ಆಂಗ್ಲ ಭಾಷಾ ವ್ಯಾಮೋಹದಿಂದ ಮಾತೃಭಾಷೆಗೆ ಧಕ್ಕೆ: ಶೋಭಾ ಕರಂದ್ಲಾಜೆ


Team Udayavani, Feb 24, 2020, 7:15 AM IST

shoba-karandlaje

ಕಾರ್ಕಳ: ಕೇಂದ್ರ ಸರಕಾರ ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪೂರಕ ವಾತಾವರಣ ಕಲ್ಪಿಸುತ್ತಿದೆ. ಮನೆಗಳಲ್ಲೂ ಆಂಗ್ಲ ಭಾಷೆಯ ಸಂವಹನ ವ್ಯಾಮೋಹದಿಂದಾಗಿ ಮಾತೃ ಭಾಷೆಗೆ ಧಕ್ಕೆಯಾಗುತ್ತಿದೆ. ಇದರಿಂದ ಭಾಷೆಯೊಂದಿಗೆ ನಮ್ಮತನ, ಸಂಸ್ಕಾರ, ಸಂಸ್ಕೃತಿಯೂ ಮರೆಯಾಗುವ ಅಪಾಯವಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.
ಅವರು ಕಾರ್ಕಳ ಎಸ್‌ವಿಟಿ ವಿದ್ಯಾಸಂಸ್ಥೆಯ ವಠಾರದಲ್ಲಿ ರವಿವಾರ ನಡೆದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ರಜತ ಮಹೋತ್ಸವದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಅನೇಕ ಕಾರ್ಯಕ್ರಮಗಳು ಆಗುತ್ತಿವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಗಳಾಗಬೇಕು. ಅದಕ್ಕಾಗಿ ಸರಕಾರದಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಕೊಂಕಣಿ ತರಗತಿ
ಕೊಂಕಣಿ ಸಾಹಿತಿ ರವೀಂದ್ರ ಕೇಳೇಕರ್‌ ಅವರಿಗೆ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ. ಕೊಂಕಣಿ ಭಾಷಿಕರು ಹೆಚ್ಚಾಗಿರುವ ಪ್ರದೇಶ‌ಗಳ ಶಾಲೆಗಳಲ್ಲಿ ಕೊಂಕಣಿ ತರಗತಿ ನಡೆಸುವ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯುತ್ತೇವೆ ಎಂದು ಶೋಭಾ ಭರವಸೆ ನೀಡಿದರು.

ಕನ್ನಡಕ್ಕೆ ಕೊಡುಗೆ
ವಲಸೆ ಬಂದ ಕೊಂಕಣಿಗರಿಗೆ ಕನ್ನಡ ನೆಲದ ಅರಸರು ಆಶ್ರಯ ನೀಡಿದರು. ಇಂದು ಕೊಂಕಣಿ ಮನೆ ಮಾತಾಗಿದ್ದರೂ ಕೊಂಕಣಿಗರು ಕನ್ನಡವನ್ನು ಬಳಸಿ, ಬೆಳೆಸಿದ್ದಾರೆ. ಪಂಜೆ ಮಂಗೇಶ ರಾವ್‌, ಮಂಜೇಶ್ವರ ಗೋವಿಂದ ಪೈ, ಯಶವಂತ ಚಿತ್ತಾಲ, ಗೌರೀಶ ಕಾಯ್ಕಿಣಿ, ಜಯಂತ ಕಾಯ್ಕಿಣಿ ಕನ್ನಡಕ್ಕೆ ನೀಡಿದ ಕೊಡುಗೆ ಮಹತ್ತರವಾದುದು ಎಂದು ಹಿರಿಯ ಸಾಹಿತಿ ನಾ ಡಿ’ಸೋಜಾ ಹೇಳಿದರು.

ಲಿಪಿಯ ಕಾರಣಕ್ಕಾಗಿ ಗೋವಾ ಸರಕಾರ ಕರ್ನಾಟಕದ ಕೊಂಕಣಿಗರಿಗೆ ಮಲತಾಯಿ ಧೋರಣೆ ತೋರುತ್ತಿದೆ. ಗೋವಾ ಸರಕಾರದ ಕೊಂಕಣಿ ಸಾಹಿತ್ಯ ಪುಸ್ತಕಗಳಿಗೆ ಬಹುಮಾನ ನೀಡುವ ಸಂದರ್ಭ ಕನ್ನಡ ಲಿಪಿಯಲ್ಲಿರುವ ಪುಸ್ತಕಗಳನ್ನು ಪರಿಗಣಿಸಲಾಗುತ್ತಿಲ್ಲ. ಮನೆಯಲ್ಲಿ ಮಾತನಾಡುವ ಭಾಷೆ ಒಂದಾದರೂ ಇಂತಹ ತಾರತಮ್ಯ ಸರಿಯಲ್ಲ ಎಂದವರು ವಿಷಾದಿಸಿದರು.

ಮಂಗಳೂರು ಕೊಂಕಣಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್‌ ಕುಮಾರ ಬಾಬು ಬೆಕ್ಕೇರಿ, ಕೊಂಕಣಿ ಸಾಹಿತ್ಯ ಅಕಾಡೆಮಿ ಸದಸ್ಯರು ವೇದಿಕೆಯಲ್ಲಿದ್ದರು.
ಬೆಳ್ಳಿಹಬ್ಬ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಪಿ. ಶೆಣೈ ಸ್ವಾಗತಿಸಿದರು. ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ| ಕೆ. ಜಗದೀಶ್‌ ಪೈ ಪ್ರಸ್ತಾವನೆಗೈದರು. ಶಿಕ್ಷಕ ರಾಜೇಂದ್ರ ಭಟ್‌ ನಿರೂಪಿಸಿ, ವಂದಿಸಿದರು.

ಸಮ್ಮಾನ
2019ನೇ ಸಾಲಿನ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಗೋಕುಲದಾಸ್‌ ಪ್ರಭು (ಸಾಹಿತ್ಯ), ಮೋಹನದಾಸ್‌ ಶೆಣೈ (ಕಲಾ), ವಿಷ್ಣು ಶಾಬು ರಾಣೆ (ಜಾನಪದ) ಅವರನ್ನು 50 ಸಾವಿರ ರೂ. ನಗದಿನೊಂದಿಗೆ ಪ್ರಶಸ್ತಿ ನೀಡಿ ಸಮ್ಮಾನಿಸಲಾಯಿತು.

2019ರ ಪುಸ್ತಕ ಪುರಸ್ಕಾರ ವಿಜೇತರಾದ ವೆಂಕಟೇಶ ನಾಯಕ್‌ (ಕವನ) ಮತ್ತು ಕ್ಲೆರೆನ್ಸ್‌ ಡೊನಾಲ್ಡ್‌ ಪಿಂಟೊ (ಸಣ್ಣ ಕಥೆ) ಅವರನ್ನು 25 ಸಾವಿರ ನಗದಿನೊಂದಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಶೋಧನೆ ಅಗತ್ಯ: ಡಾ| ಸಂಧ್ಯಾ ಪೈ
ಅಧ್ಯಕ್ಷತೆ ವಹಿಸಿದ್ದ ಬೆಳ್ಳಿ ಹಬ್ಬ ಸಮಿತಿ ಗೌರವಾಧ್ಯಕ್ಷೆ, ತರಂಗ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಎಸ್‌. ಪೈ ಅವರು ಮಾತನಾಡಿ, ಸಾರಸ್ವತ ಜನಾಂಗ ಆರ್ಯವರ್ತದಿಂದ ಹೊರಟು ಅನೇಕ ಪ್ರದೇಶಗಳಲ್ಲಿ ನೆಲೆನಿಂತರು. ಅವರಲ್ಲಿ ಹಲವರು ಕೃಷಿ ಕಾರ್ಯದಲ್ಲಿ ತೊಡಗಿಕೊಂಡರೆ ಮತ್ತೆ ಕೆಲವರು ವೇದಾಧ್ಯಯನ ಹಾಗೂ ದೇವತಾರಾಧನಾ ಕಾರ್ಯ ನಡೆಸಿಕೊಂಡು ಬಂದರು. ಕೊಂಕಣಿ ಭಾಷೆಗೆ ವಿಸ್ತಾರವಾದ ಇತಿಹಾಸವಿದ್ದು, ಈ ಇತಿಹಾಸದ ಕುರಿತು ಸಂಶೋಧನೆ ನಡೆಸುವ ಅಗತ್ಯವಿದೆ ಎಂದರು.

ಕೊಂಕಣಿ ಭವನಕ್ಕೆ 5 ಕೋಟಿ ರೂ. ಅನುದಾನ
ಮುಜರಾಯಿ ಸಚಿವ ಶ್ರೀನಿವಾಸ ಪೂಜಾರಿ ಮಾತನಾಡಿ, ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರಿದ ಒಟ್ಟು 22 ಭಾಷೆಗಳಲ್ಲಿ ಕೊಂಕಣಿಯೂ ಒಂದು. ಭಾಷೆ ಬದುಕು ಬೆಸೆಯುವುದು. ಭಾಷೆಯ ಬೆಳವಣಿಗೆಗೆ ಸರಕಾರ ಅಗತ್ಯ ಸಹಕಾರ ನೀಡುವುದು. ಮಂಗಳೂರಿನಲ್ಲಿ ನಿರ್ಮಾಣವಾಗಲಿರುವ ಕೊಂಕಣಿ ಭವನಕ್ಕೆ ರಾಜ್ಯ ಸರಕಾರ 5 ಕೋಟಿ ರೂ. ಅನುದಾನ ನಿಗದಿಗೊಳಿಸಿದೆ. ಈ ಮೊತ್ತವನ್ನು
8 ಕೋಟಿ ರೂ.ಗೆ ಏರಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತೇನೆ ಎಂದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.