ಚರಂಡಿ ಅವ್ಯವಸ್ಥೆ: ಸಚ್ಚೇರಿಪೇಟೆಯಲ್ಲಿ ಕೃತಕ ನೆರೆ
Team Udayavani, Jul 14, 2019, 5:32 AM IST
ಬೆಳ್ಮಣ್: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ ಕಾರಣ ಶುಕ್ರವಾರ ಸುರಿದ ಭಾರೀ ಮಳೆಗೆ ಸಚ್ಚೇರಿಪೇಟೆಯಲ್ಲಿ ಕೃತಕ ನೆರೆ ಉಂಟಾಗುವ ಮೂಲಕ ಜನರಿಗೆ ತೊಂದರೆಯಾಗಿದ್ದು, ಸ್ಥಳೀಯಾಡಳಿತದ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ.
ಇಲ್ಲಿನ ಚರಂಡಿಯ ಅವ್ಯವಸ್ಥೆಯ ಬಗ್ಗೆ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಗ್ರಾಮ ಪಂಚಾಯತ್ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಿರಲಿಲ್ಲ. ಚರಂಡಿ ವ್ಯವಸ್ಥೆ ಸರಿಪಡಿಸದಿದ್ದರೆ ಮಳೆಗಾಲಕ್ಕೆ ಕೃತಕ ನೆರೆಯಾಗುವ ಸಾಧ್ಯತೆ ಇದೆ ಎಂಬ ಮುನ್ಸೂಚನೆ ಇದ್ದರೂ ಪಂಚಾಯತ್ ಆಡಳಿತ ಈ ವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಇಲ್ಲಿನ ವಾಣಿಜ್ಯ ಸಂಕೀರ್ಣವೊಂದರ ಮಾಲಕರು ಎರಡು ವರ್ಷಗಳ ಹಿಂದೆ ಚರಂಡಿಯಲ್ಲಿ ಕೆಸರು ತುಂಬಿಕೊಂಡು, ಸೊಳ್ಳೆಗಳು ಅ ಧಿಕವಾಗಿರುವುದನ್ನು ಮನಗಂಡು ತಮ್ಮ ಸ್ವಂತ ಖರ್ಚಿನಲ್ಲಿ ಮೋರಿ ನಿರ್ಮಿಸಿ ಚಪ್ಪಡಿ ಕಲ್ಲು ಹಾಕಿಸಿದ್ದರು. ಅದಕ್ಕಿಂತ ಮುಂದುವರಿದ ಚರಂಡಿ ವ್ಯವಸ್ಥೆಯನ್ನು ಪಂಚಾಯತ್ ನಿರ್ಮಿಸಬೇಕಾಗಿದ್ದರೂª ಕೈಕಟ್ಟಿ ಕುಳಿತಿರುವುದು ವಿಪರ್ಯಾಸ ಎಂಬುದು ಸಾರ್ವಜನಿಕರ ದೂರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ