ಶಿರ್ವ ಕೋಳಿ ಅಂಕಕ್ಕೆ ದಾಳಿ: ವಾಹನಗಳ ಸಹಿತ ಇಬ್ಬರ ವಶ ; ಉಡುಪಿ ಡಿಎಆರ್‌ ಪೊಲೀಸ್‌ ಶಾಮೀಲು


Team Udayavani, May 19, 2021, 6:20 PM IST

Untitled-1

ಶಿರ್ವ: ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಶಿರ್ವ ಸೊರ್ಪು ಶ್ರೀ ಬ್ರಹ್ಮ ಮುಗ್ಗೇರ್ಕಳ ದೈವಸ್ಥಾನದ ಬಳಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ಶಿರ್ವ ಪೊಲೀಸರು ಹಲವಾರು ವಾಹನಗಳ ಸಹಿತ ಇಬ್ಬರನ್ನು ವಶಕ್ಕೆ ಪಡೆದಿದ್ದು ಇತರ 6 ಮಂದಿ ಪರಾರಿಯಾದ‌ ಘಟನೆ ಮೇ 18ರ ಸಂಜೆ ನಡೆದಿದೆ.

ಮೂಡುಬೆಳ್ಳೆ ಕಂಡಿಗ ನಿವಾಸಿ ಜಯ ಪೂಜಾರಿ (66)ಮತ್ತು ಪ್ರಸಾದ್‌ ಕುತ್ಯಾರ್‌ (38) ಬಂಧಿತರು. ಸುಂದರ ಆತ್ರಾಡಿ,ಸೂರ್ಯ ಎಡ್ಮೇರು,ಸುಧಾಕರ ಕಡಂಬು ಮೂಡು ಮಟ್ಟಾರು,ವಿಲ್ಫ್ರೆಡ್‌ ವಿಲಿಯಂ ಗೋಮ್ಸ್‌ ಮತ್ತು ಇತರ ಇಬ್ಬರು ತಲೆಮರೆಸಿಕೊಂಡಿದ್ದಾರೆ.ಜೂಜಾಟಕ್ಕೆ ಉಪಯೋಗಿಸಿದ್ದ 1,200ರೂ.,4 ಹುಂಜಗಳು, ಕತ್ತಿ ಹಾಗೂ ಸ್ಥಳದಲ್ಲಿದ್ದ 6 ಮೋಟಾರ್‌ ಬೈಕ್‌ಗಳು, 4 ದ್ವಿಚಕ್ರ ವಾಹನಗಳು ಮತ್ತು 1 ರಿಟ್ಜ್ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿಎಆರ್‌ ಪೊಲೀಸ್‌ ಶಾಮೀಲು :

ಕೊರೊನಾ ಲಾಕ್‌ಡೌನ್‌ ಆತಂಕದ ನಡುವೆಯೂ ಶಿರ್ವ ಪದವು ನಿವಾಸಿ ಉಡುಪಿ ಡಿಎಆರ್‌ ಪೊಲೀಸ್‌ ಸಿಬಂದಿಯೋರ್ವರು ಮೊಬೈಲ್‌ ವಾಟ್ಸಪ್‌ ಮೂಲಕ (ಮೊಬೈಲ್‌ ಕಟ್ಟ)ಕೋಳಿ ಅಂಕವನ್ನು ಆಯೋಜಿಸಿದ್ದು , ಕೊರೊನಾ ಸೋಂಕಿತರು ಕೂಡಾ ಕೋಳಿ ಅಂಕದಲ್ಲಿ ಭಾಗವಹಿಸಿರುವುದಕ್ಕೆ ಸ್ಥಳೀಯ ನಾಗರಿಕರಿಂದ ಆಕ್ರೋಶ ವ್ಯಕ್ತವಾಗಿದೆ. ದಾಳಿ ನಡೆಸಿದ ಪೊಲೀಸರು ಕೋಳಿ ಅಂಕವನ್ನು ಆಯೋಜಿಸಿದ್ದ ಪೊಲೀಸ್‌ ಸಿಬಂದಿಯ ಹೆಸರನ್ನು ದೂರಿನಲ್ಲಿ ಕೈಬಿಟ್ಟಿದ್ದಲ್ಲದೆ, ವಶಪಡಿಸಿಕೊಂಡಿದ್ದ ವಾಹನಗಳ ಪೈಕಿ ಆತನ ಹೊಂಡಾ ಆಕ್ಟಿವಾ ಸ್ಕೂಟರನ್ನು ಠಾಣೆಯ ಪೊಲೀಸ್‌ಸಿಬಂದಿ ಬಿಟ್ಟಿದ್ದು , ವಶಪಡಿಸಿಕೊಂಡಿದ್ದ ಇತರ ವಾಹನಗಳ ಮಾಲಕರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ಕೋವಿಡ್ ವಿಷಯದಲ್ಲಿ ಕಾಂಗ್ರೆಸ್ ನಾಯಕರು ರಾಜಕೀಯ ಮಾಡುತ್ತಿರುವುದು ನಾಚಿಗೇಡು : ಶ್ರೀರಾಮುಲು

ಶಿರ್ವ ಪರಿಸರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಸಾವಿನ ಸಂಖ್ಯೆಯೂ ಹೆಚ್ಚುತ್ತಿದ್ದು, ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಿರ್ವ ಗ್ರಾಮ ಪಂಚಾಯತ್‌ ಮೇ. 7 ರಂದು ತುರ್ತು ಸಭೆ ನಡೆಸಿತ್ತು. ಆ ಸಭೆಯಲ್ಲಿ ಕೂಡಾ ಪರಿಸರದಲ್ಲಿ ಕೋಳಿ ಅಂಕ ನಡೆಯುವ ಬಗ್ಗೆ ಗ್ರಾ.ಪಂ. ಅಧ್ಯಕ್ಷ ಕೆ.ಆರ್‌. ಪಾಟ್ಕರ್‌ಪೊಲೀಸ್‌ ಇಲಾಖೆಯ ಗಮನಕ್ಕೆ ತಂದಿದ್ದು, ಶಿರ್ವ ಠಾಣೆಯ ಎಎಸ್‌ಐ ಶ್ರೀಧರ ಕೆ.ಜೆ. ಕೋಳಿ ಅಂಕದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು.

ಸೂಕ್ತ ಕ್ರಮಕ್ಕೆ ಆಗ್ರಹ  :

ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವ ಸಲುವಾಗಿ ನಾಗರಿಕರು ಸಕಾರಣವಿಲ್ಲದೆ ಸಂಚರಿಸದಂತೆ ರಾಜ್ಯ ಸರಕಾರದ ಸ್ಪಷ್ಟ ಆದೇಶವಿದ್ದರೂ, ಸರಕಾರದ ಆದೇಶವನ್ನು ಪಾಲಿಸದೆ ಅಪಾಯಕಾರಿ ರೋಗದ ಸೋಂಕು ಹರಡುವ ಸಾಧ್ಯತೆ ಇರುವ ವಿಷಯ ತಿಳಿದಿದ್ದರೂ, ಕೋಳಿ ಅಂಕ ಜೂಜಾಟವನ್ನು ಆಯೋಜಿಸಿದ ಪೊಲೀಸ್‌ ಇಲಾಖೆಯ ಸಿಬಂದಿಯ ಸಮಾಜಬಾಹಿರ ಕೃತ್ಯದ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಿರ್ವ ಪರಿಸರದ ನಾಗರಿಕರು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರನ್ನು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.