ಕೇಶವ ಸಹಿತ ಇಬ್ಬರಿಗೆ ನ್ಯಾಯಾಂಗ ಬಂಧನ


Team Udayavani, Mar 16, 2019, 12:30 AM IST

z-32.jpg

ಕೋಟ: ತೆಕ್ಕಟ್ಟೆ- ಕೆದೂರಿನ ಸ್ಫೂರ್ತಿಧಾಮ ಸಂಸ್ಥೆಯಲ್ಲಿದ್ದ ಅನಾಥ ಅಪ್ರಾಪ್ತ ವಯಸ್ಕ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ಸ್ಥಳೀಯ ನೂಜಿಯ ನಿವಾಸಿ ಹನುಮಂತ ಹಾಗೂ ಸಂಸ್ಥೆಯ ಮುಖ್ಯಸ್ಥ ಕೇಶವ ಕೋಟೇಶ್ವರನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಗೆ ಪೋಕ್ಸೋ ಕಾಯಿದೆಯಡಿ ಮಾ. 27ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಧಾಮದಿಂದ ತಪ್ಪಿಸಿಕೊಂಡ ಬಾಲಕಿಯೋರ್ವಳು ಮಾ. 13ರಂದು ಸಾಸ್ತಾನದಲ್ಲಿ ಸಾರ್ವಜನಿಕರ ಕೈಗೆ ಸಿಕ್ಕಿ ಕೋಟ ಪೊಲೀಸರಿಗೆ ಹಸ್ತಾಂತರಿಸಲ್ಪಟ್ಟಿದ್ದಳು. ಅನಾಥೆಯಾಗಿದ್ದ ಆಕೆ ಹಲವು ವರ್ಷಗಳಿಂದ ಸ್ಫೂ³ರ್ತಿಯಲ್ಲಿ ವಾಸವಿದ್ದು, ಇತ್ತೀಚೆಗೆ ಮಂಗಳೂರಿನ ಕುಟುಂಬ ವೊಂದು ದತ್ತು ಪಡೆದಿತ್ತು. ಆರೋಗ್ಯದ ಸಮಸ್ಯೆಯಿಂದ ಆಕೆ ಮತ್ತೆ ಸ್ಫೂರ್ತಿಗೆ ವಾಪಸಾಗಿದ್ದಳು. ಇಲ್ಲಿ ಸ್ಥಳೀಯ ವ್ಯಕ್ತಿ ಹನುಮಂತ ಎಂಬಾತ ಮೊದಲಿನಿಂದ ಲೈಂಗಿಕ ದೌರ್ಜನ್ಯ ನೀಡುತ್ತಿದ್ದು ಅದನ್ನು ಮುಂದುವರಿಸಿದ್ದ. ಇದರಿಂದ ಬೆದರಿದ ಆಕೆ ದತ್ತು ಪಡೆದವರ ಬಳಿಗೆ ತೆರಳಲು ನಿಶ್ಚಯಿಸಿ ಅಲ್ಲಿಂದ ತಪ್ಪಿಸಿಕೊಂಡಿದ್ದಳು ಎಂಬ ವಿಚಾರ ತಿಳಿದುಬಂತು.

ಕೋಟ ಪೊಲೀಸರು ಪ್ರಕರಣವನ್ನು ಉಡುಪಿ ಮಹಿಳಾ ಠಾಣೆಗೆ ಹಸ್ತಾಂ ತರಿಸಿದ್ದಾರೆ. ಹನುಮಂತನನ್ನು ವಶಕ್ಕೆ ಪಡೆದ ಪೊಲೀಸರು ಸ್ಫೂರ್ತಿಧಾಮಕ್ಕೆ ಭೇಟಿ ನೀಡಿ ಆರೇಳು ಬಾಲಕಿಯರನ್ನು ವಿಚಾರಿಸಿದರು. ಅವರ ಮೇಲೂ ದೌರ್ಜನ್ಯ ದೃಢವಾಯಿತು. ಒಬ್ಟಾಕೆ ಕೇಶವ ಕೋಟೇಶ್ವರ ಕೂಡ ದೌರ್ಜನ್ಯ ಎಸಗಿದ್ದಾನೆ ಎಂದ ಕಾರಣ ತಡರಾತ್ರಿ ಆತನನ್ನೂ ಬಂಧಿಸಲಾಯಿತು.

ಪುಸಲಾಯಿಸಿ ಕೃತ್ಯ
ಸಂಬಂಧಿಯೋರ್ವರು ಇಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹಿನ್ನೆಲೆಯಲ್ಲಿ ಆರೋಪಿ ಹನುಮಂತ ಆಗಾಗ ಇಲ್ಲಿಗೆ ಬಂದು ಹೋಗುತ್ತಿದ್ದ ಹಾಗೂ ಮಕ್ಕಳಿಗೆ ಚಾಕಲೇಟ್‌, ತಿಂಡಿ ನೀಡಿ ಪರಿಚಯ ಮಾಡಿಕೊಂಡಿದ್ದ. ರಾತ್ರಿ ವೇಳೆ ಕದ್ದು-ಮುಚ್ಚಿ ಕಿಟಕಿಯ ಮೂಲಕ ಒಳಪ್ರವೇಶಿಸಿ ದೌರ್ಜನ್ಯ ಎಸಗುತ್ತಿದ್ದ. ಸಂಸ್ಥೆಯವರಿಗೆ ಈ ವಿಚಾರ ತಿಳಿದಾಗ ಆತನನ್ನು ತರಾಟೆಗೆ ತೆಗೆದುಕೊಂಡು ರಾಜಿ ಮೂಲಕ ಪ್ರಕರಣ ಇತ್ಯರ್ಥಕ್ಕೆ ಪ್ರಯತ್ನಿಸಿದ್ದರು ಎನ್ನಲಾಗಿದೆ. ತನಿಖೆ ವೇಳೆ ಇನ್ನಷ್ಟು ವಿಚಾರಗಳು ಹೊರಬರುವ ಸಾಧ್ಯತೆ ಇದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

22 ಮಕ್ಕಳ ಸ್ಥಳಾಂತರ
ತೆಕ್ಕಟ್ಟೆ: ಸ್ಫೂರ್ತಿಧಾಮದಲ್ಲಿರುವ 22 ಮಕ್ಕಳನ್ನು (16 ಬಾಲಕರು, 6 ಬಾಲಕಿಯರು) ಜಿಲ್ಲಾಡಳಿತದ ನಿರ್ದೇಶನದಂತೆ ಉಡುಪಿ ನಿಟ್ಟೂರಿನ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಿ ರಕ್ಷಣೆ ನೀಡಲಾಗಿದೆ. ದತ್ತು ಮಕ್ಕಳನ್ನು ಸಂತೆಕಟ್ಟೆಯಲ್ಲಿನ ದತ್ತು ಕೇಂದ್ರಗಳಿಗೆ ಕಳುಹಿಸಲಾಗಿದೆ.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.