ಶೀಂಬ್ರ ಸೇತುವೆ ಭೂಸ್ವಾಧೀನಕ್ಕೆ 3 ಕೋ.ರೂ. ಅನುದಾನ ಘೋಷಣೆ

ಸೇತುವೆ ಕಾಮಗಾರಿ ಮುಕ್ತಾಯವಾಗಿದ್ದರೂ ರಸ್ತೆ ಇಲ್ಲದೆ ಅಡಚಣೆ

Team Udayavani, Feb 3, 2020, 5:28 AM IST

3840BRIDGE_0-415X281

ಉಡುಪಿ: ಸ್ವರ್ಣಾ ನದಿಗೆ ಅಡ್ಡವಾಗಿ ಕೊಳಲಗಿರಿ ಪರಾರಿ- ಪೆರಂಪಳ್ಳಿ ಶೀಂಬ್ರ ಸೇತುವೆಯ ಭೂಸ್ವಾಧೀನ ಪ್ರಕ್ರಿಯೆಗೆ ಲೋಕೋಪಯೋಗಿ ಇಲಾಖೆ ಯಿಂದ 3 ಕೋ.ರೂ. ಅನುದಾನ ಘೋಷಣೆ ಯಾಗಿದೆ.

ಪ್ರತಿಭಟನೆ ಸಿದ್ಧತೆ!
ಕೊಳಲಗಿರಿ ಪರಾರಿ- ಪೆರಂಪಳ್ಳಿ ಶಿಂಬ್ರ ಸೇತುವೆ ನಿರ್ಮಾಣಗೊಂಡು ಎರಡೂವರೆ ವರ್ಷಗಳು ಕಳೆದರೂ ಭೂಸ್ವಾಧೀನಕ್ಕೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಸೇತುವೆ ಬಳಕೆ ಮುಕ್ತವಾಗದ ಹಿನ್ನೆಲೆಗೆ ಸ್ಥಳೀಯರು ಪ್ರತಿಭಟನೆಗೆ ಸಿದ್ಧರಾಗಿದ್ದರು. ಈ ಕುರಿತು ಉದಯವಾಣಿ ಪತ್ರಿಕೆ ವರದಿಯನ್ನು ಪ್ರಕಟಿಸಿತ್ತು.

ಸೇತುವೆ ಸ್ಥಳ ಪರಿಶೀಲನೆ
ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಗುರುಪ್ರಸಾದ್‌ ಅವರು ಫೆ.1ರಂದು ಉಡುಪಿಯ ಕೊಳಲಗಿರಿಗೆ ಸಂಪರ್ಕ ಕಲ್ಪಿಸುವ ಮಣಿಪಾಲದ ಶೀಂಬ್ರ -ಪರಾರಿ ರಸ್ತೆಯ ಸೇತುವೆ ಸ್ಥಳಕ್ಕೆ ಆಗಮಿಸಿ ರಸ್ತೆಯ ಪರಿಸ್ಥಿತಿ ಅವಲೋಕಿಸಿ 3 ಕೋ.ರೂ. ಅನುದಾನವನ್ನು ಘೋಷಣೆ ಮಾಡಿದ್ದು, ಕೂಡಲೇ ಕಾಮಗಾರಿ ಆರಂಭಿಸುವಂತೆ ಸೂಚಿಸಿದ್ದಾರೆ.

ಪೇತ್ರಿ, ಕೊಕ್ಕರ್ಣೆಗೆ ಹತ್ತಿರ
ಸೇತುವೆ ಕಾಮಗಾರಿ ಪೂರ್ಣಗೊಂಡರೆ ಕೊಳಲಗಿರಿ, ಹಾವಂಜೆ, ಪೇತ್ರಿ, ಕೊಕ್ಕರ್ಣೆ, ಮಂದಾರ್ತಿ ಸೇರಿದಂತೆ ಇತರ ಸುತ್ತಮುತ್ತಲಿನ ಜನರಿಗೆ ಉಪಯೋಗವಾಗಲಿದೆ. ರಾ.ಹೆ. 66ರನ್ನು ಸಂಪರ್ಕಿಸದೆ ನೇರವಾಗಿ ಮಣಿಪಾಲವನ್ನು ತಲುಪಬಹುದು. ಹೊಸ ಸೇತುವೆ 202.96 ಮೀ. ಉದ್ದ, ತಲಾ 25.37 ಮೀ. 8 ಉದ್ದದ ಅಂಕಣಗಳನ್ನು ಹೊಂದಿದೆ.

3 ಎಕ್ರೆ ಭೂಸ್ವಾಧೀನ!
2018ರಲ್ಲಿ ಸೇತುವೆ ನಿರ್ಮಾಣ ಪೂರ್ಣಗೊಂಡರೂ ಸಂಪರ್ಕ ರಸ್ತೆ ಭೂಸ್ವಾಧೀನವಾಗದ ಹಿನ್ನೆಲೆಯಲ್ಲಿ ವಾಹನ ಸಂಚರಿಸಲು ಅವಕಾಶವಿರಲಿಲ್ಲ. ಕೂಡು ರಸ್ತೆಗೆ ಶೀಂಬ್ರದಲ್ಲಿ 85 ಸೆಂಟ್ಸ್‌ ಹಾಗೂ ಕೊಳಲಗಿರಿಯಲ್ಲಿ 2.23 ಎಕರೆ ಭೂ ಸ್ವಾಧೀನಕ್ಕಾಗಿ ಇಲಾಖೆಯಿಂದ 25 ಲಕ್ಷ ರೂ. ಇಡಲಾಗಿತ್ತು. ಆದರೆ ಮಾರುಕಟ್ಟೆ ಬೆಲೆ ಅಂದಾಜಿಸಿದಾಗ 3 ಕೋ. ರೂ. ನೀಡಬೇಕಾಗುತ್ತದೆ.

ಅನುದಾನ ಬಿಡುಗಡೆಯಾಗಲಿ!
ಇಲಾಖೆ ಮಾಡಿರುವ ಘೋಷಣೆ ಕೇವಲ ಘೋಷಣೆಗೆ ಸೀಮಿತವಾಗದಿರಲಿ. ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲು ಅಗತ್ಯವಿರುವ ಭೂಸ್ವಾಧೀನ ಹಾಗೂ ಕೂಡು ರಸ್ತೆಗೆ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಆದೇಶವಾಗಿದೆ
ಇತ್ತೀಚಿಗೆ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರ ಉಡುಪಿ ಜಿಲ್ಲೆ ಪ್ರವಾಸ ಮಾಡಿದ ಸಂದರ್ಭ ಪರಾರಿ- ಪೆರಂಪಳ್ಳಿ ಶೀಂಬ್ರ ಸೇತುವೆ ಭೂಸ್ವಾಧಿನಕ್ಕೆ ಅಗತ್ಯವಿರುವ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿತ್ತು. ಇದೀಗ ಸಚಿವರ ಆದೇಶದ ಮೇರೆಗೆ ಕಾರ್ಯದರ್ಶಿಯವರು ಸ್ಥಳ ಪರಿಶೀಲನೆ ನಡೆಸಿ ಅನುದಾನ ಘೋಷಣೆ ಮಾಡಿ ಕಾಮಗಾರಿ ಮಾಡುವಂತೆ ಆದೇಶ ಮಾಡಿದ್ದಾರೆ.
-ಕೆ. ರಘುಪತಿ ಭಟ್‌,
ಶಾಸಕ ಉಡುಪಿ

ಮಳೆಗಾಲಕ್ಕೂ ಮುನ್ನ ಆಗಲಿ
ಮಣಿಪಾಲ ಹತ್ತಿರ ಈ ಸೇತುವೆ ನಿರ್ಮಾಣವಾದರೆ ಕುಂದಾಪುರದ ಜನತೆಗೆ ಮಣಿಪಾಲವು 15 ಕಿ.ಮೀ. ಹತ್ತಿರವಾಗಲಿದೆ. ಬ್ರಹ್ಮಾವರ -ಪೇತ್ರಿ ಕೊಳಲಗಿರಿ- ಪರಾರಿ- ಪೆರಂಪಳ್ಳಿಯಾಗಿ ಮಣಿಪಾಲಕ್ಕೆ ಹೋಗ ಬಹುದು. ಅನುದಾನವನ್ನು ಶೀಘ್ರದಲ್ಲಿ ಬಿಡುಗಡೆ ಮಾಡಿ ಮಳೆಗಾಲದ ಒಳಗೆ ಕಾಮಗಾರಿ ಮುಗಿಸಬೇಕು.
-ಹಾವಂಜೆ ಶಂಕರ್‌,
ಸ್ಥಳೀಯರು

 

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.