ಶೋಭಾ ಜಯಕ್ಕೆ ದಾಖಲೆಯ ಮೆರುಗು


Team Udayavani, May 25, 2019, 6:15 AM IST

230519ASTRO75

ಉಡುಪಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅತ್ಯಧಿಕ ಮತಗಳ ಅಂತರದಲ್ಲಿ ಜಯ ಗಳಿಸಿದ್ದು, ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿದೆ. ಈ ಕ್ಷೇತ್ರಕ್ಕೆ 1951ರಿಂದ ಇದುವರೆಗೆ ನಡೆದ 17 ಲೋಕಸಭಾ ಚುನಾವಣೆಗಳಲ್ಲಿ ಮತ್ತು ಚಿಕ್ಕಮಗಳೂರು ಕ್ಷೇತ್ರ ಹಾಸನದಿಂದ ಬೇರ್ಪಟ್ಟು 1967ರಿಂದ ಸ್ವತಂತ್ರ ಕ್ಷೇತ್ರವಾಗಿ 2009ರ ವರೆಗೆ ನಡೆದ 13 ಲೋಕಸಭಾ ಚುನಾ ವಣೆಯಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆಯವರು ದಾಖಲೆಯ ಅಂತರದಲ್ಲಿ ವಿಜಯ ಸಾಧಿಸಿದ್ದಾರೆ.

ಈ ಮೂಲಕ ಮೋದಿ ಅಲೆ ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲೂ ಬಿಜೆಪಿಯ ಕೈ ಹಿಡಿದಿದೆ. ಬಿಜೆಪಿ ನಾಯಕರ ಒಗ್ಗಟ್ಟು, ಕಾರ್ಯಕರ್ತರ ಹುಮ್ಮಸ್ಸು, ಯುವ ಮತದಾರರು ಮೋದಿ ಪರ ನಿಂತದ್ದು ಈ ಭಾರೀ ಅಂತರದ ಗೆಲುವಿಗೆ ಕಾರಣ ಎಂದು ಹೇಳಬಹುದು.

ಕಳೆದ ಬಾರಿಯ ದಾಖಲೆ ಪತನ
2014ರ ಲೋಕಸಭಾ ಚುನಾವಣೆ ಯಲ್ಲಿ ಶೋಭಾ 5,81,168 ಮತ ಗಳಿಸಿದ್ದು, ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ 3,99,525 ಮತಗಳನ್ನು ಗಳಿಸಿದ್ದರು. ಈ ಮೂಲಕ 1,81,643 ಮತ ಅಂತರ ದಲ್ಲಿ ಜಯಭೇರಿ ಬಾರಿಸಿದ್ದರು.

ಕ್ಷೇತ್ರವಾರು ಗಳಿಕೆಯೂ ಹೆಚ್ಚಳ
ಕುಂದಾಪುರ, ಉಡುಪಿ, ಕಾಪು, ಕಾರ್ಕಳ, ಶೃಂಗೇರಿ, ಮೂಡಿಗೆರೆ, ಚಿಕ್ಕಮಗಳೂರು, ತರಿಕೆರೆ ವಿಧಾನಸಭಾ ಕ್ಷೇತ್ರಗಳಲ್ಲೂ ಮತಗಳಿಕೆ ದಾಖಲೆ ಮಟ್ಟಕ್ಕೆ ತಲುಪಿದೆ.

ದಾಖಲೆ ಅಂತರ2014ರ ಲೋಕಸಭಾ ಚುನಾವಣೆ ಯಲ್ಲಿ 1,81,643 ಮತಗಳ ಅಂತರ ದಲ್ಲಿ ಜಯಭೇರಿ ಬಾರಿಸಿದ್ದ ಶೋಭಾ ಅವರ ಗೆಲುವಿನ ಅಂತರ ಈ ಬಾರಿ 3 ಪಟ್ಟು ಹೆಚ್ಚಳವಾಗಿರುವುದು ವಿಶೇಷ. ಪ್ರತಿ ಸ್ಪರ್ಧಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಅವರಿಗಿಂತ ಸುಮಾರು 3.45 ಲಕ್ಷ ಮತ ಅಂತರದಲ್ಲಿ ಜಯಗಳಿಸಿದ್ದಾರೆ.

ಫ‌ಲ ನೀಡದ ಮೈತ್ರಿ ಅಭ್ಯರ್ಥಿ
ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇಲ್ಲದಿ ರುವುದರಿಂದ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತವೆಂದೇ ಹೇಳಲಾಗು ತ್ತಿತ್ತು. ಆದರೆ ಇಷ್ಟು ಅಂತರದ ಗೆಲುವು ಬಿಜೆಪಿ ಪಾಳಯದಲ್ಲೂ ಅಚ್ಚರಿ ಮೂಡಿಸಿದೆ. ಈ ಭಾಗದಲ್ಲಿ ಜೆಡಿಎಸ್‌ ಪ್ರಬಲವಾಗಿಲ್ಲದೆ ಇರುವುದು ಕೂಡ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಸೋಲಿಗೆ ಒಂದು ಕಾರಣ ಎನ್ನಲಾಗುತ್ತಿದೆ.

ಮತಗಳ ಅಂತರ “ಲಕ್ಷಾಂತರ’
ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ 5 ಬಾರಿ ಚುನಾಯಿತ ರಾದದ್ದು ಕಾಂಗ್ರೆಸ್‌ ನಾಯಕ ಆಸ್ಕರ್‌ ಫೆರ್ನಾಂಡಿಸ್‌. ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಆಸ್ಕರ್‌ ಮೂರು ಬಾರಿ, ಟಿ.ಎ.ಪೈ ಒಂದು ಬಾರಿ ಗೆಲುವು ಸಾಧಿಸಿ ದ್ದರು. ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಡಿ.ಎಂ. ಪುಟ್ಟೇಗೌಡರು ಎರಡು ಬಾರಿ, ಡಿ.ಕೆ. ತಾರಾದೇವಿಯವರು ಒಂದು ಬಾರಿ ಲಕ್ಷಕ್ಕೂ ಹೆಚ್ಚು ಅಂತರ ದಿಂದ ಗೆಲುವು ಸಾಧಿಸಿದ್ದರು. ಆದರೆ ಈ ದಾಖಲೆಗಳನ್ನು ಶೋಭಾ ಕರಂದ್ಲಾಜೆ ಮುರಿದಿದ್ದಾರೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.