ಅಪಾಯದ ಅಂಚಿನಲ್ಲಿ ಶಿರ್ವ ಸೊರ್ಕಳ ಕಿರು ಸೇತುವೆ

ಮೂರು ಗ್ರಾಮಗಳ ಸಂಪರ್ಕ ಕೊಂಡಿ; ಸಂಪರ್ಕ ಕಡಿತದ ಭೀತಿ

Team Udayavani, Jun 11, 2019, 6:00 AM IST

0706SHIRVA1

ಅಪಾಯದಲ್ಲಿರುವ ಸೊರ್ಕಳ ಸಂಪರ್ಕ ಸೇತುವೆ.

ಶಿರ್ವ: ಹಲವು ದಶಕಗಳ ಹಿಂದೆ ನಿರ್ಮಾಣಗೊಂಡಿದ್ದ ಶಿರ್ವ, ಕುತ್ಯಾರು ಮತ್ತು ಪಿಲಾರು ಗ್ರಾಮಗಳ ಜನರ ದೈನಂದಿನ ಚಟುವಟಿಕೆಗಳ ಕೊಂಡಿಯಾದ‌ ಶಿರ್ವ ಸೊರ್ಕಳ ಸಂಪರ್ಕ ಸೇತುವೆ ಅಪಾಯದ ಅಂಚಿನಲ್ಲಿದ್ದು ಕುಸಿಯುವ ಭೀತಿಯಲ್ಲಿದೆ.


ನಾಗರಿಕರು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ 3 ಗ್ರಾಮಗಳ ಕೃಷಿಕರಿಗೆ ಈ ಸಂಪರ್ಕ ಸೇತುವೆ ಉಪಯೋಗಿಸುವ ಅನಿವಾರ್ಯತೆಯಿದ್ದು ಶಿಥಿಲಗೊಂಡಿರುವ ಸೇತುವೆಯ ದುರಸ್ತಿ ಕಾರ್ಯ ನಡೆಯಬೇಕಾಗಿದೆ.

ಪಾದೆಹಿತ್ಲು, ಖಾದ್ರಿಹಿತ್ಲು, ಪಿಲಾರು, ಕುತ್ಯಾರು ಭಾಗದಲ್ಲಿ ಸುಮಾರು 150ಕ್ಕೂ ಹೆಚ್ಚು ಮನೆಗಳಿವೆೆ. ಇಲ್ಲಿನ ಜನರಿಗೆ ಶಿರ್ವಕ್ಕೆ ತೆರಳಲು 5-6 ಕಿ.ಮೀ. ಉಳಿತಾಯ ಮಾಡುವ ಈ ಸಂಪರ್ಕ ಸೇತುವೆಯು ಶಿಥಿಲಾವಸ್ಥೆಯಲ್ಲಿದೆ. ಮಳೆಗಾಲದಲ್ಲಿ ಇದು ಕುಸಿಯುವ ಭೀತಿ ಇದೆ.

ಸಂಚರಿಸುವುದು ಅಪಾಯ
ಸೇತುವೆಯ ತಳಪಾಯದ ಕಲ್ಲು ಮತ್ತು ತಡೆಗೋಡೆ ಕೂಡ ಬಿರುಕು ಬಿಟ್ಟಿದೆ. ಸೇತುವೆಯ ಒಂದು ಭಾಗದ ತಡೆಗೋಡೆಯ ಕಬ್ಬಿಣದ ರಾಡ್‌ ಕಿತ್ತುಹೋಗಿದ್ದು ಮಳೆಗಾಲದಲ್ಲಿ ಸಂಚರಿಸುವ ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ನಾಗರಿಕರಿಗೆ ಅಪಾಯದ ಕರೆಗಂಟೆಯಾಗಿದೆ. ಮಳೆಗಾಲದಲ್ಲಿ ಸೊರ್ಕಳ ಕೆರೆಯ ನೀರು ರಭಸದಿಂದ ಹರಿಯುತ್ತಿದ್ದು , ತಡೆಗೋಡೆಯೂ ಮುರಿದಿರುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿ. ತಳಪಾಯದ ಕಲ್ಲು ಬಿರುಕು ಬಿಟ್ಟಿರುವುದರಿಂದ ವಾಹನಗಳು ಚಲಿಸಲೂ ಕಷ್ಟಸಾಧ್ಯವಾಗಿದೆ. ಸೇತುವೆಯ ಸಂಪರ್ಕ ಕಡಿತಗೊಂಡಲ್ಲಿ ನಿತ್ಯ ಸಂಚರಿಸುವ ವಾಹನ ಸವಾರರು, ಪಾದಾಚಾ ರಿಗಳು 5-6 ಕಿ.ಮೀ ಸುತ್ತು ಬಳಸಿ ದೂರದ ಪಿಲಾರು ಜಾಲಮೇಲು ಅಥವಾ ಕುತ್ಯಾರು ಮಾಗಂದಡಿಗಾಗಿ ಬರುವ ಮಾರ್ಗಗಳನ್ನೇ ಅವಲಂಬಿಸಬೇಕಾಗಿದೆ.

ಇಚ್ಛಾಶಕ್ತಿ ತೋರಲಿ
ಶಿರ್ವ ಇರ್ಮಿಜ್‌ ಬಳಿಯಿಂದ ಸೇತುವೆವರೆಗಿನ ರಸ್ತೆ ಕೂಡಾ ಸಂಪೂರ್ಣ ದುಸ್ಥಿತಿಯಲ್ಲಿದ್ದು, ದ್ವಿಚಕ್ರ ವಾಹನ ಸವಾರರು ಸರ್ಕಸ್‌ ಮಾಡುವಂತಾಗಿದೆ. ಅಗಲ ಕಿರಿದಾದ ಸೇತುವೆ ಸಂಚಾರ ಸುರಕ್ಷತೆ ದೃಷ್ಟಿ ಯಿಂದಲೂ ಅನುಕೂಲಕರವಾಗಿಲ್ಲ. ನಿತ್ಯ ಸಂಚರಿಸುವ ಇಲ್ಲಿನ ಜನರ, ವಾಹನ ಸವಾರರ ಸಂಕಷ್ಟವನ್ನು ಅರಿತು ಜನಪ್ರತಿನಿಧಿಗಳು, ಜಿಲ್ಲಾಡಳಿತ ಅವಘಡ ಸಂಭವಿಸುವ ಮುನ್ನ ಹೊಸ ಸೇತುವೆ ನಿರ್ಮಿಸುವ ಇಚ್ಛಾಶಕ್ತಿ ತೋರಿದಲ್ಲಿ ಸಮಸ್ಯೆ
ಪರಿಹಾರವಾಗಬಹುದು.

ಅನುದಾನ ಬಿಡುಗಡೆಗೆ ಮನವಿ
ಜಿ.ಪಂ. ನಲ್ಲಿ ಸೇತುವೆಗೆ ಬೇಕಾಗುವಷ್ಟು ಅನುದಾನವಿಲ್ಲದೇ ಇರುವುದರಿಂದ ಕ್ಷೇತ್ರದ ಶಾಸಕರು ಮತ್ತು ಸಂಸದರಿಗೆ ಸೊರ್ಕಳ ಸೇತುವೆಯನ್ನು ನಿರ್ಮಿಸುವಂತೆ ಅನುದಾನ ಬಿಡುಗಡೆಗೊಳಿಸಲು ಮನವಿ ಸಲ್ಲಿಸಲಾಗುವುದು.
-ವಿಲ್ಸನ್‌ ರೊಡ್ರಿಗಸ್‌, ಶಿರ್ವ ಜಿ.ಪಂ. ಸದಸ್ಯ

ಸಂಬಂಧಪಟ್ಟವರು ಕೂಡಲೇ ಎಚ್ಚೆತ್ತುಕೊಳ್ಳಲಿ
ಸೊರ್ಕಳ ಕೆರೆಗೆ ವಿವಿಧ ಕಡೆಯಿಂದ ನೀರು ಹರಿದು ಬರುತ್ತಿರುವುದರಿಂದ ಮಳೆಗಾಲದಲ್ಲಿ ರಭಸವಾಗಿ ನೀರು ಹರಿಯುತ್ತದೆ. ತಳಪಾಯದಲ್ಲಿ ಬಿರುಕು ಬಿಟ್ಟಿರುವುದರಿಂದ ಯಾವುದೇ ಸಮಯದಲ್ಲಿ ಅನಾಹುತ ಸಂಭವಿಸಬಹುದು. ಸಂಬಂಧಪಟ್ಟವರು ಎಚ್ಚೆತ್ತುಕೊಂಡು ದುರಸ್ತಿ ಕಾರ್ಯ ನಡೆಸಬೇಕಿದೆ.
-ಜೇಮ್ಸ್‌ ಕ್ರಿಸ್ಟೋಫರ್‌, ಸ್ಥಳೀಯ ನಿವಾಸಿ

-ಸತೀಶ್ಚಂದ್ರ ಶೆಟ್ಟಿ,ಶಿರ್ವ

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.