ಶ್ರೀಕೃಷ್ಣ ಬಾಲನಿಕೇತನದ ಮಕ್ಕಳ ಉತ್ತಮ ಸಾಧನೆ


Team Udayavani, May 29, 2018, 6:00 AM IST

bbbbbbbbb.jpg

ಉಡುಪಿ: ಈ ಬಾರಿಯ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉಡುಪಿ ಕುಕ್ಕಿಕಟ್ಟೆಯ ಶ್ರೀಕೃಷ್ಣ ಬಾಲನಿಕೇತನದ ಮಕ್ಕಳು ಉತ್ತಮ ಅಂಕ ಪಡೆದಿದ್ದಾರೆ. ಬಾಲನಿಕೇತನ ಬಡಕುಟುಂಬದವರು, ಅನಾಥ ಮಕ್ಕಳಿಗೆ ಆಶ್ರಯ ನೀಡಿ ವಿದ್ಯಾಭ್ಯಾಸಕ್ಕೆ ಅವಕಾಶ ಕಲ್ಪಿಸುತ್ತಿದೆ.

ಮನೋಜ್‌ ಶಾಲೆಗೆ ದ್ವಿತೀಯ
ಇಂದಿರಾನಗರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಮನೋಜ್‌ 545 ಅಂಕಗಳನ್ನು ಪಡೆದು ಶಾಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾನೆ. ಈತ ಮೂರನೇ ತರಗತಿಯಲ್ಲಿದ್ದಾಗ ಚೈಲ್ಡ್‌ ಲೈನ್‌ನಿಂದ ಬಾಲನಿಕೇತನಕ್ಕೆ ಸೇರಿಸಲ್ಪಟ್ಟಿದ್ದ. ಬಾಲನಿಕೇತನದ ದಾನಿಗಳು ಇವನ ವಿದ್ಯಾಭ್ಯಾಸದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಭದ್ರಾವತಿಯ ಕವಿತಾ
ಭದ್ರಾವತಿ ಮೂಲದ ಬಡ ಕುಟುಂಬದ ಕವಿತಾ 4ನೇ ತರಗತಿಗೆ ಬಾಲನಿಕೇತನಕ್ಕೆ ಸೇರ್ಪಡೆಗೊಂಡಿದ್ದಳು. ತಂದೆಗೆ ಅನಾರೋಗ್ಯವಿದ್ದು, ಕವಿತಾಳ ತಾಯಿ ತನ್ನ ಐದು ಮಕ್ಕಳನ್ನು ಸಾಕುತ್ತಿದ್ದರು. ಕವಿತಾ ಅಪೌಷ್ಠಿಕತೆಯಿಂದ ಬಳಲುತ್ತಿದ್ದಳು. ಅನಂತರ ಬಾಲ ನಿಕೇತನದಲ್ಲಿ ಉತ್ತಮ ಬೆಳವಣಿಗೆ ಕಂಡಳು. ಈಕೆಗೆ ಎಸೆಸ್ಸೆಲ್ಸಿಯಲ್ಲಿ 458 ಅಂಕಗಳು ಲಭಿಸಿವೆ.

ಕ್ರೀಡಾಪಟು ಅಶ್ವತ್ಥ್
ರಸ್ತೆಬದಿ ಚಿಂದಿ ಹೆಕ್ಕಿ ಜೀವನ ನಡೆಸುತ್ತಿದ್ದ ಮಹಿಳೆಯ ಪುತ್ರನಾಗಿ ರುವ ಅಶ್ವಥ್‌ ಚೈಲ್ಡ್‌ ಲೈನ್‌ ಸಂಸ್ಥೆಯ ಮುಖಾಂತರ ಬಾಲನಿಕೇತನಕ್ಕೆ 2010ನೇ ಇಸವಿಯಲ್ಲಿ ಸೇರ್ಪಡೆಗೊಂಡ. ಈತ ಉತ್ತಮ ಕ್ರೀಡಾ ಪಟು. ಯೋಗಾಸನ, ನಾಟಕ, ಯಕ್ಷಗಾನ ಮೊದಲಾದ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿಶೇಷ ಆಸಕ್ತಿ ಹೊಂದಿದ್ದಾನೆ. ಈತ ಎಸೆಸ್ಸೆಲ್ಲಿಯಲ್ಲಿ 429 ಅಂಕಗಳನ್ನು ಪಡೆದಿದ್ದಾನೆ. 

ತಂದೆಯಿಲ್ಲದ ಸಲ್ಮಾ 
ಚಿಕ್ಕ ಪ್ರಾಯದಲ್ಲಿಯೇ ತಂದೆಯನ್ನು ಕಳೆದುಕೊಂಡ ಸಲ್ಮಾ ತನ್ನ ತಾಯಿಯ ಜತೆ ಗುಡಿಸಲಿನಲ್ಲಿ ವಾಸ ಮಾಡುತ್ತಿದ್ದಳು. ಸಾಕಲು ಕಷ್ಟವಾದಾಗ ತಾಯಿ ಈಕೆಯನ್ನು ಬಾಲನಿಕೇತನಕ್ಕೆ ಸೇರ್ಪಡೆಗೊಳಿಸಿದರು. ಕ್ರೀಡೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೊಂದಿರುವ ಸಲ್ಮಾ ಎಸೆಸ್ಸೆಲ್ಸಿಯಲ್ಲಿ 416 ಅಂಕ ಪಡೆದಿದ್ದಾಳೆ.

ಗುಡಿಸಲಿನಲ್ಲಿದ್ದ ಭರತ್‌
ಸಣ್ಣ ಪ್ರಾಯದಲ್ಲಿಯೇ ತಂದೆಯನ್ನು ಕಳೆದುಕೊಂಡ ಭರತ್‌ ಭದ್ರಾವತಿಯಲ್ಲಿ ಗುಡಿಸಲಿನಲ್ಲಿ ವಾಸವಾಗಿದ್ದು ಅನಂತರ ಬಾಲನಿಕೇತನಕ್ಕೆ ಸೇರ್ಪಡೆಯಾದ. ಯೋಗಾಸನದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದಿರುವ ಈತ ಎಸೆಸ್ಸೆಲ್ಸಿಯಲ್ಲಿ 393 ಅಂಕಗಳನ್ನು ಪಡೆದಿದ್ದಾನೆ. 

ಯಶೋಗಾಥೆ ತಿಳಿಸಿ
ಹತ್ತಾರು ಕೊರತೆಗಳ ಮಧ್ಯೆ ಪರೀಕ್ಷೆ ಯನ್ನು ಗೆದ್ದು ಸ್ಫೂರ್ತಿಯಾದವರು ಹಲವರಿದ್ದಾರೆ. ಎಸೆಸೆಲ್ಸಿ  ಪರೀಕ್ಷೆಯಲ್ಲಿ ಹೀಗೆಯೇ ನಿಮ್ಮ ಸುತ್ತಮುತ್ತ ಕಷ್ಟದ ಕಲ್ಲು ಮುಳ್ಳುಗಳ ಮಧ್ಯೆಯೇ ಮಹತ್ತರ ಸಾಧನೆ ಮಾಡಿದ್ದವರಿದ್ದರೆ ಅವರ ದೂರವಾಣಿ ಸಂಖ್ಯೆ, ಹೆಸರು ತಿಳಿಸಿ. ನಾವು ಅವರ ಬಗ್ಗೆ ಪ್ರಕಟಿಸುತ್ತೇವೆ, ಉಳಿದವರಿಗೂ ಸ್ಫೂರ್ತಿಯಾಗಲಿ. 
ನಮ್ಮ ವಾಟ್ಸಪ್‌ ಸಂಖ್ಯೆ 
99641 69554

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.