ಕೋವಿಡ್ ಮಾರ್ಗಸೂಚಿ ಬದಲಾವಣೆ : ಉಡುಪಿಯಲ್ಲಿ ಅಂಗಡಿಗಳನ್ನು ಬಂದ್ ಮಾಡಿಸಿದ ಅಧಿಕಾರಿಗಳು
Team Udayavani, Apr 22, 2021, 5:31 PM IST
ಉಡುಪಿ: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಕಾಏಕಿ ಮಾರ್ಗಸೂಚಿ ಬದಲಾವಣೆ ಮಾಡಿದೆ. ರಾಜ್ಯಾದ್ಯಂತ ಹೊಸ ನಿಯಮಗಳು ಜಾರಿಗೆ ಬಂದಿವೆ.
ನೂತನ ನಿಯಮದಂತೆ ಇಂದು ( ಏಪ್ರಿಲ್ 22) ನಗರಸಭೆ ವ್ಯಾಪ್ತಿಯೊಳಗೆ ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅಂಗಡಿಗಳನ್ನು ನಗರಸಭೆ ಅಧಿಕಾರಿಗಳು ಬಂದ್ ಮಾಡಿಸಿದ್ದಾರೆ.
ಕಟಪಾಡಿಯಲ್ಲೂ ಬಂದ್:
ಸರಕಾರದ ಆದೇಶದಂತೆ ಪೊಲೀಸರು ಕಟಪಾಡಿಯಲ್ಲಿ ದಿನ ಅವಶ್ಯಕ ಸಾಮಾಗ್ರಿಗಳ ಅಂಗಡಿಗಳನ್ನು ಹೊರತುಪಡಿಸಿ ಇತರೆ ಅಂಗಡಿ- ಮುಂಗಟ್ಟುಗಳನ್ನು ಮುಚ್ಚುವಂತೆ ಸೂಚಿಸಿದ್ದಾರೆ.
ಇನ್ನು ಮೇ 4ರವರೆಗೆ ಅಗತ್ಯ ಸೇವೆ ಹೊರತುಪಡಿಸಿ ಎಲ್ಲಾ ಸೇವೆಗಳು ಬಂದ್ ಆಗಲಿವೆ ಎಂದು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಅಲ್ಲದೇ ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡುತ್ತಿದ್ದಾರೆ.
ಖಾಸಗಿ ಸಂಸ್ಥೆಗಳಲ್ಲಿ ಕೂಡ ಅಗತ್ಯ ಸಿಬ್ಬಂದಿ ಹೊರತುಪಡಿಸಿ ಬೇರೆ ಸಿಬ್ಬಂದಿಗೆ ಅವಕಾಶವಿಲ್ಲ. ಔಷಧ ಅಂಗಡಿ, ದಿನಸಿ, ಹಣ್ಣು-ತರಕಾರಿ, ಸಲೂನ್ ಬ್ಯೂಟಿಪಾರ್ಲರ್, ವೈನ್ ಶಾಪ್ ಹೊರತುಪಡಿಸಿ ಉಳಿದೆಲ್ಲ ಅಂಗಡಿ, ಶಾಪಿಂಗ್ ಕಾಂಪ್ಲೆಕ್ಸ್, ಮಾಲ್ ಸೇರಿದಂತೆ ಎಲ್ಲಾ ಸೇವೆಗಳನ್ನು ಬಂದ್ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ