
ಶಿರ್ವ: ನೀರು ಪಾಲಾದ ಯುವಕನ ಶವ ಪತ್ತೆ
Team Udayavani, Oct 11, 2021, 1:42 PM IST

ಶಿರ್ವ: ನಡಿಬೆಟ್ಟು ಆಣೆಕಟ್ಟು ಬಳಿ ರವಿವಾರ ಸಂಜೆ ಗಾಳ ಹಾಕಿ ಮೀನು ಹಿಡಿಯಲು ಹೋಗಿ ಆಕಸ್ಮಾತ್ತಾಗಿ ಜಾರಿಬಿದ್ದು ನೀರು ಪಾಲಾದ ಶಿರ್ವ ಮಟ್ಟಾರು ನಿವಾಸಿ ದಿಲೀಪ್ (30) ಅವರ ಶವ ಸೋಮವಾರ ಮಧ್ಯಾಹ್ನ ಆಣೆಕಟ್ಟು ಬಳಿ ಪತ್ತೆಯಾಗಿದೆ.
ಉಡುಪಿ ಅಗ್ನಿಶಾಮಕ ದಳದ ಠಾಣಾಧಿಕಾರಿ ಸತೀಶ್.ಏನ್. ನೇತೃತ್ವದಲ್ಲಿ ಗ್ರೂಪ್ ಲೀಡರ್ ಸತೀಶ್ ಮತ್ತು ಸಿಬಂದಿ ಹಾಗೂ ಮಲ್ಪೆಯ ಮುಳುಗುತಜ್ಞ ಈಶ್ವರ್ ಸತತ 4 ಗಂಟೆ ಗಳ ಕಾಲ ಕಾರ್ಯಚರಣೆ ನಡೆಸಿ ಶವವನ್ನು ಪತ್ತೆಹಚ್ಚಿದ್ದಾರೆ. ರವಿವಾರ ರಾತ್ರಿ ಬೆಳಕಿನ ಅಡಚನೆಯಿಂದಾಗಿ ಕಾರ್ಯಚರಣೆ ಸ್ಥಗಿತಗೊಳಿಸಲಾಗಿತ್ತು.
ಘಟನಾ ಸ್ಥಳಕ್ಕೆ ಶಿರ್ವ ಪಿ ಎಸ್ ಐ ಶ್ರೀಶೈಲ್ ಮುರಾಗೋಡ್ ಮತ್ತು ಸಿಬಂದಿ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಅಗ್ನಿಶಾಮಕ ದಳದ ಶಂಕರ್, ಉಮೇಶ್, ವಿನಾಯಕ, ಚಂದ್ರಶೇಖರ, ಸುಜೇಶ್ ಮತ್ತು ಆದರ್ಶ್ ಪಾಲ್ಗೊಂಡಿದ್ದರು.
ದಿಲೀಪ್ ದೈವ ನರ್ತಕರಾಗಿದ್ದರು. ಈ ಸಂಬಂಧ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕದಿಂದ ಸಾಮಾಜಿಕ ಮೌನ ಕ್ರಾಂತಿ: ಡಾ| ಆಳ್ವ

ಮಟ್ಟು: ಮನೆಯೊಂದರಲ್ಲಿ ಅಗ್ನಿ ಆಕಸ್ಮಿಕ, 3 ಲಕ್ಷಕ್ಕೂ ಅಧಿಕ ನಷ್ಟ

ಚಿನ್ನದ ಬ್ರೇಸ್ಲೆಟ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬ್ಲೂ ಫ್ಲ್ಯಾಗ್ ಸಿಬಂದಿ

ಶಿರ್ವ ಆರೋಗ್ಯ ಮಾತಾ ಚರ್ಚ್ ವಾರ್ಷಿಕ ಮಹೋತ್ಸವ ಸಂಪನ್ನ

ತ್ರಿಶಾ ಕ್ಲಾಸಸ್: ಸಿಎ ಫೈನಲ್, ಸಿ.ಎಸ್.ಇ.ಇ.ಟಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದನೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
