ಶಿರೂರು -ಬೈಂದೂರು: ಬಿಜೆಪಿ ಸಂಭ್ರಮಾಚರಣೆ
Team Udayavani, May 25, 2019, 6:10 AM IST
ಬೈಂದೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಅತ್ಯಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದೆ.
ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎಂ. ಸುಕುಮಾರ ಶೆಟ್ಟಿ 24,700ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆ ಬಳಿಕ ನಡೆದ ಉಪಚುನಾವಣೆಯಲ್ಲಿ ಬಿ.ವೈ. ರಾಘವೇಂದ್ರ 14,000 ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿ 73,622 ಮತಗಳ ಅಂತರದಿಂದ ಮುನ್ನಡೆ ಕಂಡಿರುವುದು ರಾಜ್ಯದಲ್ಲೆ ವಿಧಾನಸಭಾ ಕ್ಷೇತ್ರವೊಂದರಲ್ಲಿ ಬಿಜೆಪಿಗೆ ದೊರೆತ ಅತ್ಯಧಿಕ ಮುನ್ನಡೆಗಳ ಪೈಕಿ ಒಂದಾಗಿದೆ. ಕ್ಷೇತ್ರದ ಬಹುತೇಕ ಎಲ್ಲಾ ಜಿ.ಪಂ ಕ್ಷೇತ್ರಗಳಲ್ಲೂ ಬಿಜೆಪಿ ಮುನ್ನೆಡೆ ಸಾಧಿಸಿದೆ.
ಶಿರೂರು ಜಿ.ಪಂ ವ್ಯಾಪ್ತಿಯಲ್ಲಿ 6,300, ಖಂಬದಕೋಣೆ ಜಿ.ಪಂ ನಲ್ಲಿ 12,000 ಹಾಗೂ ಉಪ್ಪುಂದ ವ್ಯಾಪ್ತಿಯಲ್ಲಿ 3755 ಮತಗಳ ಬಿಜೆಪಿ ಮುನ್ನೆಡೆ ಸಾಧಿಸಿದೆ.ದೇಶಾದ್ಯಂತ ಮತ್ತು ಕ್ಷೇತ್ರದಲ್ಲಿನ ಅಭೂತಪೂರ್ವ ಗೆಲುವನ್ನು ಬೈಂದೂರಿನ ವಿವಿಧ ಭಾಗಗಳಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ಆಚರಿಸಲಾಯಿತು.ಶಿರೂರಿನ ವಿವಿಧ ಕಡೆ ಬಿಜೆಪಿ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿ ಸಂಭ್ರಮ ಆಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ