ ನಿರಂತರವಾಗಿ ದಿನಕ್ಕೆರಡು ದೇವಸ್ಥಾನ, ದೈವಸ್ಥಾನಗಳ ಕೆಂಡ ಸೇವೆ- ಜಾತ್ರೆಗಳಿಗೆ ಹೆಮ್ಮಾಡಿ ಸೇವಂತಿಗೆಗೆ ಬೇಡಿಕೆಯಿರುವುದು ವಿಶೇಷ. ಈ ಬಾರಿ ಸದ್ಯಕ್ಕೆ 1 ಸಾವಿರ ಹೂಗಳಿಗೆ 200 ರೂ.ನಲ್ಲಿ ಮಾರಾಟವಾಗುತ್ತಿದೆ. ಕಳೆದ ಬಾರಿಯೂ ಈ ಸಮಯ 200 ರಿಂದ 250 ರೂ. ಇತ್ತು. ಇದು ಹೆಚ್ಚು ಆಗಬಹುದು ಅಥವಾ ಕಡಿಮೆಯೂ ಆಗಬಹುದು ಎನ್ನುತ್ತಾರೆ ಬೆಳೆಗಾರರು.

ಈ ಬಾರಿ ಚಳಿ ಕಡಿಮೆಯಾಗಿದ್ದರಿಂದ, ಮೋಡದಿಂದಾಗಿ ಸೇವಂತಿಗೆ ಹೂವಿನ ಬೆಳೆಗೆ ಸಂಕಷ್ಟ ಎದುರಾಗಿತ್ತು. ಆದರೆ ಈಗ ಕೆಲವು ದಿನಗಳಿಂದ ಮಳೆ ಬರುತ್ತಿರುವುದರಿಂದ ಸ್ವಲ್ಪ ಮಟ್ಟಿಗೆ ಹೂವಿಗೆ ಅನುಕೂಲವಾಗಿದೆ. ಈ ಬಾರಿ ಕಡಿಮೆ ಬೆಳೆದಿದ್ದರೂ ಒಳ್ಳೆ ಯ ಬೆಳೆ ಬಂದಿದೆ. ಉತ್ತಮ ಬೆಲೆಯ ನಿರೀಕ್ಷೆಯಿದೆ. ಆದರೆ ಜಾತ್ರೆಗಳಲ್ಲಿ ಜನ ಕಡಿಮೆ ಬರುವುದರಿಂದ ಬೇಡಿಕೆ ಇರುತ್ತೋ ? ಇಲ್ಲವೋ ನೋಡಬೇಕು. ಪ್ರಶಾಂತ್‌ ಭಂಡಾರಿ ಹೆಮ್ಮಾಡಿ, ಸೇವಂತಿಗೆ ಬೆಳೆಗಾರರು

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.