ಶಿರ್ವ:ಬಾವಿಗೆ ಬಿದ್ದವನ ರಕ್ಷಣೆ
Team Udayavani, Feb 23, 2018, 8:58 AM IST
ಶಿರ್ವ: ಕುಡಿತದ ಮತ್ತಿನಲ್ಲಿ ದಂಡೆಯ ಮೇಲೆ ಕುಳಿತಿದ್ದ ವ್ಯಕ್ತಿಯೋರ್ವರು ಬಾವಿಗೆ ಬಿದ್ದಿದ್ದು, ಆತನನ್ನು ಶಿರ್ವ ಪೊಲೀಸರು ಊರವರ ಸಹಕಾರದೊಂದಿಗೆ ಗುರುವಾರ ಬೆಳಗ್ಗೆ ಮೇಲಕ್ಕೆತ್ತಿ ರಕ್ಷಿಸಿದ್ದಾರೆ.
ತೆಂಕ ಎರ್ಮಾಳು ಅದಮಾರು ಮಠದ ಬಳಿಯ ನಿವಾಸಿ ಕೇಶವ (43) ಬಾವಿಗೆ ಬಿದ್ದವರು. ಇವರು ಪತ್ನಿಯೊಂದಿಗೆ ಜಗಳವಾಡಿ ಶಿರ್ವಕ್ಕೆ ಬಂದು ಬಂಗ್ಲೆ ಮೈದಾನ ಕ್ರಾಸ್ ರಸ್ತೆ ಬಳಿಯ ಮನೆಯ ಗೇಟ್ ಹಾರಿ ಬಾವಿಯ ಬಳಿಗೆ ಹೋಗಿದ್ದ. ದಂಡೆಯ ಮೇಲೆ ಕುಳಿತಿದ್ದವ ಆಯತಪ್ಪಿ ಬಾವಿಗೆ ಬಿದ್ದು ರಾತ್ರಿಯಿಡೀ ಪಂಪ್ಸೆಟ್ನ ಹಗ್ಗ ಹಿಡಿದು ಜೀವ ಉಳಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗಿನ ಜಾವ ಅವರ ಬೊಬ್ಬೆ ಕೇಳಿ ಸ್ಥಳೀಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.
ಕಳವಿಗೆ ಬಂದಿದ್ದ: ಸ್ಥಳೀಯರ ಶಂಕೆ
ಘಟನೆ ನಡೆದ ಮನೆಮಂದಿ 2 ದಿನಗಳ ಹಿಂದೆ ಮನೆ ಹಾಗೂ ಗೇಟ್ಗೆ ಬೀಗ ಹಾಕಿ ಮುಂಬಯಿಗೆ ತೆರಳಿದ್ದರು. ಈತ ಬುಧವಾರ ಸಂಜೆ ವೇಳೆ ಆ ಪ್ರದೇಶದಲ್ಲಿ ಅಡ್ಡಾಡಿ ಕೊಂಡಿದ್ದು, ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಬಾವಿಯಲ್ಲಿರುವ ಪಂಪ್ಸೆಟ್ ಕದಿಯಲು ಹೋಗಿ ಒಳಗೆ ಬಿದ್ದಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ