ಶಿರ್ಲಾಲು ಸೂಡಿ ಬಸದಿಯ ಪುನಃ ನಿರ್ಮಾಣ ಸಂಕಲ್ಪ


Team Udayavani, Jul 9, 2018, 6:00 AM IST

0807ajke01.jpg

ಅಜೆಕಾರು:ಪಶ್ಚಿಮ ಘಟ್ಟ ತಪ್ಪಲಿನ ಕಾನನದ ನಡುವೆ ಇರುವ ಪುಟ್ಟ ಗ್ರಾಮ ಶಿರ್ಲಾಲು ಸೂಡಿ. ಇಲ್ಲಿನ ತಾಣದ ಬೆಟ್ಟು ಎಂಬಲ್ಲಿ ಸುಮಾರು ಎರಡು ಶತಮಾನಗಳಿಂದ ಯಾವುದೇ ಪೂಜೆ ಕಾರ್ಯಕ್ರಮ ನಡೆಯದೇ ಜನರ ಮನದಿಂದ ಕಣ್ಮರೆಯಾಗಿದ್ದ ಬಸದಿಯೊಂದು ಗೋಚರಕ್ಕೆ ಬಂದಿದ್ದು ಇದರ  ಪುನರ್‌ ನಿರ್ಮಾಣದ ಸಂಕಲ್ಪವನ್ನು ಸ್ಥಳೀಯರು ಮಾಡಿದ್ದಾರೆ.

ಸುಮಾರು 300 ವರ್ಷಗಳ ಹಿಂದೆ ನಿರ್ಮಾಣಗೊಂಡು ಸ್ಥಳೀಯರ ಆರಾಧ್ಯ ಆರಾಧನ ಕೇಂದ್ರವಾಗಿ ವೈಭವದಿಂದ ಧಾರ್ಮಿಕ ಚಟುವಟಿಕೆ ನಡೆಯುತ್ತಿದ್ದ ಈ ಬಸದಿಯಲ್ಲಿ 200 ವರ್ಷಗಳಿಂದ ಯಾವುದೇ ಧಾರ್ಮಿಕ ಕಾರ್ಯ ನಡೆದಿಲ್ಲ. ಅನಂತರದ ದಿನಗಳಲ್ಲಿ ಬಸದಿ ಶಿಥಿಲಗೊಂಡು ಸಂಪೂರ್ಣವಾಗಿ ಕುಸಿದು ಬಿದ್ದು ಗಿಡ ,ಮರ, ಪೊದೆಗಳಿಂದ ಆವೃತವಾಗಿ ಕಣ್ಮರೆಯಾಗಿತ್ತು.

ಬಸದಿಯ ಗರ್ಭಗುಡಿ ಕುಸಿದು ಬಿದ್ದು ಕೇವಲ ಗೋಡೆಯ ಮುರಕಲ್ಲುಗಳು ಅವಶೇಷವಾಗಿ ಕಂಡುಬಂದರೆ, ಬಸದಿಯ ಹೊರಭಾಗದಲ್ಲಿ ಕಲ್ಕುಡ ದೈವದ ಕಲ್ಲು ಪಾಳುಬಿದ್ದ ಸ್ಥಿತಿಯಲ್ಲಿದೆ.ಬಸದಿಗೆ ಸಂಬಂಧಪಟ್ಟಂತೆ ಸುಮಾರು 20 ಅಡಿ ಆಳದ ತೀರ್ಥಬಾವಿ ಪಾಳುಬಿದ್ದಿದೆ.ಇದರ ಸುತ್ತಲೂ ಗಡಿ ಕಲ್ಲುಗಳಿದ್ದು ಹಿಂದೆ ವೈಭವದಿಂದ ಧಾರ್ಮಿಕ ಚಟುವಟಿಕೆಗಳು ನಡೆಯುತ್ತಿದ್ದ ಬಗ್ಗೆ ಕುರುಹು ಗೋಚರಿಸುತ್ತಿವೆ.

ಸೂಡಿ ಮನೆತನದ ಆಡಳಿತಕ್ಕೊಳಪಟ್ಟ ಈ ಬಸದಿಯಲ್ಲಿ ಭಗವಾನ್‌ ಶ್ರೀ ಆದಿನಾಥ ಸ್ವಾಮಿ, ಮಹಾಮಾತೆ ಶ್ರೀ ಪದ್ಮಾವತಿ ದೇವಿ ಆರಾಧಿಸಿಕೊಂಡು ಬರಲಾಗುತ್ತಿತ್ತು. ಇತ್ತೀಚಿನ ದಿನಗಳಲ್ಲಿ ಸೂಡಿ ಮನೆತನ, ಸ್ಥಳೀಯ ಗಾಮಸ್ಥರಿಗೆ ಸಂಕಷ್ಟ ಎದುರಾದಾಗ ದೈವಜ್ಞರ ಆರೂಢ ಪಶ್ನೆಯಲ್ಲಿ ಕಂಡುಕೊಂಡಂತೆ ಬಸದಿ ಪುನರ್‌ ನಿರ್ಮಾಣದ ಸಂಕಲ್ಪ ಮಾಡಲಾಗಿದೆ.

ಬಸದಿಗೆ ಸಂಬಂಧಪಟ್ಟು ಹಿಂದೆ ಸುಮಾರು 400 ಎಕರೆ ಜಾಗ ಇದ್ದರೆ ಈಗ 25 ಸೆಂಟ್ಸ್‌ ಜಾಗ ಇದ್ದು ಅದರಲ್ಲಿ ಬಸದಿ ನಿರ್ಮಾಣ ಕಾರ್ಯ ನಡೆಯಲಿದೆ. 

40 ಲ.ರೂ. ವೆಚ್ಚದಲ್ಲಿ ಪುನರ್‌ ನಿರ್ಮಾಣ
ಪುನರ್‌ ನಿರ್ಮಾಣದ ಪೂರ್ವಭಾವಿಯಾಗಿ ನಡೆಯಬೇಕಾದ ಎಲ್ಲ ಧಾರ್ಮಿಕ ಕಾರ್ಯ ನಡೆಸಲಾಗಿದ್ದು ಮುಂದಿನ ದಿನಗಳಲ್ಲಿ ಹಿಂದೆ ಬಸದಿ ಇದ್ದ ಜಾಗದಲ್ಲಿಯೇ ಆಯಾ ಅಳತೆಗೆ ಅನುಗುಣವಾಗಿ ಬಸದಿ ನಿರ್ಮಿಸುವ ಸಲುವಾಗಿ ಸಮಿತಿ , ಟ್ರಸ್ಟ್‌ ರಚಿಸಲಾಗಿದೆ. ಜು. 15ರಂದು ಪೂಜೆಯೊಂದಿಗೆ ಉತVನನ ಕಾರ್ಯ ಆರಂಭವಾಗಲಿದ್ದು  ಅನಂತರ ಸುಮಾರು 40 ಲ.ರೂ. ವೆಚ್ಚದಲ್ಲಿ ವಾಸ್ತು ಪ್ರಕಾರವಾಗಿ ಬಸದಿ ನಿಮಾರ್ಣಗೊಳ್ಳಲಿದೆ .

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.