ಹೊಂಡ-ಗುಂಡಿಗಳ ಶಿರಿಯಾರ-ಚಾರುಕೊಟ್ಟಿಗೆ ರಸ್ತೆ
ಸಂಪೂರ್ಣ ಹದಗೆಟ್ಟ 5 ಕಿ.ಮೀ. ರಸ್ತೆ ; ವಾಹನ ಸಂಚಾರವೇ ದುಸ್ತರ
Team Udayavani, Aug 20, 2019, 5:13 AM IST
ವಿಶೇಷ ವರದಿ-ಹೆಸ್ಕಾತ್ತೂರು: ಶಿರಿಯಾರದಿಂದ ಚಾರು ಕೊಟ್ಟಿಗೆ ಕಡೆಗೆ ಸಂಚರಿಸುವ ಸುಮಾರು 5 ಕಿ.ಮೀ. ಅಂತರದ ರಸ್ತೆ ಹೊಂಡ-ಗುಂಡಿಗಳಿಂದ ಕೂಡಿದ್ದು, ಸಂಪೂರ್ಣ ಹದಗೆಟ್ಟು ಹೋಗಿದೆ. ಈ ಮಾರ್ಗದಲ್ಲಿ ವಾಹನ ಸವಾರರು ಸಂಚರಿಸುವುದೇ ಕಷ್ಟಕರವಾಗಿದೆ.
ಶಿರಿಯಾರದಿಂದ ಕೊರ್ಗಿ, ಹೆಸ್ಕತ್ತೂರು, ಚಾರುಕೊಟ್ಟಿಗೆಗೆ ಸಂಚರಿಸುವ ಪ್ರಮುಖ ಮಾರ್ಗ ಇದಾಗಿದ್ದು, ನಿತ್ಯ ನೂರಾರು ವಾಹನಗಳು ಇದೇ ಮಾರ್ಗವಾಗಿ ಸಂಚರಿಸುತ್ತವೆ.
ಬೃಹತ್ ಹೊಂಡಗಳು
ಈ ಮಾರ್ಗದುದ್ದಕ್ಕೂ ಅಲ್ಲಲ್ಲಿ ಬೃಹತ್ ಗಾತ್ರದ ಹೊಂಡಗಳು ಬಾಯ್ದೆರೆದುಕೊಂಡಿದ್ದು, ಅಪಾಯವನ್ನು ಆಹ್ವಾನಿಸುವಂತಿದೆ. ಅದರಲ್ಲೂ ಈಗ ಮಳೆಗೆ ರಸ್ತೆಯಿಡೀ ನೀರು ನಿಂತಿದ್ದು, ರಸ್ತೆಯಲ್ಲಿ ಎಲ್ಲಿ ಹೊಂಡ ಇದೆ, ಎಲ್ಲಿ ರಸ್ತೆ ಸರಿ ಇದೆ ಎನ್ನುವುದೇ ತಿಳಿಯದ ಸ್ಥಿತಿ. ರಸ್ತೆ ಸರಿ ಇದೆ ಎಂದು ವಾಹನ ಚಲಾಯಿಸಿದರೆ ಗುಂಡಿಗೆ ಬಿದ್ದು, ಎಡವಿ ಬೀಳುವ ಸಂಭವವೂ ಇದೆ.
ಗುಡ್ಡಟ್ಟುಗೆ ಸಂಪರ್ಕ ರಸ್ತೆ
ಕೊರ್ಗಿಯಿಂದ ಇದೇ ಮಾರ್ಗವಾಗಿ ಪುರಾಣ ಪ್ರಸಿದ್ಧ ಗುಡ್ಡಟ್ಟು ಗಣಪತಿ ದೇವಸ್ಥಾನಕ್ಕೆ ತೆರಳಲು ಹತ್ತಿರದ ರಸ್ತೆ ಇದಾಗಿದೆ.
ಬಸ್ ಸಂಚಾರಕ್ಕೂ ಅಡ್ಡಿ
ಶಿರಿಯಾರದಿಂದ ಹೆಸ್ಕಾತ್ತೂರು ಮೂಲಕವಾಗಿ ಇದೇ ಮಾರ್ಗದಲ್ಲಿ ನಿತ್ಯ ಬಸ್ಗಳು ಸಂಚರಿಸುತ್ತಿದ್ದು, ಈ ಹೊಂಡ -ಗುಂಡಿಗಳ ರಸ್ತೆಯಲ್ಲಿ ಬಸ್ಗಳು ಸಂಚರಿಸುವುದೇ ಕಷ್ಟಕರವಾಗಿದೆ.
ದುರಸ್ತಿಗೆ ಮನವಿ ಸಲ್ಲಿಕೆ
ಕೊರ್ಗಿ, ಹೆಸ್ಕಾತ್ತೂರು, ಚಾರುಕೊಟ್ಟಿಗೆಗೆ ಸಂಚರಿಸುವ ರಸ್ತೆ ಅಭಿವೃದ್ಧಿಗೆ ಶಾಸಕರು ಅನುದಾನ ಮಂಜೂರು ಮಾಡಿಸಿದ್ದು, ಟೆಂಡರ್ ಕೂಡ ಕರೆಯಲಾಗಿದೆ. ಮಳೆ ಕಡಿಮೆಯಾದ ಬಳಿಕ ಕಾಮಗಾರಿ ಆರಂಭವಾಗಬಹುದು.
– ಶ್ರೀಲತಾ ಸುರೇಶ್ ಶೆಟ್ಟಿ, ಸ್ಥಳೀಯ ಜಿ.ಪಂ. ಸದಸ್ಯರು
ತೇಪೆ ಆದರೂ ಹಾಕಲಿ
ನಾವು ಇದೇ ಮಾರ್ಗವಾಗಿ ದಿನಾಲೂ ಸಂಚರಿಸಬೇಕಾಗುತ್ತದೆ. ಹೊಂಡ – ಗುಂಡಿಗಳಿರುವ ಈ ರಸ್ತೆಯಲ್ಲಿ ಬೈಕ್ ಚಲಾಯಿಸುವುದೇ ಸವಾಲಿನ ಸಂಗತಿ. ರಾತ್ರಿ ವೇಳೆ ಅಂತೂ ನೀರು ನಿಂತು, ಹೊಂಡ, ಗುಂಡಿಗಳು ಇರುವುದು ತಿಳಿಯುವುದೇ ಇಲ್ಲ. ಈಗ ಮಳೆಗಾಲದಲ್ಲಿ ಕನಿಷ್ಠ ತೇಪೆ ಕಾರ್ಯವಾದರೂ ಮಾಡಲಿ ಎನ್ನುವುದಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು