108 ವರ್ಷಗಳ ಇತಿಹಾಸದೊಂದಿಗೆ ಮುನ್ನಡೆಯುತ್ತಿರುವ ಸರಕಾರಿ ಕನ್ನಡ ಶಾಲೆ

ಅತ್ಯಂತ ಗ್ರಾಮೀಣ ಭಾಗದ ಶಿರ್ಲಾಲು ಸೂಡಿ ಸರಕಾರಿ ಹಿ. ಪ್ರಾ. ಶಾಲೆ

Team Udayavani, Nov 8, 2019, 5:44 AM IST

0711AJKE01

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

ಅಜೆಕಾರು: ಕಾರ್ಕಳ ತಾಲೂಕಿನ ಅತ್ಯಂತ ಗ್ರಾಮೀಣ ಭಾಗವಾದ ಶಿರ್ಲಾಲು ಸೂಡಿ ಸರಕಾರಿ ಹಿ.ಪ್ರಾ. ಶಾಲೆ ಯಶಸ್ವಿಯಾಗಿ 108 ವರ್ಷಗಳನ್ನು ಕಳೆದು ಮುನ್ನಡೆಯುತ್ತಿದೆ. ಶಿರ್ಲಾಲು ಪರಿಸರದ ಆಸುಪಾಸಿನಲ್ಲಿ ಶಾಲೆಗಳಿಲ್ಲದೆ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿರುವುದನ್ನು ಮನಗಂಡ ಸ್ಥಳಿಯರು ಗ್ರಾಮಸ್ಥರ ಸಹಕಾರದೊಂದಿಗೆ
ಶಿರ್ಲಾಲು ಸೂಡಿ ಮನೆತನದ ಚೆಲುವಯ್ಯ ಹೆಗ್ಡೆಯವರು ದಾನವಾಗಿ ನೀಡಿದ ಸ್ಥಳದಲ್ಲಿ 1911ರಲ್ಲಿ ಬೋರ್ಡ್‌ ಪ್ರಾಥಮಿಕ ಶಾಲೆ ಆರಂಭಿಸಿ ಅನಂತರದ ದಿನಗಳಲ್ಲಿ ಹಿರಿಯ ಪ್ರಾಥಮಿಕ ಶಾಲೆಯಾಗಿ ಭಡ್ತಿ ಹೊಂದಿತ್ತು.

ಶಾಲೆ ಆರಂಭವಾದ ದಿನಗಳಲ್ಲಿ ಮುಂಡ್ಲಿ, ಕೆರ್ವಾಶೆ ಗ್ರಾಮಗಳಿಂದ ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದರು. ಈಗ ಈ ವ್ಯಾಪ್ತಿಯಲ್ಲಿ ಇತರ 7 ಶಾಲೆಗಳು ಆರಂಭಗೊಂಡಿದ್ದರೂ ಸೂಡಿ ಶಾಲೆಯಲ್ಲಿ ಮಕ್ಕಳ ಸಂಖ್ಯೆಗೆ ಕೊರತೆ ಇಲ್ಲ.

ಪ್ರಸ್ತುತ 94 ವಿದ್ಯಾರ್ಥಿಗಳು
ಆರಂಭದ ವರ್ಷಗಳಲ್ಲಿ ಪಂಗ್ಲಬೆಟ್ಟುವಿನ ಜಾಣ ಹೆಗ್ಡೆಯವರು ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಮುಖ್ಯ ಶಿಕ್ಷಕಿಯಾಗಿ ಆಶಾಬಾನು ಕಾರ್ಯನಿರ್ವಹಿಸುತ್ತಿದ್ದು ಸಹಶಿಕ್ಷಕರು 4 ಮಂದಿ ಜತೆಗೆ ಇಬ್ಬರು ಗೌರವ ಶಿಕ್ಷಕಿಯರು ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ಶಾಲೆಯಲ್ಲಿ 94 ವಿದ್ಯಾರ್ಥಿಗಳು ವಿದ್ಯಾರ್ಜನೆ ನಡೆಸುತ್ತಿದ್ದು ಶಾಲೆಯು 2016-17ನೇ ಸಾಲಿನಲ್ಲಿ ಉತ್ತಮ ಶಾಲೆ ಪ್ರಶಸ್ತಿ ಪಡೆದಿದೆ. ಪ್ರಸಕ್ತ ಸಾಲಿನಲ್ಲಿ ಶಾಲೆಯ ಶಿಕ್ಷಕ ಲಕ್ಷ್ಮಣ್‌ ಸಾಳ್ವಣ್‌ಕರ್‌ ಜಿಲ್ಲಾ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅಲ್ಲದೆ ಹಿಂದೆ ಉತ್ತಮ ಶಾಲಾಭಿವೃದ್ಧಿ ಸಮಿತಿ ಎಂಬ ಪ್ರಶಸ್ತಿಗೂ ಶಾಲೆ ಪಾತ್ರವಾಗಿತ್ತು.

ಸಾಧಕ ಹಳೆವಿದ್ಯಾರ್ಥಿಗಳು
ಈ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಹುದ್ದೆಯಲ್ಲಿದ್ದಾರೆ. ಇಲ್ಲಿನ ಹಳೆ ವಿದ್ಯಾರ್ಥಿಗಳಲ್ಲಿ ಹಲವರು ಡಾಕ್ಟರ್, ಇಂಜಿನಿಯರ್, ನೂರಾರು ಮಂದಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೆ ಬಹಳಷ್ಟು ಮಂದಿ ಮುಂಬಯಿ ಸೇರಿದಂತೆ ದೇಶದ ಬೃಹತ್‌ ನಗರಗಳಲ್ಲಿ ಹೊಟೇಲ್‌ ಹಾಗೂ ಇತರ ಉದ್ಯಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದು ಖ್ಯಾತ ಉದ್ಯಮಿಗಳಾಗಿದ್ದಾರೆ.

ಬೇಡಿಕೆಗಳು
ಶಾಲೆಯು 2017ನೇ ಸಾಲಿನಲ್ಲಿ ಶತಮಾನೋತ್ಸವ ಆಚರಿಸಿದ್ದು ಈ ಸಂದರ್ಭ ಶತಸ್ಮತಿ ಶಾಲಾ ಸಭಾಭವನ, ಧ್ವಜಕಟ್ಟೆ, ಶಾಲಾ ಮುಂಭಾಗ ಇಂಟರ್‌ಲಾಕ್‌ ಅಳವಡಿಕೆ, ಶಾಲಾ ಬಳಿಯಲ್ಲೇ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್‌ ತಂಗುದಾಣ ಒದಗಿಸಲಾಗಿದೆ. ಎಜುಸ್ಯಾಟ್‌, ಕುಡಿಯುವ ನೀರಿನ ವ್ಯವಸ್ಥೆ ಶಾಲೆ ಒಳಗೊಂಡಿದ್ದು ಕಂಪ್ಯೂಟರ್‌ ಶಿಕ್ಷಣ ನೀಡಲು ಕಂಪ್ಯೂಟರ್‌ ಅವಶ್ಯಕತೆ ಶಾಲೆಗಿದೆ.

ಪ್ರಸಕ್ತ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಠ್ಯ ಶಿಕ್ಷಣದ ಜತೆಗೆ ಪಠ್ಯೇತರ ವಿಷಯಗಳಾದ ವಾಚನಾಲಯ, ಕ್ರೀಡಾ ಉಪಕರಣಗಳು ಈ ಶಾಲೆಯಲ್ಲಿದ್ದು ವಿದ್ಯಾರ್ಥಿಗಳ ಭವಿಷ್ಯದ ಉಜ್ವಲಕ್ಕಾಗಿ, ಭಾರತ ಸೇವಾದಳ, ಯೋಗಾಭ್ಯಾಸಗಳನ್ನು ಕಲಿಸಲಾಗುತ್ತಿದೆ. ಶಾಲೆಯಲ್ಲಿ ಇಂಗ್ಲಿಷ್‌ ನ್ಪೋಕನ್‌ ತರಗತಿ ನಡೆಸಲಾಗುತ್ತಿದೆ.

ಶಾಲೆಯು ಕಟ್ಟಡ ಇರುವಲ್ಲಿ 60 ಸೆಂಟ್ಸ್‌ ಹಾಗೂ ಕೆಲವೇ ಮೀಟರ್‌ ಅಂತರದಲ್ಲಿ 2.75 ಎಕ್ರೆ ವಿಶಾಲ ಜಾಗ ಒಳಗೊಂಡಿದೆ. ಈ ಪ್ರದೇಶದಲ್ಲಿ ಶಾಲಾವನ ನಿರ್ಮಾಣ , ಸುಸಜ್ಜಿತ ಆಟದ ಮೈದಾನ ಹೊಂದಿದೆ.

ಶಿರ್ಲಾಲು ಸೂಡಿ ಶಾಲೆ ಶತಮಾನ ಕಂಡಿದ್ದು ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಮಕ್ಕಳಿಗೆ ಮನೆಯ ವಾತಾವರಣದಂತೆ ಶಿಕ್ಷಣ ನೀಡಲಾಗುತ್ತಿದ್ದು ಗ್ರಾಮಸ್ಥರ ಸಹಕಾರ, ಕೊಡುಗೆಗಳಿಂದ ಶಾಲೆ ಪ್ರಗತಿಪಥದಲ್ಲಿ ಮುನ್ನಡೆಯುತ್ತಿದೆ.
-ಆಶಾಭಾನು, ಮುಖ್ಯ ಶಿಕ್ಷಕರು

ಅತ್ಯಂತ ಗ್ರಾಮೀಣ ಭಾಗವಾದ ಶಿರ್ಲಾಲುವಿ ನಲ್ಲಿ ಶಿಕ್ಷಣದ ಕೊರತೆ ನೀಗಿಸಲು ಗ್ರಾಮಸ್ಥರು ಶಾಲೆಯನ್ನು ನಿರ್ಮಾಣ ಮಾಡಿದ್ದು ಶಿರ್ಲಾಲು ಸೇರಿದಂತೆ ಪರಿಸರದ ಸಾವಿರಾರು ವಿದ್ಯಾರ್ಥಿಗಳ ಜೀವನಕ್ಕೆ ಬೆಳಕಾಗಿ ಈ ಶಾಲೆ ರೂಪುಗೊಂಡಿತ್ತು. ಶಿಕ್ಷಕರ ಗುಣಮಟ್ಟದ ಶಿಕ್ಷಣ ಜತೆಗೆ ಗ್ರಾಮಸ್ಥರ ನಿರಂತರ ಪ್ರೋತ್ಸಾಹ ದೊಂದಿಗೆ ಶತಮಾನ ಕಳೆದು ಮುನ್ನಡೆಯುತ್ತಿದೆ.
-ಅನಂತ್ರಾಜ್‌ ಪೂವಣಿ,
ಮಾಜಿ ಅಧ್ಯಕ್ಷರು, ಮಂಡಲ ಪಂಚಾಯತ್‌, ಅಜೆಕಾರು

- ಜಗದೀಶ ಅಜೆಕಾರು

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.