ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯ ಘಟನೆ ಮಣಿಪಾಲದ ರಶ್ಮಿ ಪರ ಶೋಭಾ ಟ್ವೀಟ್
Team Udayavani, Mar 5, 2021, 7:10 AM IST
ಮಣಿಪಾಲ: ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಆಯ್ಕೆಗೊಂಡು ಬಳಿಕ ಈ ಹಿಂದಿನ ವಿವಾದಿತ ಪೋಸ್ಟ್ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ ಮಣಿಪಾಲ ಮೂಲದ ರಶ್ಮಿ ಸಾಮಂತ್ ಅವರ ಪರ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ.
ಪ್ರಕರಣ ನಡೆದ 2 ವಾರಗಳ ಬಳಿಕ ಆಕ್ಸ್ಫರ್ಡ್ ವಿ.ವಿ.ಯನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಸಂಸದೆ, “ನಿಮಗೆ ನಾಚಿಕೆ ಆಗಬೇಕು. ತನ್ನ ಕುಟುಂಬದಲ್ಲಿ ವಿ.ವಿ. ಪದವಿ ಪಡೆದ ಮೊದಲ ಬಾಲಕಿ ಆಕೆ. ಭಾರತದ ಮೊದಲ ಆಕ್ಸ್ಫರ್ಡ್ ವಿದ್ಯಾರ್ಥಿ ಸಂಘದ ಸದಸ್ಯೆ. ತನ್ನ ಕಠಿನ ಪರಿಶ್ರಮದಿಂದ ಉಡುಪಿಯಂಥ ಸಣ್ಣ ನಗರದಿಂದ ಬಂದು ಈ ಸಾಧನೆ ಮಾಡಿದ್ದಾರೆ. ಇಷ್ಟೆಲ್ಲ ಅನ್ಯಾಯ ವಾಗುತ್ತಿದ್ದರೂ ಯಾವುದೇ ಸ್ತ್ರೀ ವಾದಿಗಳು ತುಟಿ ಬಿಚ್ಚುತ್ತಿಲ್ಲ ಎಂದು ಟೀಕಿಸಿದ್ದಾರೆ.
ಏನಿದು ಘಟನೆ? :
ರಶ್ಮಿ ಸಾಮಂತ್ ಅವರ ಕೆಲವು ಸೋಷಿಯಲ್ ಮೀಡಿಯಾ ಪೋಸ್ಟ್ ಗಳು ಅಸೂಕ್ಷ್ಮ ಮತ್ತು ವರ್ಣಭೇದ ನೀತಿಯನ್ನು ಬೆಂಬಲಿಸುವಂತಿವೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದರು. 2017ರಲ್ಲಿ ಬರ್ಲಿನ್ ಹತ್ಯಾಕಾಂಡ ಸ್ಮಾರಕಕ್ಕೆ ಭೇಟಿ ನೀಡಿದ್ದಾಗಿನ ಪೋಸ್ಟ್ ಟೀಕೆಗೆ ಗುರಿಯಾಗಿತ್ತು. ಆಕ್ಸ್ಫರ್ಡ್ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗುವ ಮೂಲಕ ಈ ಹುದ್ದೆ ಪಡೆದ ಮೊದಲ ಭಾರತೀಯ ಯುವತಿ ಎಂಬ ಹೆಗ್ಗಳಿಕೆಗೆ ರಶ್ಮಿ ಸಾಮಂತ್ ಪಾತ್ರರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು