![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಶೀರೂರು ಶ್ರೀ ಪ್ರಕರಣ ವಾರದಲ್ಲಿ ಎಫ್ಎಸ್ಎಲ್ ವರದಿ
Team Udayavani, Aug 20, 2018, 12:09 PM IST
![shiruru.png](https://www.udayavani.com/wp-content/uploads/2018/08/20/shiruru-620x389.png)
ಉಡುಪಿ: ಕುತೂಹಲ ಕೆರಳಿಸಿದ್ದ ಶೀರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ ನಿಧನ ಕುರಿತು ಎದ್ದ ಊಹಾಪೋಹಗಳಿಗೆ ಈ ವಾರದೊಳಗೆ ತೆರೆ ಬೀಳಲಿದೆ. ಮೃತದೇಹದ ಅಂಶಗಳು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್ಎಲ್) ರವಾನೆಯಾಗಿದ್ದು, ವರದಿ ಇನ್ನೊಂದೆರಡು ದಿನಗಳಲ್ಲಿ ಬರುವ ನಿರೀಕ್ಷೆ ಇದೆ. ಈಗಾಗಲೇ ಪ್ರಾಥಮಿಕ ಮರಣೋತ್ತರ ಪರೀಕ್ಷಾ ವರದಿ ಕೈಸೇರಿದೆ. ಇನ್ನಷ್ಟು ಸೂಕ್ಷ್ಮ ಅಂಶಗಳಿಗಾಗಿ ಎಫ್ಎಸ್ಎಲ್ ವರದಿಗಾಗಿ ಕಾಯಲಾಗುತ್ತಿದೆ.
ಈ ವರದಿ ಬಂದ ಬಳಿಕ ಪೊಲೀಸರು ಸಮಗ್ರ ವರದಿ ಬಹಿರಂಗಗೊಳಿಸಲಿದ್ದಾರೆ. ಅನಂತರ ಶೀರೂರು ಮೂಲ ಮಠದ ಸುಪರ್ದಿಯನ್ನು ದ್ವಂದ್ವ ಮಠವಾದ ಸೋದೆ ಮಠಕ್ಕೆ ಬಿಟ್ಟುಕೊಡಲಿದ್ದಾರೆ. ಬಳಿಕ ವಿವಿಧ ಹೋಮಗಳೇ ಮೊದಲಾದ ಧಾರ್ಮಿಕ ಕ್ರಿಯೆಗಳ ಸಹಿತ ಆರಾಧನೆಯನ್ನು ನಡೆಸಲಾಗುವುದು.
ಸೋದೆ ಮಠಾಧೀಶರು ಶಿರಸಿ ಸಮೀಪದ ಸೋಂದಾ ಕ್ಷೇತ್ರದಲ್ಲಿ ಚಾತುರ್ಮಾಸ ವ್ರತದಲ್ಲಿ ಇರುವುದರಿಂದ ಅವರ ಮಾರ್ಗದರ್ಶನದಲ್ಲಿ ವೈದಿಕರು ಆರಾಧನೆ ನಡೆಸಲಿದ್ದಾರೆ. ಇದೆಲ್ಲವೂ ಅಂದುಕೊಂಡಂತೆ ನಡೆದರೆ ಆ. 25ರಂದು ಶೀರೂರು ಮಠದ ಮುಖ್ಯಪ್ರಾಣ ದೇವರಿಗೆ ಶನಿವಾರದ ರಂಗಪೂಜೆ ಸಾರ್ವಜನಿಕರ ಪ್ರವೇಶದೊಂದಿಗೆ ನಡೆಯಲಿದೆ. ಕಳೆದೊಂದು ತಿಂಗಳಿಂದ ರಂಗಪೂಜೆ ನಡೆಯುತ್ತಿದ್ದರೂ ಸಾರ್ವಜನಿಕರಿಗೆ ಪ್ರವೇಶವಿರಲಿಲ್ಲ. ಇದಾದ ಬಳಿಕ ಪ್ರತಿ ಶನಿವಾರ ರಂಗಪೂಜೆ ಹಿಂದಿನಂತೆ ನಡೆಯಲಿದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.