ತಾಲೂಕಿನಾದ್ಯಂತ ತೀವ್ರ ಚಳಿ, ವಿಳಂಬವಾಗಿ ಪ್ರಾರಂಭಗೊಂಡ ಚಳಿಗಾಲ

ಗೇರು, ಮಾವು, ಹಲಸು ಕೃಷಿಕರಿಗೆ ಹಿನ್ನಡೆ ,ಫ‌ಲ ಬಿಡುವ ಮರಗಳಲ್ಲಿ ಹೂವು ಇನ್ನೂ ಬಿಟ್ಟಿಲ್ಲ ,ಕೃಷಿಕರಲ್ಲಿ ಆತಂಕ

Team Udayavani, Jan 7, 2020, 5:29 AM IST

0601PALLI01B

ಕಾಂತಾವರ: ಒಂದೆರಡು ದಿನಗಳಿಂದ ಕಾರ್ಕಳ ತಾಲೂಕಿನಾದ್ಯಂತ ಚಳಿಯು ತೀವ್ರ ಗೊಂಡಿದೆ. ಈ ಬಾರಿ ಚಳಿ ಸುಮಾರು 2 ತಿಂಗಳು ವಿಳಂಬವಾಗಿ ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ಫ‌ಲ ಬಿಡುವ ಮರಗಳಲ್ಲಿ ಹೂವು ಇನ್ನೂ ಬಿಟ್ಟಿಲ್ಲ. ಸಾಮಾನ್ಯವಾಗಿ ಅಕ್ಟೋಬರ್‌ ನವೆಂಬರ್‌ ತಿಂಗಳು ಕಳೆದ ಅನಂತರ ಚಳಿಗಾಲ ಪ್ರಾರಂಭವಾಗುತ್ತದೆ. ಆದರೆ ಈ ಬಾರಿ ಜನವರಿ ಪ್ರಾರಂಭದಲ್ಲಿ ಚಳಿ ಪ್ರಾರಂಭವಾಗಿದ್ದು, ಕೃಷಿಕರಲ್ಲಿ ಆತಂಕ ಮನೆ ಮಾಡಿದೆ.

ಗ್ರಾಮೀಣ ಭಾಗಗಳಲ್ಲಿ ಚಳಿಯ ತೀವ್ರತೆ ಹೆಚ್ಚಿರುವುದರಿಂದ ನಗರ ಪ್ರದೇಶಗಳಿಗಿಂತ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ನಷ್ಟ ಸಂಭವಿಸಬಹುದಾಗಿದೆ.

ಚಳಿಗಾಲ ನವೆಂಬರ್‌ ತಿಂಗಳಿನಿಂದ ಪ್ರಾರಂಭಗೊಂಡಿದ್ದಲ್ಲಿ ಈಗಾಗಲೇ ಮಾವು ಗೇರು ಹಲಸು ಹೂ ಬಿಡಬೇಕಾಗಿತ್ತು. ಆದರೆ ಚಳಿಗಾಲ ವಿಳಂಬವಾಗಿರುವುದರಿಂದ ಗೇರು, ಮಾವಿನ ಮರಗಳು ಬರಿದಾಗಿವೆ.

ಮಳೆಗಾಲ ಸಹ ಸುಮಾರು ಒಂದು ತಿಂಗಳು ವಿಳಂಬವಾಗಿ ಜುಲೈ ತಿಂಗಳಲ್ಲಿ ಪ್ರಾರಂಭವಾಗಿ ಡಿಸೆಂಬರ್‌ ಅಂತ್ಯದವರೆಗೂ ತಾಲೂಕಿನ ವಿವಿಧೆಡೆ ಮಳೆ ಸುರಿದ ಪರಿಣಾಮ ಚಳಿ ಇಲ್ಲದಂತಾಗಿತ್ತು.

ಪ್ರಾಕೃತಿಕ ಅಸಮತೋಲನದಿಂದಾಗಿ ಮುಂದಿನ ಮಳೆಗಾಲವು ವಿಳಂಬವಾಗುವ ಬಗ್ಗೆ ರೈತರಲ್ಲಿ ಆತಂಕ ಮೂಡಿದೆ. ಕೆಲವು ರೈತರು ಗೇರು, ಮಾವು ಬೆಳೆಯನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದು, ಈ ಬಾರಿ ಚಳಿ ವಿಳಂಬವಾದ ಪರಿಣಾಮ ಫ‌ಸಲು ಇಲ್ಲದಂತಾಗಿದೆ. ಈಗಷ್ಟೇ ಚಳಿ ಪ್ರಾರಂಭವಾಗಿರುವುದರಿಂದ ಫ‌ಸಲು ಬಿಟ್ಟರೂ ಸಹ ಕೊಯ್ಲಿಗೆ ಬರುವ ಸಂದರ್ಭ ಮಳೆ ಬರುವ ಆತಂಕ ಕೃಷಿಕರನ್ನು ಕಾಡುತ್ತಿದೆ.

ನೆಡುತೋಪು ವಹಿಸಿಕೊಂಡವರಿಗೆ ಸಂಕಷ್ಟ
ಅರಣ್ಯ, ಪಂಚಾಯತ್‌, ಗೇರು ಅಬಿವೃದ್ಧಿ ನಿಗಮದ ಹಲವಾರು ಗೇರು ನೆಡುತೋಪುಗಳು ಕಾರ್ಕಳ ತಾಲೂಕಿನಾದ್ಯಂತ ಇದ್ದು, ಇದರ ಗುತ್ತಿಗೆಯ ಟೆಂಡರ್‌ ಪ್ರಕ್ರಿಯೆಯು ಅಕ್ಟೋಬರ್‌ ನವೆಂಬರ್‌ ತಿಂಗಳಿನಲ್ಲಿಯೇ ನಡೆಯುತ್ತದೆ. ಟೆಂಡರಲ್ಲಿ ನೆಡುತೋಪು ವಹಿಸಿಕೊಂಡವರು ಬೆಳೆಯಿಲ್ಲದೆ ನಷ್ಟ ಅನುಭವಿಸುವಂತಾಗಿದೆ. ಫ‌ಸಲು ವಿಳಂಬವಾಗಿ ಬರುವುದರಿಂದ ಗೇರು ಮಳೆಯಿಂದ ಹಾನಿಗೊಂಡರೆ ಮಾವು ಹುಳ ಬಾಧೆಗೆ ತುತ್ತಾಗುತ್ತದೆ.

ಹಲಸು ಬೆಳೆಯುವ ರೈತರು ಹಲಸಿನಿಂದ ಹಲವಾರು ಉತ್ಪನ್ನಗಳನ್ನು ತಯಾರಿಸುತ್ತಿದ್ದು, ಹಲಸು ಬೆಳೆ ಇಲ್ಲದೆ ಇರುವುದರಿಂದ ಉತ್ಪನ್ನಗಳನ್ನೇ ಜೀವನ ನಡೆಸುವವರು ತೀವ್ರ ಸಂಕಷ್ಟಕ್ಕೊಳಗಾಗಲಿದ್ದಾರೆ.

ಸಂಕಷ್ಟ
ಮಳೆಗಾಲ ವಿಳಂಬವಾಗಿ ಪ್ರಾರಂಭವಾದ ಕಾರಣ ಚಳಿಗಾಲ ವಿಳಂಬವಾಗಿದೆ. ಈ ರೀತಿಯಾದಲ್ಲಿ ಪ್ರಾಕೃತಿಕ ಅಸಮತೋಲನ ಉಂಟಾಗಿ ರೈತರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ ಎನ್ನುತ್ತಾರೆ ಹಿಂದೆ ನೆಡುತೋಪು ವಹಿಸಿಕೊಳ್ಳುತ್ತಿದ್ದ ಕಾಂತಾವರದ ಜಯ ಎಸ್‌. ಕೋಟ್ಯಾನ್‌.

ಹಾನಿಯಾಗುವ ಸಂಭವ
ತಾಲೂಕಿನಾದ್ಯಂತ ಸುಮಾರು 1,600 ಹೆಕ್ಟೇರ್‌ ಭೂ ಪ್ರದೇಶದಲ್ಲಿ ಗೇರು ಬೆಳೆಯಲಾಗಿದೆ. ಸುಮಾರು 250 ಹೆಕ್ಟೇರ್‌ ಪ್ರದೇಶದಲ್ಲಿ ಮಾವು ಬೆಳೆ ಬೆಳೆಸಲಾಗುತ್ತಿದೆ.ತಾಲೂಕಿನಾದ್ಯಂತ ಬಹುತೇಕ ರೈತರ ಕೃಷಿ ಭೂಮಿಯಲ್ಲಿ ಹಲಸು ಬೆಳೆಯಲಾಗಿದೆ.ತಾಲೂಕಿನಲ್ಲಿ ವಿಳಂಬವಾಗಿ ಮಳೆ ಪ್ರಾರಂಭವಾಗಿ ಡಿಸೆಂಬರ್‌ ವರೆಗೂ ಮಳೆ ಬಿದ್ದ ಪರಿಣಾಮ ತೋಟಗಾರಿಕೆ ಬೆಳೆಗಳಲ್ಲಿ ಹೂ ಬಿಡುವುದು ವಿಳಂಬವಾಗಿದೆ. ಈಗಷ್ಟೇ ಹೂ ಬಿಡಲು ಪ್ರಾರಂಭವಾಗಿದ್ದು ಬೇಸಗೆಯಲ್ಲಿ ಮಳೆ ಬಂದಲ್ಲಿ ಗೇರು ಬೆಳೆಗೆ ಹಾನಿಯಾಗುವ ಸಂಭವವಿದೆ.
-ಶ್ರೀನಿವಾಸ್‌, ಸಹಾಯಕ ನಿರ್ದೇಶಕರು,
ತೋಟಗಾರಿಕೆ ಇಲಾಖೆ ಕಾರ್ಕಳ

ಕೈ ಸುಟ್ಟುಕೊಳ್ಳುವಂತಾಗಿದೆ
ಈ ಬಾರಿ ಚಳಿ ವಿಳಂಬವಾಗಿದ್ದು, ಹೂವು ಬಿಡುವಾಗ ವಿಳಂಬವಾಗಿ ಗೇರು ಫ‌ಸಲು ಇಲ್ಲದಂತಾಗಿದೆ. ಟೆಂಡರ್‌ ಮೂಲಕ ಪಡೆದ ಗೇರು ತೋಪಿನಿಂದಾಗಿ ಕೈ ಸುಟ್ಟುಕೊಳ್ಳುವಂತಾಗಿದೆ.
-ಜಗದೀಶ್‌ ಕೆ. ಪೂಜಾರಿ,
ನೆಡುತೋಪು ಗುತ್ತಿಗೆದಾರರು

ಟಾಪ್ ನ್ಯೂಸ್

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.