ಉಡುಪಿ ಕೃಷ್ಣ ಮಠದ ಪರಿಸರಕ್ಕೂ ಬಂದಿದ್ದನಂತೆ ಉಗ್ರ ಶಾರೀಕ್!
Team Udayavani, Nov 27, 2022, 9:10 AM IST
ಉಡುಪಿ: ಕೃಷ್ಣ ಮಠದ ರಥಬೀದಿ ಪರಿಸರಕ್ಕೆ ಮಂಗಳೂರು ಕುಕ್ಕರ್ ಸ್ಫೋಟದ ಆರೋಪಿ ಉಗ್ರ ಶಾರೀಕ್ ಅಕ್ಟೋಬರ್ನಲ್ಲಿ ಬಂದಿದ್ದ ಬಗ್ಗೆ ಮಂಗಳೂರಿನ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಶನಿವಾರ ವಿವಿಧೆಡೆ ಪರಿಶೀಲನೆ ನಡೆಸಿದ್ದಾರೆ.
ಶಾರೀಕ್ನ ಮೊಬೈಲ್ ಪರಿಶೀಲನೆ ಸಂದರ್ಭ ರಥಬೀದಿ ಯಿಂದ ಕರೆ ಮಾಡಿರುವುದು ಕಂಡುಬಂದಿದೆ. ಹೀಗಾಗಿ ಪೊಲೀಸರು ರಥಬೀದಿಗೆ ಆಗಮಿಸಿ, ಕೃಷ್ಣ ಮಠ ಆತನ ಗುರಿ ಆಗಿತ್ತೇ ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ರಥಬೀದಿ ಸುತ್ತಲಿನ ಅಂಗಡಿಗಳಲ್ಲಿರುವ ಸಿಸಿ ಕೆಮರಾ ಫೂಟೇಜ್ಗಳನ್ನು ಸಂಗ್ರಹಿಸಿದ್ದಾರೆ.
ಸಹಾಯ ಪಡೆದಿದ್ದ ಮಹಿಳೆ
ಶಾರೀಕ್ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದ ವೇಳೆ ರಥಬೀದಿ ಪರಿಸರದಲ್ಲಿರುವ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಆತನ ಮೊಬೈಲ್ ಪಡೆದು ಯಾರಿಗೋ ಕರೆ ಮಾಡಿರುವುದು ತಿಳಿದು ಬಂದಿದೆ. ಆಕೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಆಕೆಯು ತನ್ನ ಮೊಮ್ಮಗನಿಗೆ ಕರೆ ಮಾಡಿರುವುದಾಗಿ ತಿಳಿಸಿದ್ದಾಳೆ. ಮೊಮ್ಮಗನನ್ನು ಅತಿಯಾಗಿ ಪ್ರೀತಿಸುವ ಆಕೆ ಯಾರೇ ಸಿಕ್ಕರೂ ಅವರಿಂದ ಮೊಬೈಲ್ ಪಡೆದು ಆತನಿಗೆ ಕರೆ ಮಾಡುವುದು ರೂಢಿ. ಎಂದಿನಂತೆ ಆಕೆ ಶಾರೀಕ್ನ ಮೊಬೈಲ್ನಿಂದಲೂ ಕರೆ ಮಾಡಿರಬೇಕು ಎಂದು ತಿಳಿದುಬಂದಿದೆ.
ಮಠದಿಂದ ಕಾರ್ಕಳಕ್ಕೆ: ಶ್ರೀಕೃಷ್ಣ ಮಠದಿಂದ ಆತ ಮಣಿಪಾಲ ಮಾರ್ಗವಾಗಿ ಕಾರ್ಕಳಕ್ಕೆ ತೆರಳಿರುವ ಬಗ್ಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ: ಸಹೋದ್ಯೋಗಿಯಿಂದ ಗುಂಡಿನ ದಾಳಿ: ಕರ್ತವ್ಯದಲ್ಲಿದ್ದ ಇಬ್ಬರು ಐಆರ್ಬಿ ಯೋಧರ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ