ದೇವಸ್ಥಾನದ ಬಳಿ ದುರ್ವಾಸನೆ ಬೀರಿದ ಕೊಳಚೆ ನೀರು


Team Udayavani, Mar 16, 2019, 12:30 AM IST

1503kpe2b.jpg

ಕಾಪು: ಕಾಪು ಪುರಸಭೆಯ ತೆಂಕಪೇಟೆ ಮತ್ತು ಜನಾರ್ದನ ದೇವಸ್ಥಾನದ ಮುಂಭಾಗದಲ್ಲಿ ಒಳಚರಂಡಿ ಯೋಜನೆಗೆಂದು ಹಾಕಲಾಗಿದ್ದ ಪೈಪ್‌ಲೈನ್‌ಗೆ ಪುರಸಭೆಯ ಅನುಮತಿಯಿಲ್ಲದೇ ಮನೆ ಮತ್ತು ವಾಣಿಜ್ಯ ಕಟ್ಟಡಗಳ ಮಲಿನ ನೀರನ್ನು ಏಕಾಏಕಿಯಾಗಿ ಬಿಟ್ಟ ಪರಿಣಾಮ ಗುರುವಾರ ರಾತ್ರಿ ಕಾಪು ಪೇಟೆಯ ಜನರು  ದುರ್ನಾತದ ಪರಿಸ್ಥಿತಿಯನ್ನು ಎದುರಿಸುವಂತಾಯಿತು.

ಚಿಮ್ಮಿದ ಕೊಳಚೆ ನೀರು
ಹಳೇ ಮಾರಿಯಮ್ಮ ದೇವಸ್ಥಾನದ ಮುಂಭಾಗದಲ್ಲಿ ಕಾಪು ಪೇಟೆಯನ್ನು ಪ್ರವೇಶಿಸುವ ದ್ವಾರದಿಂದ ಹಿಡಿದು ಮಲ್ಲಾರು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದವರೆಗಿನ ಜನರು ಇದರಿಂದಾಗಿ ಅಸಹನೀಯ ಪರಿಸ್ಥಿತಿಯನ್ನು ಎದುರಿಸುವಂತಾಯಿತು. ಒಳಚರಂಡಿಯಲ್ಲಿ ಕೊಳಚೆ ನೀರು ಒಮ್ಮೆಲೆ ಹರಿದು ಬಂದ ಪರಿಣಾಮ ಅಲ್ಲಲ್ಲಿ ಅಳವಡಿಸಲಾಗಿದ್ದ ಮ್ಯಾನ್‌ಹೋಲ್‌ಗ‌ಳಲ್ಲಿ ಕೊಳಚೆ ನೀರು ಮೇಲೆದ್ದು ಬಂದು ಕೆಟ್ಟ ದುರ್ವಾಸನೆ ಬೀರಿದೆ.

ಪುರಸಭೆಗೆ ದೂರು
ಗುರುವಾರ ಸಂಜೆ ಕಂಡು ಬಂದ ಮಲಿನ ನೀರು ಮತ್ತು  ದುರ್ವಾಸನೆಯ ಸ್ಥಿತಿಯನ್ನು ಗಮನಿಸಿದ ಪುರಸಭಾ ಸದಸ್ಯ ಅನಿಲ್‌ ಕುಮಾರ್‌ ಮತ್ತು ಸ್ಥಳೀಯ ನಿವಾಸಿಗಳು ಈ ಬಗ್ಗೆ  ಪುರಸಭೆಗೆ ದೂರು ನೀಡಿದ್ದರು. ಶುಕ್ರವಾರ ಬೆಳಗ್ಗೆಯೇ ಈ ಬಗ್ಗೆ ಕಾರ್ಯೋನ್ಮುಖರಾದ ಮುಖ್ಯಾಧಿಕಾರಿ  ಅವರು ಪುರಸಭೆಯ ಸಿಬಂದಿಗಳು, ಪೌರ ಕಾರ್ಮಿಕರು ಮತ್ತು ಒಳಚರಂಡಿ ಯೋಜನೆಯ ಗುತ್ತಿಗೆದಾರ ಸಿಬಂದಿಗಳನ್ನು ಬಳಸಿಕೊಂಡು ತುರ್ತು ಕಾರ್ಯಾಚರಣೆ ನಡೆಸಿದರು.

ಪೈಪ್‌ಲೈನ್‌ ಸಂಪರ್ಕ ಕಡಿತ
ಕಾರ್ಯಾಚರಣೆ ವೇಳೆ ಕೆಲವು ಕಡೆಗಳಲ್ಲಿ ಪುರಸಭೆಯ ಒಪ್ಪಿಗೆಯಿಲ್ಲದೇ ಪುರಸಭೆಯ ಒಳಚರಂಡಿ ಯೋಜನೆಯ ಮ್ಯಾನ್‌ಹೋಲ್‌ಗೆ ಕಲುಷಿತ ಮಲಿನ ನೀರನ್ನು ಬಿಡುತ್ತಿರುವುದನ್ನು ಪತ್ತೆ ಹಚ್ಚಿದ  ಸ್ವತ್ಛ ಸರ್ವೇಕ್ಷಣಾ ತಂಡ ಸಂಬಂಧಪಟ್ಟವರಿಗೆ ಎಚ್ಚರಿಕೆ ನೀಡಿ, ಅನುಮತಿಯಿಲ್ಲದೇ ಮ್ಯಾನ್‌ಹೋಲ್‌ಗೆ ಜೋಡಿಸಿರುವ ಪೈಪ್‌ಲೈನ್‌ ಸಂಪರ್ಕವನ್ನು 
ಕಡಿತಗೊಳಿಸಿದೆ.

ಪುರಸಭೆ ವ್ಯಾಪ್ತಿಯ ನಾಗರಿಕರ ಆರೋಗ್ಯದ ಹಿತದೃಷ್ಟಿ ಮತ್ತು ಪರಿಸರದ ಹಿತದೃಷ್ಟಿಯನ್ನು ಗಮನದಲ್ಲಿ ಇರಿಸಿಕೊಂಡು ಪ್ರತಿಯೊಂದು ವಾಣಿಜ್ಯ ಮಳಿಗೆ, ಹೊಟೇಲ್‌, ಮನೆ ಸಹಿತ ಎಲ್ಲಾ ಮಾದರಿಯ ಕಟ್ಟಡಗಳಲ್ಲೂ ಅಲ್ಲಿ ಉತ್ಪ³ತ್ತಿಯಾಗುವ ಮಲಿನ ಮತ್ತು ಕಲುಷಿತ ನೀರನ್ನು ಎಸ್‌ಟಿಪಿ ತಂತ್ರಜ್ಞಾನದ ಮೂಲಕ ಶುದ್ಧೀಕರಿಸಿ ತಾವೇ ಅದರ ವಿಲೇವಾರಿಗೆ ಕ್ರಮ ತೆಗೆದುಕೊಳ್ಳಬೇಕಿದೆ. ಒಂದು ವೇಳೆ ಇನ್ನು ಮುಂದೆಯೂ ಇದೇ ರೀತಿಯಲ್ಲಿ ಒಳಚರಂಡಿ ಯೋಜನೆಯ ಮ್ಯಾನ್‌ಹೋಲ್‌ಗೆ ಮಲಿನ ನೀರನ್ನು ಬಿಟ್ಟಲ್ಲಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಪುರಸಭಾ ಮುಖ್ಯಾಧಿಕಾರಿ ರಾಯಪ್ಪ ಎಚ್ಚರಿಕೆ ನೀಡಿದ್ದಾರೆ.

ಯೋಜನೆ ಅನುಷ್ಠಾನಕ್ಕೆ ಜಾಗದ ಕೊರತೆ
ಕಾಪು ಪುರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಶುದ್ಧೀಕರಣ ಘಟಕ ಸ್ಥಾಪನೆಗೆ ಈಗಾಗಲೇ ಮೂರು ಕೋ. ರೂ. ಅನುದಾನ ಬಿಡುಗಡೆಯಾಗಿದ್ದು, ಅದನ್ನು ಬಳಸಿಕೊಂಡು ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಕೆಲವೊಂದು ಅಡಚಣೆಗಳು ಎದುರಾಗಿವೆ. ಒಳಚರಂಡಿ ಯೋಜನೆಗಾಗಿ ಪೈಪ್‌ಲೈನ್‌ ಅಳವಡಿಕೆಯಾಗಿದ್ದರೂ ಕೂಡಾ ಸಮರ್ಪಕ ಜಾಗದ ಕೊರತೆಯಿಂದಾಗಿ ಎಸ್‌ಟಿಪಿ ಘಟಕ ಸ್ಥಾಪಿಸಲು ವಿಳಂಬವಾಗುತ್ತಿದೆ. ಪುರಸಭೆ ವತಿಯಿಂದ ಒಂದು ಎಕರೆ ಖಾಸಗಿ ಜಾಗವನ್ನು ಖರೀದಿಸಿ, ಬೆಂಗಳೂರಿನ ದೇವನಹಳ್ಳಿ ಮಾದರಿಯಲ್ಲಿ ಎಸ್‌ಟಿಪಿ ಘಟಕವನ್ನು ಸ್ಥಾಪಿಸಿ, ಸಕ್ಕಿಂಗ್‌ ಯಂತ್ರಗಳ ಮೂಲಕ ಕೊಳಚೆ ನೀರನ್ನು ಶುದ್ಧೀಕರಿಸುವ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಪ್ರಯತ್ನಿಸಲಾಗುತ್ತಿದೆ
 – ರಾಯಪ್ಪ
ಮುಖ್ಯಾಧಿಕಾರಿ,ಕಾಪು ಪುರಸಭೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.