ಗ್ರಾಮೀಣ ನೀರು ಸರಬರಾಜು ಇಲಾಖೆಯಲ್ಲಿ ಸಿಬಂದಿ ಕೊರತೆ

ಬಹುತೇಕ ಹುದ್ದೆಗಳೆಲ್ಲವೂ ಖಾಲಿ, ಅಧಿಕಾರಿಗಳಿಗೆ ಸಮಸ್ಯೆ ಎದುರಿಸುವ ಸವಾಲು

Team Udayavani, Feb 25, 2020, 5:19 AM IST

Water

ಉಡುಪಿ: ಹಳ್ಳಿಗಳಲ್ಲಿ ನೀರಿನ ಸಮಸ್ಯೆಯಾದರೆ ಜನರು ಮೊದಲು ಕರೆ ಮಾಡು ವುದು ಈ ಇಲಾಖೆಗೆ. ಆದರೆ ಜನರ ಅಹವಾಲು ಕೇಳಲು, ಕಾರ್ಯಪ್ರವೃತ್ತರಾಗಲು ಇಲ್ಲಿ ಸಿಬಂದಿಯದ್ದೇ ಸಮಸ್ಯೆ. ಇಲಾಖೆಯಲ್ಲಿ 57 ಹುದ್ದೆ ಭರ್ತಿಯಾಗ ಬೇಕಿತ್ತು. ಆದರೆ ಇರುವುದು ಕೇವಲ 19 ಮಂದಿ. 38 ಹುದ್ದೆಗಳು ಖಾಲಿ ಉಳಿದಿದ್ದು, ಇಲಾಖೆಯ ದೈನಂದಿನ ಕೆಲಸಗಳೂ ತೆವಳುತ್ತ ಸಾಗುತ್ತಿವೆ.

ಸ್ಪಂದನೆ ಕಷ್ಟ
ಕಡು ಬೇಸಗೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಉಡುಪಿ ಜಿ.ಪಂ. ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಕಚೇರಿ ಖಾಲಿ ಬಿದ್ದಿದೆ. ಇದರಿಂದ ಮುಂದಿನ ದಿನಗಳಲ್ಲಿ ಜನರ ಅಹವಾಲುಗಳಿಗೆ ಸ್ಪಂದನೆ ಸಿಗುವುದೇ ಸಂಶಯಾಸ್ಪದವಾಗಿದೆ.

ಪ್ರಮುಖ ಹುದ್ದೆಗಳೇ ಖಾಲಿ
ಇಲಾಖೆಯ ಎಂಜಿನಿಯರ್‌ ಹುದ್ದೆ ಭರ್ತಿಗೊಂಡಿದ್ದರೂ, ಸಹಾಯಕ ಎಂಜಿನಿಯರ್‌ 7 ಹುದ್ದೆ ಇರಬೇಕಾದ ಜಾಗದಲ್ಲಿ ತುಂಬಿರುವುದು 3 ಹುದ್ದೆ ಮಾತ್ರ. 4 ಹುದ್ದೆ ಕೊರತೆ ಎದ್ದು ಕಾಣುತ್ತಿದೆ. ಇನ್ನು ಭೂವಿಜ್ಞಾನಿ, ಕಚೇರಿ ಅಧೀಕ್ಷಕ, ಲೆಕ್ಕ ಅಧೀಕ್ಷಕ, ಶೀಘ್ರ ಲಿಪಿಗಾರರು, ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಕೆಮೆಸ್ಟ್ರಿ ತಂತ್ರಜ್ಞರು, ಬೆರಳಚ್ಚುಗಾರರು/ ಕಂಪ್ಯೂಟರ್‌ ಆಪರೇಟರ್‌, ವಾಹನ ಚಾಲಕರು ಗ್ರೂಪ್‌ ಡಿ. ನೌಕರರ ವಿಭಾಗದ ಬಹುತೇಕ ಹುದ್ದೆಗಳೆಲ್ಲವೂ ಖಾಲಿ ಬಿದ್ದಿವೆ. ಸಿಬಂದಿಯಿಲ್ಲದೆ ಅಧಿಕಾರಿಗಳು ಪರದಾಡುತ್ತಿದ್ದಾರೆ. ಇಷ್ಟಿದ್ದರೂ ಸರಕಾರ ಭರ್ತಿಗೊಳಿಸುವ ಕಡೆ ಗಮನ ಹರಿಸಿಲ್ಲ.

ಸಮಸ್ಯೆ ಪರಿಹರಿಸುವಲ್ಲಿ ವಿಫ‌ಲ
ಈಗಾಗಲೇ ಹಲವೆಡೆಗಳಲ್ಲಿ ನೀರಿನ ಸಮಸ್ಯೆ ಹುಟ್ಟಿಕೊಂಡಿದ್ದು, ನೀರಿನ ಸರಬರಾಜಿಗೆ ಅಧಿಕಾರಿಗಳು ಸಾಕಷ್ಟು ಪೂರ್ವ ಸಿದ್ಧತೆಗಳನ್ನೂ ಕೈಗೊಳ್ಳಬೇಕಿದೆ. ಆದರೆ ಸಿಬಂದಿ ಕೊರತೆ ಇವರಿಗೆ ಬಹುವಾಗಿ ಕಾಡಿದೆ. ಇದರ ಪರಿಣಾಮ ಒಟ್ಟು ಕೆಲಸದ ಫ‌ಲಿತಾಂಶದ ಮೇಲಾಗುತ್ತಿದೆ.

ಸರಕಾರಕ್ಕೆ ಕೇಳಿಸಿಲ್ಲ
ಇಲಾಖೆ ವ್ಯಾಪ್ತಿಯಲ್ಲಿ ಶುದ್ಧಗಂಗಾ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಗ್ರಾಮೀಣ ಕುಡಿಯುವ ಯೋಜನೆಗಳು ಬರುತ್ತದೆ. ಗ್ರಾಮ ಪಂಚಾಯತ್‌ ಕಚೇರಿಗಳಿಗೂ ಭೇಟಿ ನೀಡಬೇಕಿರುತ್ತದೆ. ಸಿಬಂದಿಯಿಲ್ಲದೆ ಕಾರ್ಯಕ್ರಮ ಗಳೆಲ್ಲ ಹಿಂದೆ ಬಿದ್ದಿವೆ. ಸಿಬಂದಿ ಕೊರತೆ ನೀಗಿಸಲು ಅಧಿಕಾರಿಗಳು ಹಲವು ಬಾರಿ ಕೇಳಿಕೊಂಡಿದ್ದರೂ ಸರಕಾರಕ್ಕೆ ಯಾವುದೂ ಕೇಳಿಲ್ಲ.

ಭರ್ತಿಗೆ ಪ್ರಸ್ತಾವ ಸಲ್ಲಿಕೆಯಾಗಿದೆ
ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಸಂಬಂಧ ಪ್ರಸ್ತಾವನೆಯನ್ನು ಈ ಹಿಂದೆ ಸರಕಾರಕ್ಕೆ ಸಲ್ಲಿಸಿದ್ದೇವೆ. ಭರ್ತಿ ಪ್ರಕ್ರಿಯೆ ನಡೆಯುವ ವೇಳೆಗೆ ಇಲ್ಲಿಗೂ ನೇಮಕಾತಿ ಆಗಲಿದೆ.
-ರಘುಪತಿ ಭಟ್‌,

ಶಾಸಕರು, ಉಡುಪಿ.

ಲಭ್ಯ ಸಿಬಂದಿ ಬಳಸಿ ನಿರ್ವಹಣೆ
ನಮ್ಮ ಇಲಾಖೆ ಮಾತ್ರವಲ್ಲ ಎಲ್ಲ ಇಲಾಖೆಯಲ್ಲೂ ಸಿಬಂದಿ ಕೊರತೆ ಇದೆ. ಜಿಲ್ಲೆಯ ಮುಖ್ಯ ಹುದ್ದೆಗಳಿಗೆ ನಿಯೋಜನೆಗೊಂಡವರು ವರ್ಗಾವಣೆ ಪಡೆದುಕೊಂಡು ಹೋಗುತ್ತಿರುತ್ತಾರೆ. ಇಷ್ಟರ ನಡುವೆಯೂ ತೊಂದರೆಯಾಗದಂತೆ ಲಭ್ಯ ಸಂಪನ್ಮೂಲದಲ್ಲೇ ಸಮಸ್ಯೆ ನಿವಾರಿಸುವ ಯತ್ನ ನಡೆಸುತ್ತೇವೆ.
-ಪಿ. ರಾಜ, ಎಕ್ಸಿಕ್ಯೂಟಿವ್‌ ಎಂಜಿನಿಯರ್‌, ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ, ಉಡುಪಿ.

– ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.