Udupi ಅಂತರ್ಜಲ ಮಟ್ಟ ತೀವ್ರ ಕುಸಿತ; ಎಚ್ಚರ ತಪ್ಪಿದರೆ ಆಪತ್ತು ಖಚಿತ


Team Udayavani, Feb 26, 2024, 7:02 AM IST

Udupi ಅಂತರ್ಜಲ ಮಟ್ಟ ತೀವ್ರ ಕುಸಿತ; ಎಚ್ಚರ ತಪ್ಪಿದರೆ ಆಪತ್ತು ಖಚಿತ

ಉಡುಪಿ: ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ವಾಡಿಕೆ ಮಳೆ ಪ್ರಮಾಣ ಕುಸಿಯುತ್ತಿರುವುದರ ಪರಿಣಾಮವಾಗಿ ಅಂತರ್ಜಲ ಮಟ್ಟವೂ ಗಣನೀಯವಾಗಿ ಕುಸಿಯುತ್ತಿದೆ. ಜಿಲ್ಲೆಯಲ್ಲಿ ಜನವರಿ ಒಂದೇ ತಿಂಗಳ ಅವಧಿಯಲ್ಲಿ ಅಂತರ್ಜಲ 0.26 ಮೀಟರ್‌ಗಳಷ್ಟು ಕುಸಿದಿರುವುದು ಆತಂಕಕ್ಕೆ ಕಾರಣವಾಗಿದೆ.

ನಗರ ಪ್ರದೇಶ ಮತ್ತು ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದ್ದು, ಕೆಲವರು ಟ್ಯಾಂಕರ್‌ ನೀರಿನ ಮೊರೆ ಹೋಗು ತ್ತಿದ್ದಾರೆ. ನದಿ ನೀರಿನ ಮಟ್ಟವೂ ಕಡಿಮೆಯಾಗುತ್ತಿದೆ. ಮಳೆ ನೀರಿನ ಸದುಪಯೋಗ ಹಾಗೂ ನೀರಿನ ಮೂಲಗಳ ಸಂರಕ್ಷಣೆ ಮಾಡದಿದ್ದಲ್ಲಿ ಸಮಸ್ಯೆ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆ ಹೆಚ್ಚಿದೆ ಎನ್ನುತ್ತಾರೆ ಜಲಪರಿಣತರು.

ತಿಂಗಳುವಾರು ಮಾಹಿತಿ: 2023ರ ಜನವರಿಯಲ್ಲಿ ಅಂತರ್ಜಲ ಮಟ್ಟ 7.79 ಮೀಟರ್‌ ಇತ್ತು.

ಫೆಬ್ರವರಿಯಲ್ಲಿ 8.35 ಮೀ.ಗೆ ಇಳಿದಿತ್ತು. ಮಾರ್ಚ್‌ನಲ್ಲಿ 9.07 ಮೀ., ಎಪ್ರಿಲ್‌ನಲ್ಲಿ 9.64 ಮೀ., ಮೇ ತಿಂಗಳಿನಲ್ಲಿ 10.2 ಮೀ.ಗೆ ಮುಟ್ಟಿತ್ತು.

ಜೂನ್‌ನಲ್ಲಿ ಬರಬೇಕಾದ ಮಳೆ ತಡವಾಯಿತು. ಜುಲೈ ತಿಂಗಳಿನಲ್ಲಿ ಮಳೆ ಬಂದದ್ದರಿಂದ 3.25 ಮೀ.ಗೆ ಏರಿಕೆಯಾಗಿತ್ತು. ಆಗಸ್ಟ್‌ನಲ್ಲಿ 4.83 ಮೀ.ಗೆ ಇಳಿದಿತ್ತು. ಸೆಪ್ಟಂಬರ್‌ನಲ್ಲಿ 4.93 ಮೀ.ಗೆ ಕುಸಿದಿತ್ತು. ಅಕ್ಟೋಬರ್‌ನಲ್ಲಿ 5.96 ಮೀ.ಗೆ ಇಳಿದು, ನವೆಂಬರ್‌ನಲ್ಲಿ 6.94 ಮೀ.ಗೆ ಕುಸಿದಿತ್ತು. ಡಿಸೆಂಬರ್‌ನಲ್ಲಿ 7.77 ಮೀಟರ್‌ ಕೆಳಗೆ ಹೋಗಿದೆ.
2024ರ ಜನವರಿಯಲ್ಲಿ 8.03 ಮೀಟರ್‌ಗೆ ಇಳಿದಿದ್ದು, ಕಳೆದ ವರ್ಷಕ್ಕಿಂತ ಕಡಿಮೆ ಪ್ರಮಾಣದಲ್ಲಿದೆ. ಜತೆಗೆ ಮಳೆಯೂ ಒಟ್ಟು ಶೇ. 25ರಷ್ಟು ಕಡಿಮೆಯಾಗಿತ್ತು.

2024ರ ಜನವರಿ ಅಂತ್ಯಕ್ಕೆ ಜಿಲ್ಲೆಯ ಅಂತರ್ಜಲ ಮಟ್ಟ 8.03 ಮೀ. ನಷ್ಟಿದ್ದರೆ, ಕಳೆದ ವರ್ಷ ಇದೇ ವೇಳೆಗೆ 7.79 ಮೀ. ಇತ್ತು. ಅಂದರೆ 0.23 ಮೀ.ನಷ್ಟು ಇಳಿದಿದೆ. ಮಳೆ ಬಾರದೆ ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಅಂತರ್ಜಲ ಇನ್ನಷ್ಟು ಕುಸಿಯುವ ಸಾಧ್ಯತೆಯಿದೆ. ಹಿಂದಿನ ಮಳೆಗಾಲ ದಲ್ಲೂ ಮಳೆ ಕೊರತೆ ಹಿನ್ನೆಲೆಯಲ್ಲಿ ಅಂತರ್ಜಲ ಮಟ್ಟ ನಿರೀಕ್ಷಿತ ಮಟ್ಟದಲ್ಲಿ ಏರಿಕೆಯಾಗಿಲ್ಲ ಎನ್ನುವುದು ಆತಂಕಕ್ಕೆ ಮತ್ತೊಂದು ಕಾರಣ.

ಎಚ್ಚರಿಕೆ ಅಗತ್ಯ: ಉಡುಪಿ ಮತ್ತು ಬೈಂದೂರಿನ ಕೆಲವು ಪ್ರದೇಶಗಳಲ್ಲಿ ಅಂತರ್ಜಲದ ಮಟ್ಟ ಅಪಾಯದ ಹಂತ ತಲುಪಿದೆ. ಕಾರ್ಕಳ ಹಾಗೂ ಕುಂದಾಪುರದಲ್ಲೂ ಪರಿಸ್ಥಿತಿ ಭಿನ್ನ ವಾಗಿಲ್ಲ. ಕಾಪು, ಬ್ರಹ್ಮಾವರ ಮತ್ತು ಹೆಬ್ರಿ ಭಾಗದಲ್ಲಿ ಇಂದಿನಿಂದಲೇ ವಿಶೇಷ ಎಚ್ಚರಿಕೆ ವಹಿಸುವುದು ಉತ್ತಮ ಎನ್ನುವ ಪರಿಸ್ಥಿತಿ ಇದೆ.

ಅಂತರ್ಜಲ ಮಟ್ಟದ ವೃದ್ಧಿಗಾಗಿ ಜಲಮೂಲಗಳ ರಕ್ಷಣೆ, ಕಿಂಡಿ ಅಣೆ ಕಟ್ಟುಗಳಿಗೆ ನಿರ್ದಿಷ್ಟ ಸಮಯದಲ್ಲಿ ಹಲಗೆ ಹಾಕುವುದು, ಪ್ರತೀ ಮನೆ ಯಲ್ಲೂ ಮಳೆನೀರು ಕೊಯ್ಲು ಅಳ ವಡಿಸುವುದು, ನಿರುಪಯುಕ್ತ ತೆರೆದ ಬಾವಿ, ಬೋರ್‌ವೆಲ್‌ಗ‌ಳಿಗೆ ಜಲ ಮರುಪೂರಣ ಮಾಡುವ ಪ್ರಕ್ರಿಯೆ ನಡೆಸ ಬೇಕು ಎನ್ನುತ್ತಾರೆ ಅಂತರ್ಜಲ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು.

ಇಲಾಖೆಯಿಂದ ನಿರ್ದೇಶನ
ಹೆಚ್ಚಿನ ಪ್ರಮಾಣದ ನೀರು ಬಳಕೆ ಯಾಗುವ ಶಾಲೆ, ಆಸ್ಪತ್ರೆ, ಸಭಾಭವನ, ಹೊಟೇಲ್‌ಗ‌ಳಿಗೆ ನೀರನ್ನು ಮಿತವಾಗಿ ಬಳಸುವಂತೆ ಜಿಲ್ಲಾ ಅಂತರ್ಜಲ ನಿರ್ದೇಶನಾಲಯದಿಂದ ಸುತ್ತೋಲೆ ನೀಡಲಾಗಿದೆ. ಎಲ್ಲಿಯೂ ನೀರು ಮಲಿನ, ಪೋಲಾಗದಂತೆ ಎಚ್ಚರ ವಹಿಸಬೇಕು. ಕೈ, ತಟ್ಟೆ ತೊಳೆದ ನೀರನ್ನು ತೋಟಕ್ಕೆ ಬಳಸುವ ಮೂಲಕ ಸದ್ಬಳಕೆ ಮಾಡಬೇಕು ಎಂದು ಸೂಚಿಸಿದೆ.

ಮಳೆ ಕೊರತೆ ಇರುವುದರಿಂದ ಅಂತರ್ಜಲ ಮಟ್ಟ ಕುಸಿದಿದೆ. ನೀರಿನ ಮೂಲಗಳ ಸಂರಕ್ಷಣೆಯ ಜತೆಗೆ ಮಳೆ ನೀರಿನ ಸದ್ಬಳಕೆಯೂ ಆಗಬೇಕು ಹಾಗೂ ಅಗತ್ಯವಾಗಿ ನೀರಿನ ಮಿತ ಬಳಕೆ ಮಾಡಬೇಕು.
  ಡಾ. ಎಂ. ದಿನಕರ ಶೆಟ್ಟಿ
ಹಿರಿಯ ಭೂ ವಿಜ್ಞಾನಿ, ಅಂತರ್ಜಲ ಮತ್ತು ಭೂ ವಿಜ್ಞಾನ ಇಲಾಖೆ, ಉಡುಪಿ

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.