ಸಂಪುಟ ವಿಸ್ತರಣೆ ಶವಪೆಟ್ಟಿಗೆ ಕೊನೆ ಮೊಳೆ: ಶೋಭಾ


Team Udayavani, Jun 11, 2019, 10:03 AM IST

shobha

ಉಡುಪಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯು ಶವ ಪೆಟ್ಟಿಗೆಗೆ ಹೊಡೆಯುವ ಕೊನೆಯ ಮೊಳೆಯಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ.

ಸೋಮವಾರ ಸಂಸದರ ಕಚೇರಿ ಉದ್ಘಾಟನ ಸಮಾರಂಭದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಹೀಗೆ ಹೇಳಿದರು.

ಜಿಂದಾಲ್‌ಗೆ ಭೂಮಿ: ವಿರೋಧ
ಜಿಂದಾಲ್‌ ಕಂಪೆನಿಗೆ 3,666 ಎಕ್ರೆ ಭೂಮಿಯನ್ನು ಕ್ರಯ ಪತ್ರ ಮಾಡಿಕೊಡುವ ರಾಜ್ಯ ಸರಕಾರದ ನಿರ್ಣಯ ಖಂಡನೀಯ. ಇದುವರೆಗೆ ಲೀಸ್‌ (ಬಾಡಿಗೆ) ಆಧಾರದಲ್ಲಿ ಭೂಮಿ ನೀಡಲಾಗುತ್ತಿತ್ತು. ಇಂತಹ ಭೂಮಿಯನ್ನು ಲೀಸ್‌ ಅವಧಿ ಬಳಿಕ ವಾಪಸು ಪಡೆಯಬಹುದು. ಆದರೆ ಜಿಂದಾಲ್‌ಗೆ ಕ್ರಯ
ಪತ್ರ ಮಾಡಿಕೊಡುವುದರ ಹಿಂದೆ ಕಾಣದ ಕೈಗಳ, ಕಮಿಷನ್‌ ಏಜೆಂಟರ ಕೈವಾಡವಿದೆ ಎಂದು ಆರೋಪಿಸಿದರು.

8 ತಿಂಗಳಾದರೂ ಅಧಿಕಾರವಿಲ್ಲ
ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು 8 ತಿಂಗಳಾದರೂ ಅಧಿಕಾರ ವಹಿಸಿಕೊಳ್ಳಲಾಗುತ್ತಿಲ್ಲ. ಉತ್ಛ ನ್ಯಾಯಾಲಯದಲ್ಲಿ ವಕೀಲರನ್ನು ನೇಮಿಸಿ ತಡೆಯಾಜ್ಞೆ ತೆರವು ಗೊಳಿಸುವ ಕೆಲಸವನ್ನು ಸರಕಾರ ಮಾಡುತ್ತಿಲ್ಲ. ಬರ ತಾಂಡವವಾಡುತ್ತಿದ್ದರೂ ಸರಕಾರ ಎಚ್ಚೆತ್ತುಕೊಳ್ಳುತ್ತಿಲ್ಲ. ಸರಕಾರ ವಿಸರ್ಜಿಸಬೇಕು ಇಲ್ಲವೇ ಜನ ಪರವಾಗಿ ಕಾರ್ಯಾಚರಿಸಬೇಕು ಎಂದು ಆಗ್ರಹಿಸಿ ಜೂ. 14ರಂದು ಬಿಜೆಪಿ ಎಲ್ಲೆಡೆ ಹೋರಾಟ ನಡೆಸಲಿದೆ. ಇದರಲ್ಲಿ ಜಿಂದಾಲ್‌ಗೆ ಭೂಮಿ ಮಾರಾಟ ಮಾಡುವುದೂ ಸೇರಿದೆ ಎಂದು ಶೋಭಾ ಹೇಳಿದರು.

ಟ್ಯಾಂಕರ್‌ ನೀರೂ ಇಲ್ಲ
ಜಿಲ್ಲೆಯ ಮರಳು ಸಮಸ್ಯೆ ಪರಿಹಾರಕ್ಕೆ ಮೂರ್‍ನಾಲ್ಕು ತಿಂಗಳುಗಳಿಂದ ಪ್ರಯತ್ನಿಸಿದೆವು. ರಾಜ್ಯ ಸರಕಾರವಾಗಲೀ ಜಿಲ್ಲಾಡಳಿತವಾಗಲೀ ಪೂರಕವಾಗಿ ಸ್ಪಂದಿಸಲಿಲ್ಲ. ತಿಂಗಳಿನಿಂದ ನೀರಿನ ಸಮಸ್ಯೆ ಬಗ್ಗೆ ಗಮನ ಹರಿಸಲು ಒತ್ತಾಯಿಸುತ್ತಲೇ ಇದ್ದೆವು. ಇಂದು ನಗರಸಭೆಯಿಂದ ಒಂದು ಟ್ಯಾಂಕರ್‌ ನೀರು ಸರಬರಾಜು ಕೂಡ ಆಗಲಿಲ್ಲ ಎಂದು ಎಂದು ಶೋಭಾ ಆರೋಪಿಸಿದರು.

ಪಕ್ಷ ಸಂಘಟನೆಗೆ ಆದ್ಯತೆ
ರಾಜ್ಯದಲ್ಲಿ ಬಿಜೆಪಿ ಸರಕಾರ ಸ್ಥಾಪನೆಯಾಗುವ ತನಕ ಬಿಜೆಪಿಯನ್ನು ಸಂಘಟಿತವಾಗಿ ಕಟ್ಟುವ ಕೆಲಸವನ್ನು ನಾಯಕರು ಮಾಡಲಿದ್ದಾರೆ. ಇದರಲ್ಲಿ ತಾನೂ ಸಮಯ ಕೊಟ್ಟು ಕೆಲಸ ಮಾಡುತ್ತೇನೆ ಎಂದರು.

ಅಭಿವೃದ್ಧಿ ಕೆಲಸ
ಕೇಂದ್ರದಿಂದ ಎಲ್ಲ ಸವಲತ್ತುಗಳನ್ನು ಕೊಡಿಸುವ ಯತ್ನ ಮಾಡುವೆ ಎಂದು ಶೋಭಾ ಹೇಳಿದರು. ಗಿರೀಶ್‌ ಕಾರ್ನಾಡ್‌ ನಿಧನಕ್ಕೆ ಸಂತಾಪ ಸೂಚಿಸಿದರು.

ಟಾಪ್ ನ್ಯೂಸ್

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

16-wtr

Water: ನೀರು ಭುವನದ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.