ಶಿವಪುರ: ಟವರ್ ಬಳಿಯ ಗುಡ್ಡ ಕುಸಿತ, ಅಪಾಯ ಭೀತಿ
Team Udayavani, Jul 24, 2022, 5:45 AM IST
ಹೆಬ್ರಿ: ಉಡುಪಿ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಂತೆ ಶಿವಪುರ ಮೇಲ್ಪೇಟೆ ಮೀನು ಮಾರ್ಕೆಟ್ ಬಳಿ ಇರುವ ಖಾಸಗಿ ಮೊಬೈಲ್ ಕಂಪೆನಿಗಳ ನೆಟ್ವರ್ಕ ಟವರ್ನ ಸುತ್ತಲಿನ ಗುಡ್ಡ ಕುಸಿದಿದ್ದು ಅಪಾಯವನ್ನು ಆಹ್ವಾನಿಸುತ್ತಿದೆ.
ಪ್ರತೀ ನಿತ್ಯ ಇದೇ ದಾರಿಯಿಂದ ವಿದ್ಯಾರ್ಥಿಗಳು, ಕಾರ್ಮಿಕರು, ಸಾರ್ವಜನಿಕರು ಸಂಚರಿಸುತ್ತಿದ್ದು ಮಣ್ಣು ಕುಸಿತ ಮುಂದುವರಿದರೆ ಟವರ್ ರಸ್ತೆಗೆ ಉರುಳುವ ಅಪಾಯವಿದೆ. ಸಮೀಪದಲ್ಲಿ ಹಲವಾರು ಮನೆಗಳು, ಅಂಗಡಿ ಮುಂಗಟ್ಟುಗಳಿದ್ದು ಗ್ರಾಮಸ್ಥರು ಆತಂಕಿತರಾಗಿದ್ದಾರೆ.
ನಿರ್ಲಕ್ಷ್ಯದ ಆರೋಪ
ಟವರ್ನ ಅಡಿಯಲ್ಲೇ ವಿದ್ಯುತ್ ಟ್ರಾನ್ಸ್ಫಾರ್ಮರ್ ಇದ್ದು ಅದು ಬಿದ್ದಲ್ಲಿ ಅಪಾಯ ಖಚಿತ ಎಂದು ಸ್ಥಳೀಯರು ಹೇಳುತ್ತಾರೆ. ಈ ಟವರ್ ಖಾಸಗಿ ಜಾಗದಲ್ಲಿದ್ದು, 15 ವರ್ಷಗಳ ಗುತ್ತಿಗೆ ಆಧಾರದಲ್ಲಿ ನೀಡಲಾಗಿತ್ತು. ಅವಧಿ ಪೂರ್ಣಗೊಂಡಿರುವ ಕಾರಣ ಮತ್ತು ಅಪಾಯದ ಕಾರಣ ಜಾಗದ ಮಾಲಕರು ಗುತ್ತಿಗೆ ಮುಂದುವರಿಸಲು ಒಪ್ಪದೆ ಕೂಡಲೇ ತೆರವುಗೊಳಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಆದರೆ ಸಂಬಂಧಪಟ್ಟ ಕಂಪೆನಿಯವರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿರುವ ಗ್ರಾಮಸ್ಥರು ಈ ಬಗ್ಗೆ ಪಂಚಾಯತ್ ಗಮನಕ್ಕೂ ತರಲಾಗಿದ್ದು ಸಂಬಂಧಪಟ್ಟವರಿಗೆ ಕೂಡಲೇ ತೆರವುಗೊಳಿಸುವಂತೆ ಸೂಚನೆ ನೀಡಬೇಕು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ