ಇನ್ನೂ ಹಲವರಿಗೆ ರೋಷಾವೇಶ: ಶೋಭಾ ಕರಂದ್ಲಾಜೆ


Team Udayavani, May 23, 2019, 6:09 AM IST

shobha

ಉಡುಪಿ: ಮಾಜಿ ಸಚಿವ ರೋಷನ್‌ ಬೇಗ್‌ ಅವರಂತೆ ಹಲವು ಶಾಸಕರಿಗೆ ಅಸಮಾಧಾನ ಇದೆ. ರಾಜ್ಯ ಸರಕಾರ ದುರ್ಬಲ ಮತ್ತು ಅಸ್ಥಿರ ಆಗಿದೆ.ರೋಷನ್‌ ಬೇಗ್‌, ಎಚ್. ವಿಶ್ವನಾಥ್‌, ಎಸ್‌.ಟಿ. ಸೋಮಶೇಖರ್‌ ಅವರೂ ಅಸಮಾಧಾನ ಹೊರ ಹಾಕಿದ್ದಾರೆ. ರಮೇಶ್‌ ಜಾರಕಿಹೋಳಿ ಕಾಂಗ್ರೆಸ್‌ ನಾಯಕರಕೈಗೆ ಸಿಗುತ್ತಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಉಡುಪಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ – ಜೆಡಿಎಸ್‌ನವರು ಜನಹಿತ ಮರೆತು ಅಧಿಕಾರ ಉಳಿಸಲೋಸುಗ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಯತ್ನ ಮಾಡುತ್ತಿದ್ದಾರೆ. ಬರಗಾಲದಿಂದ ಜೀವಿಗಳು ತತ್ತರಿಸಿವೆ. ಸರಕಾರ ಇದ್ದರೂ ಒಂದೇ ಬಿದ್ದರೂ ಒಂದೇ. ಇಷ್ಟೆಲ್ಲ ಗೊಂದಲ ಇದ್ದರೂ ಸರಕಾರವನ್ನು ಹೇಗೆ ನಿಭಾಯಿಸುತ್ತಿದ್ದಾರೆಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉತ್ತರ ಕೊಡಬೇಕು ಎಂದರು.

ಲೋಕ-ರಾಜ್ಯಸಭೆಯಲ್ಲಿ ಬಹುಮತ

ಮತದಾನೋತ್ತರ ಸಮೀಕ್ಷೆ ನರೇಂದ್ರ ಮೋದಿ ಸರಕಾರದ ಪರವಾಗಿದೆ. ಸಮೀಕ್ಷೆ ಪ್ರಕಾರ 325ರಿಂದ 350 ಸ್ಥಾನಗಳು ಎನ್‌ಡಿಎ ಪಾಲಾಗಲಿವೆ. ದೇಶದ ಹಲವಾರು ನಿರ್ಣಯಗಳಿಗೆ ಮೂರನೆಯ ಎರಡರಷ್ಟು ಬಹುಮತ ಬೇಕು. ಈ ಬಾರಿ ಲೋಕಸಭೆ,ರಾಜ್ಯಸಭೆಯಲ್ಲಿ ಬಹುಮತ ಸಿಗಲಿದೆ ಎಂದರು.

ಅತ್ಯಧಿಕ ಬಹುಮತ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹಿಂದಿಗಿಂತಲೂ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸಲಿದ್ದೇವೆ. ದಕ್ಷಿಣ ಭಾರತದಲ್ಲೇ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಸಂಸದರು ಆಯ್ಕೆಯಾಗಲಿದ್ದಾರೆ. ರಾಜ್ಯದಿಂದ 20ಕ್ಕೂ ಹೆಚ್ಚು ಸಂಸದರು ಪ್ರಧಾನಿ ಮೋದಿಯವರ ಕೈ ಬಲ ಪಡೆಸುತ್ತಾರೆ. ಎಂದು ಶೋಭಾ ವಿಶ್ವಾಸ ವ್ಯಕ್ತಪಡಿಸಿದರು.

ಆಗೇಕೆ ಸಂಶಯ ಬರಲಿಲ್ಲ?

ವಿವಿಪ್ಯಾಟ್ ಮೇಲೆ ವಿಪಕ್ಷ ನಾಯಕರು ಸಂಶಯ ವ್ಯಕ್ತಪಡಿಸುತ್ತಿರುವ ಬಗ್ಗೆ ಕೇಳಿದಾಗ ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಗೆದ್ದಾಗ ವಿವಿಪ್ಯಾಟ್‌ಗೆ ಏನಾಗಿತ್ತು? ವಿಪಕ್ಷಗಳ ಆರೋಪ ‘ಕುಣಿಯೋಕೆ ಬಾರದವ ನೆಲ ಡೊಂಕು’ ಎನ್ನುವ ಗಾದೆಯಂತಾಗಿದೆ. ಗೆಲ್ಲುವುದಕ್ಕೆ ಆಗೋದಿಲ್ಲ ಎಂದು ಈ ಸಂಶಯ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಮತಯಂತ್ರ ದುರ್ಬಲವಲ್ಲ

ಪ್ರಪಂಚದಲ್ಲೇ ಅತ್ಯಂತ ಉತ್ತಮ ತಾಂತ್ರಿಕ ವ್ಯವಸ್ಥೆ ಇದೆ. ಮತಯಂತ್ರ ಯಾರ ಕಾಲದಲ್ಲಿ ಆಗಿದೆ? ಈ ಕುರಿತು ಎರಡು ಬಾರಿ ಯುಪಿಎ ಅಧಿಕಾರಕ್ಕೆ ಬಂದಾಗ ಆಕ್ಷೇಪಿಸಿಲ್ಲ ಏಕೆ? ಮತಯಂತ್ರ ದುರ್ಬಲವಾಗಿಲ್ಲ. ವಿಪಕ್ಷ ದುರ್ಬಲವಾಗಿದೆ. ಅವರ ಮನಸ್ಸೂ ದುರ್ಬಲವಾಗಿದೆ, ಮಹಾ ಘಟಬಂಧನ ದುರ್ಬಲವಾಗಿದೆ ಎಂದು ಶೋಭಾ ಲೇವಡಿ ಮಾಡಿದರು.

ಕಾಂಗ್ರೆಸ್‌ ಪಕ್ಷದ ಶಾಸಕರನ್ನು ಬಿಜೆಪಿಯು ಸೆಳೆಯುವುದಿಲ್ಲ. ಪಕ್ಷ ಬಿಟ್ಟ ಅನಂತರ ಶಾಸಕರನ್ನು ಬಿಜೆಪಿ ಮಾತನಾಡಿಸುತ್ತದೆ. ಬಿಜೆಪಿ ಒಂದು ದೊಡ್ಡ ಸಮುದ್ರವಿದ್ದಂತೆ. ಯಾರೂ ಬಿಜೆಪಿಗೆ ಬರಬಹುದು ಎಂದರು.

ಜನತಾ ಜನಾರ್ದನನನ್ನು ಮರೆತ ಸಿಎಂ

ಮುಖ್ಯಮಂತ್ರಿಗಳ ದೇವಸ್ಥಾನಗಳ ಭೇಟಿ ಕುರಿತು ಪ್ರಶ್ನಿಸಿದಾಗ, ಜನಸೇವೆಯೇ ಜನಾರ್ದನನ ಸೇವೆ ಎಂದು ಹಿರಿಯರು ಹೇಳಿದ್ದಾರೆ. ಮುಖ್ಯಮಂತ್ರಿಯಾದವರು ಇದನ್ನು ಪಾಲಿಸಬೇಕು. ಆದರೆ ಅವರು ಜನತಾ ಸೇವೆ ಬಿಟ್ಟು ಬಿಟ್ಟಿದ್ದಾರೆ. ಜನಾರ್ದನ- ದೇವರು ಕೈ ಹಿಡಿಯಬಹುದು ಎನ್ನುವುದು ಅವರ ನಂಬಿಕೆ ಇರಬಹುದು. ಕರ್ತವ್ಯ ನಿಭಾಯಿಸದವನನ್ನು ದೇವರೂ ಕೈ ಹಿಡಿಯುವುದಿಲ್ಲ. ಇದನ್ನು ಅರಿತು ಕೆಲಸ ಮಾಡಿದರೆ ಅವರಿಗೆ ಒಳ್ಳೆಯದಾಗಬಹುದು ಎಂದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.