ಶಿರ್ವ :ವಿದ್ಯುತ್ ಕಂಬ ದುರಸ್ತಿ ವೇಳೆ ಕಾರು ಢಿಕ್ಕಿ, ನಾಲ್ವರು ಕಾರ್ಮಿಕರಿಗೆ ಗಾಯ
Team Udayavani, Sep 13, 2022, 11:57 AM IST
ಶಿರ್ವ : ಇಲ್ಲಿನ ಕಟಪಾಡಿ ಶಿರ್ವ ಬೆಳ್ಮಣ್ ಮುಖ್ಯರಸ್ತೆಯ ವಿದ್ಯಾ ಲೇಔಟ್ ಬಳಿ ವಿದ್ಯುತ್ ಟ್ರಾನ್ಸ್ಫೋರ್ಮರ್ ಅಳವಡಿಸಲು ಮೆಸ್ಕಾಂ ಗುತ್ತಿಗೆ ಕಾರ್ಮಿಕರು ಕಂಬ ಹೊತ್ತೊಯ್ಯುತ್ತಿದ್ದ ಕಾರೊಂದು ಗುದ್ದಿ ನಾಲ್ವರು ಕಾರ್ಮಿಕರು ಗಾಯಗೊಂಡ ಘಟನೆ ಶಿರ್ವ ನ್ಯಾರ್ಮ ಸೇತುವೆಯ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ನ್ಯಾರ್ಮ ಸೇತುವೆ ಬಳಿ ರಸ್ತೆ ಬಂದ್ ಮಾಡಿ ಕಾರ್ಮಿಕರು ವಾಹನದಿಂದ ಕಂಬವನ್ನು ಇಳಿಸಿ ವಿದ್ಯಾ ಲೇಔಟ್ ಬಳಿ ಹೋಗಲು ಕಂಬ ಹೊತ್ತೊಯ್ಯುತ್ತಿದ್ದ ವೇಳೆ ನೇರವಾಗಿ ಬಂದ ಕಾರೊಂದು ಮೆಸ್ಕಾಂ ಸಿಬಂದಿ ಕಾರು ನಿಲ್ಲಿಸಲು ಸೂಚನೆ ನೀಡಿದರೂ ಲೆಕ್ಕಿಸದೆ ಮುನ್ನುಗ್ಗಿದ್ದು, ಈ ವೇಳೆ ಕಾರು ಕಂಬಕ್ಕೆ ಢಿಕ್ಕಿ ಹೊಡೆದು ನಾಲ್ವರು ಕಾರ್ಮಿಕರು ಗಾಯಗೊಂಡಿದ್ದಾರೆ. ವಿದ್ಯುತ್ ಕಂಬ ಕಾರಿನ ಮೇಲೆ ಬಿದ್ದುದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.
ಗಾಯಗೊಂಡ ಕಾರ್ಮಿಕರನ್ನು ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ : ಕತ್ತಲಸಾರ್: ತೇಲಿ ಬಂದ ತ್ಯಾಜ್ಯ ರಾಶಿ; ಗ್ರಾ.ಪಂ.ನಿಂದ ದೂರು ದಾಖಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ