
ಶಿರ್ವ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಬಂಧನ
ಗೋ ಕಳ್ಳತನ.... 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ..
Team Udayavani, Mar 31, 2023, 7:48 PM IST

ಶಿರ್ವ: ಇಲ್ಲಿನ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಗೋ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಮಂಗಳೂರು ಬಾಳ ಗ್ರಾಮದ ಜೋಕಟ್ಟೆ ಕಾಳಾವರ ಸೈಂಟ್ ಜೋಸೆಫ್ ಚರ್ಚ್ಬಳಿಯ ನಿವಾಸಿ ಹುಸೇನ್ ಕಬೀರ್ ವಾರೆಂಟ್ ಅಸಾಮಿಯನ್ನು ಶಿರ್ವ ಪೊಲೀಸ್ ಉಪನಿರೀಕ್ಷಕ ರಾಘವೇಂದ್ರ ಸಿ. (ಕಾನೂನು ಮತ್ತು ಸುವ್ಯವಸ್ಥೆ) ಅವರ ಮಾರ್ಗದರ್ಶನದಂತೆ ಎಎಸ್ಐ ವಿವೇಕಾನಂದ ಮತ್ತು ಪಿಸಿಗಳಾದ ರಘು,ರಿತೇಶ್ ಮತ್ತು ಅಖೀಲ್ ಮಾ. 31 ರಂದು ಮಂಗಳೂರಿನ ಜೋಕಟ್ಟೆಯಲ್ಲಿ ಬಂಧಿಸಿ ಕರೆತಂದಿದ್ದಾರೆ.
ಹೆಡ್ಕಾನ್ಸ್ಟೆàಬಲ್ ಭಾಸ್ಕರ್ ಮತ್ತು ಪಿಸಿ ವಿನೋದ್ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ಎಸ್ಸಿ ನಂಬ್ರ ಆಗುವವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯನ್ನು ಹಿರಿಯಡ್ಕ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಈತನ ಮೇಲೆ ಕಾಪು,ಕಾರ್ಕಳ,ಗಂಗೊಳ್ಳಿ ಭಟ್ಕಳ ನಗರ,ವೇಣೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿಯಿರುತ್ತದೆ. ಅಲ್ಲದೆ ಈ ಹಿಂದೆ ಉಡುಪಿ ಜಿಲ್ಲೆಯ ಹಿರಿಯಡ್ಕ, ಪಡುಬಿದ್ರಿ, ಮಣಿಪಾಲ, ಅಜೆಕಾರು, ದ.ಕ. ಜಿಲ್ಲೆಯ ಮಂಗಳೂರು,ಸುರತ್ಕಲ್ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ,ಶೃಂಗೇರಿ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುತ್ತವೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
