ಶಿರ್ವ: ನೂತನ ಬಸ್‌ ನಿಲ್ದಾಣ ಲೋಕಾರ್ಪಣೆಗೆ ಸಜ್ಜು

ಹೆತ್ತವರ ವಿವಾಹ ಸ್ವರ್ಣ ಮಹೋತ್ಸವದ ಸವಿನೆನಪಿಗೆ ಕೊಡುಗೆ ನೀಡಿದ ಮಕ್ಕಳು

Team Udayavani, May 17, 2022, 10:51 AM IST

shirva

ಶಿರ್ವ: ಬೆಳೆಯುತ್ತಿರುವ ಶಿರ್ವ ಮಂಚಕಲ್‌ ಪೇಟೆಯ ಹೃದಯ ಭಾಗದಲ್ಲಿದ್ದ ಹಳೆಯ ಬಸ್‌ ನಿಲ್ದಾಣಕ್ಕೆ ಮುಕ್ತಿ ದೊರೆತಿದ್ದು, ಶಿರ್ವ ಅಟ್ಟಿಂಜೆ ಶಂಭು ಶೆಟ್ಟಿ ದಂಪತಿ ಮತ್ತು ಮಕ್ಕಳಿಂದ ಹೈಟೆಕ್‌ ಸ್ಪರ್ಶದೊಂದಿಗೆ ನೂತನ ಬಸ್‌ ತಂಗುದಾಣ ನಿರ್ಮಾಣಗೊಂಡು ಉದ್ಘಾಟನೆಗೆ ಸಜ್ಜಾಗಿ ನಿಂತಿದೆ.

ಮಾತಾ-ಪಿತೃ ವಾತ್ಯಲ್ಯ ಮೆರೆದ ಮಕ್ಕಳು

ಶಿರ್ವ ಪರಿಸರದ ಪ್ರಯಾಣಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್‌ ನಿಲ್ದಾಣದ ಆವಶ್ಯಕತೆಯಿತ್ತು. ಶಿರ್ವ ಅಟ್ಟಿಂಜೆ ಶಂಭು ಶೆಟ್ಟಿ ಮತ್ತು ಹೇಮಲತಾ ಶೆಟ್ಟಿಯವರ ವಿವಾಹ ವಾರ್ಷಿಕೋತ್ಸವದ ಸ್ವರ್ಣ ಮಹೋತ್ಸವದ ಸವಿನೆನಪಿಗಾಗಿ ಅವರ ಮಕ್ಕಳು ಸುಮಾರು 40 ಲ. ರೂ. ವೆಚ್ಚದಲ್ಲಿ ಹೈಟೆಕ್‌ ಬಸ್‌ ನಿಲ್ದಾಣವನ್ನು ನಿರ್ಮಿಸಿ ಗ್ರಾ.ಪಂ. ಗೆ ಕೊಡುಗೆಯಾಗಿ ನೀಡಿ ಮಾತಾ-ಪಿತೃ ವಾತ್ಸಲ್ಯ ಮೆರೆದಿದ್ದಾರೆ. ಶಂಭು ಶೆಟ್ಟಿ ದಂಪತಿ ನೂತನ ಬಸ್ಸು ನಿಲ್ದಾಣದ ಕಾಮಗಾರಿಗೆ 2021ರ ಡಿ.19 ರಂದು ಶಿಲಾನ್ಯಾಸ ನೆರವೇರಿಸಿದ್ದರು.

ಹೈ-ಟೆಕ್‌ ತಂಗುದಾಣ

ತಂಗುದಾಣವು ಪೆಲೇಡಿಯನ್‌ ಶೈಲಿಯ ವಿನ್ಯಾಸದಲ್ಲಿ ನಿರ್ಮಾಣಗೊಳ್ಳುತ್ತಿದ್ದು, ಗ್ರಾ.ಪಂ. ಗೆ ಆದಾಯ ತರುವ ಅತ್ಯಾಧುನಿಕ ಶಟರ್‌ಗಳಿರುವ 4 ಅಂಗಡಿ ಕೋಣೆಗಳನ್ನು ಹೊಂದಿದೆ.ಪ್ರಯಾಣಿಕರ ಅನುಕೂಲಕ್ಕಾಗಿ ಸುಮಾರು 40 ಆಸನಗಳಿರುವ ಸ್ಟೀಲ್‌ ಬೆಂಚುಗಳನ್ನು ಅಳವಡಿಸಲಾಗಿದೆ. ಗ್ರಾನೈಟ್‌ ನೆಲಹಾಸು,ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ ಫಾಲ್‌ ಸೀಲಿಂಗ್‌,ಹೈಟೆಕ್‌ ಬೆಳಕಿನ ವ್ಯವಸ್ಥೆಯೊಂದಿಗೆ ಸಿಸಿ ಕೆಮರಾ ಅಳವಡಿಸಲಾಗಿದ್ದು, ಸ್ವಚ್ಛ ಕುಡಿಯುವ ನೀರಿನ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ನೂತನ ಬಸ್‌ ನಿಲ್ದಾಣವು ಮೇ. 18 ರಂದು ಸಂಜೆ ಲೋಕಾರ್ಪಣೆಗೊಳ್ಳಲಿದ್ದು, ಶಿರ್ವ ಅಟ್ಟಿಂಜೆ ಶಂಭು ಶೆಟ್ಟಿ ಮತ್ತು ಹೇಮಲತಾ ಶೆಟ್ಟಿ ದಂಪತಿ ಉದ್ಘಾಟಿಸಲಿದ್ದಾರೆ.ಶಿರ್ವ ಗ್ರಾ.ಪಂ. ಅಧ್ಯಕ್ಷ ಕೆ.ಆರ್‌ ಪಾಟ್ಕರ್‌ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಆಗಮ ವಿದ್ವಾಂಸ ಕುತ್ಯಾರು ಕೇಂಜ ಶ್ರೀಧರ ತಂತ್ರಿ, ಶಿರ್ವ ಆರೋಗ್ಯ ಮಾತಾ ದೇವಾಲಯದ ಪ್ರಧಾನ ಧರ್ಮಗುರು ರೆ|ಫಾ| ಡೆನ್ನಿಸ್‌ ಡೇಸಾ ಮತ್ತು ಶಿರ್ವ ಸುನ್ನಿ ಜಾಮಿಯಾ ಮಸೀದಿಯ ಖತೀಬರಾದ ಸಿರಾಜುದ್ದೀನ್‌ ಝೈನಿ ಭಾಗವಹಿಸಲಿದ್ದಾರೆ.

ಸರಕಾರದ ಅನುದಾನ ಹಿಂದಕ್ಕೆ

ಸುಮಾರು 45 ವರ್ಷಗಳ ಹಿಂದೆ ಶಿರ್ವ ಮುಖ್ಯರಸ್ತೆಯ ಕುಡ್ವರ ಹೊಟೇಲ್‌ ಬಳಿಯಿದ್ದ ಬಸ್‌ ನಿಲ್ದಾಣವು ಹಂಚಿನ ಕಟ್ಟಡದೊಂದಿಗೆ ಈಗಿನ ಬಸ್‌ ನಿಲ್ದಾಣದ ಜಾಗಕ್ಕೆ ಸ್ಥಳಾಂತರಗೊಂಡಿತ್ತು. ಹೊಸ ಬಸ್ಸು ನಿಲ್ದಾಣದ ನಿರ್ಮಾಣಕ್ಕಾಗಿ 2018ರಲ್ಲಿ ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿ ಯವರ 10 ಲ. ರೂ. ಅನುದಾನ ಮಂಜೂರಾಗಿದ್ದು ಹಾಗೂ ಇತರ ಸಂಪನ್ಮೂಲಗಳಿಂದ ಬಸ್ಸು ತಂಗುದಾಣ ನಿರ್ಮಾಣಕ್ಕೆ ಶಿಲಾನ್ಯಾಸವೂ ನೆರವೇರಿತ್ತು. ಆದರೆ ಕಾರಣಾಂತರಗಳಿಂದ ಕಾಮಗಾರಿ ನಡೆಯದೆ ಅನುದಾನ ಹಿಂದಕ್ಕೆ ಹೋಗಿತ್ತು.

ಬಳಿಕ ಗ್ರಾಮ ಪಂಚಾಯತ್‌ 2021ರಲ್ಲಿ 15 ನೇ ಹಣಕಾಸು ಅನುದಾನದಲ್ಲಿ 20 ಲ.ರೂ. ಅನುದಾನ ತೆಗೆದಿರಿಸಿದ್ದರೂ, ಕೋವಿಡ್‌ ಬಳಿಕ ಸರಕಾರ ಗ್ರಾ.ಪಂ.ಗೆ ಅನುದಾನ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ತಂಗುದಾಣ ನಿರ್ಮಾಣ ಕಾರ್ಯ ನಡೆಯಲಿಲ್ಲ. ಶಿರ್ವ ಗ್ರಾ.ಪಂ. ಅಧ್ಯಕ್ಷ ಕೆ.ಆರ್. ಪಾಟ್ಕರ್‌ ಅವರ ಕೋರಿಕೆಯ ಮೇರೆಗೆ ದಾನಿ ಶಂಭು ಶೆಟ್ಟಿ ಮತ್ತು ಮಕ್ಕಳು ಶಿರ್ವ ಗ್ರಾಮಸ್ಥರ ಬಹುದಿನದ ಬೇಡಿಕೆಯನ್ನು ಈಡೇರಿಸುತ್ತಿರುವುದು ಗ್ರಾಮದ ಅಭಿವೃದ್ಧಿಗೆ ಮುಕುಟ ಪ್ರಾಯವಾಗಿದೆ. ಸಾಮಾಜಿಕ ಕಳಕಳಿಯಿರುವ ದಾನಿಗಳಿಂದ ಅಭಿವೃದ್ದಿ ಕಾಣುತ್ತಿರುವ ಶಿರ್ವ ಪರಿಸರಕ್ಕೆ ಅಗತ್ಯವಾಗಿ ಬೇಕಾಗಿದ್ದ ತಂಗುದಾಣದ ಬೇಡಿಕೆ ಈಡೇರಿದಂತಾಗಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.