ಶಿರ್ವ ದೇವಿ ಸನ್ನಿಧಿ: ವಿಶ್ವರೂಪ ದರ್ಶನ
Team Udayavani, Nov 8, 2019, 12:02 AM IST
ಶಿರ್ವ: ಕಾಶೀಮಠ ಶಿರ್ವ ಶ್ರೀ ಮಹಾಲಸಾ ನಾರಾಯಣೀ ದೇವಿಯ ಸನ್ನಿಧಿಯಲ್ಲಿ ಪಶ್ಚಿಮ ಜಾಗರಣೆಯ ಅಂಗವಾಗಿ ಕಾರ್ತಿಕ ಮಾಸದಲ್ಲಿ ವರ್ಷಂಪ್ರತಿ ನಡೆಯುವ ಸಹಸ್ರಾರು ಹಣತೆಗಳ ದೀಪಾಲಂಕಾರ ಪೂಜಾ ವೈಭವ ವಿಶ್ವರೂಪ ದರ್ಶನ ಸೇವೆಯು ಗುರುವಾರ ಮುಂಜಾವ ಗಂಟೆ 5.00ಕ್ಕೆ ನೆರವೇರಿತು.
ಪ್ರಾತಃಕಾಲ ದೇವಸ್ಥಾನದ ಭಕ್ತಾದಿಗಳಿಂದ ಭಜನ ಸೇವೆ ನಡೆದು ಬೆಳಗ್ಗೆ ಗಂ.5ರಿಂದ ದೀಪಾಲಂಕಾರ,ಉಷಃಕಾಲದ ಜಾಗರ ಪೂಜೆ ಮೊದಲಾದ ಧಾರ್ಮಿಕ ಕಾರ್ಯಕ್ರಮ ವಿಧಿ ವಿಧಾನಗಳು ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಭಟ್ ಅವರ ನೇತೃತ್ವದಲ್ಲಿ ನಡೆದವು.
ಕಾರ್ತಿಕ ಮಾಸದಲ್ಲಿ ಸೂರ್ಯೋದಯಕ್ಕೆ ಮುನ್ನ ದೀಪಾರಾಧನೆ ಮಾಡಿದರೆ ಆರೋಗ್ಯ ರಕ್ಷಾ ದೀಪವಾಗಿ ಸಕಲ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂಬ ನಂಬಿಕೆಯಿಂದ ಭಕ್ತರು ಸಹಸ್ರಾರು ಹಣತೆಗಳನ್ನು ಉರಿಸಿ ದೀಪಾಲಂಕಾರ ಪೂಜಾ ವೈಭವದಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು.
ದೇವಸ್ಥಾನದ ಆಡಳಿತ ಮಂಡಳಿ ಯ ಸದಸ್ಯರಾದ ರಾಮದಾಸ ಶೆಣೈ, ಸತ್ಯನಾರಾಯಣ ನಾಯಕ್, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸðತ ಸಮಾಜ ಸೇವಕ ಅನಂತ್ರಾಯ ಶೆಣೈ, ಶಿರ್ವ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಶ್ರೀಪತಿ ಕಾಮತ್, ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ, ಜಿ. ವಸಂತ ಶೆಣೈ, ಡಾ| ವಿ.ಎಸ್.ಬೆಳ್ಳೆ, ಪತಂಜಲಿ ಯೋಗ ಸಮಿತಿಯ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು