ಪಚ್ಚೆಮಣಿ ಚಿನ್ನದ ಹಾರ ಕೃಷ್ಣಾರ್ಪಣ; ಶ್ರೀ ಕಾಶೀ ಮಠಾಧೀಶರ ಕಾಣಿಕೆ
Team Udayavani, Jan 5, 2022, 5:50 AM IST
ಉಡುಪಿ: ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶ ಶ್ರೀ ಸಂಯಮೀಂದ್ರತೀರ್ಥ ಶ್ರೀಪಾದರು ಕಾಣಿಕೆಯಾಗಿ ಅರ್ಪಿಸಿದ ಪಚ್ಚೆ ಮಣಿಯ ಚಿನ್ನದ ಹಾರದಿಂದ ಶ್ರೀಕೃಷ್ಣ ದೇವರ ವಿಗ್ರಹವನ್ನು ಅಲಂಕರಿಸಲಾಯಿತು.
ಕಾಶೀ ಮಠಾಧೀಶರ ಜನ್ಮನಕ್ಷತ್ರಕ್ಕೆ ಅನುಗುಣವಾಗಿ ಸೋಮವಾರ ಬೆಳಗ್ಗೆ ಸಮರ್ಪಿಸಲಾಯಿತು. ಮಂಗಳವಾರವೂ ಹಾರದಿಂದ ಅಲಂಕರಿಸಲಾಯಿತು. ಎರಡೂ ದಿನ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಅಲಂಕಾರ ಪೂಜೆಯನ್ನು ನಡೆಸಿದರೆ, ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು. ಎರಡೂ ದಿನ ಕಡೆಗೋಲು ಕೃಷ್ಣನ ಅಲಂಕಾರವನ್ನು ಮಾಡಲಾಗಿತ್ತು.
ಇದನ್ನೂ ಓದಿ:ಸ್ಯಾಮ್ಸಂಗ್ನಿಂದ ಹೊಸ ಫೋನ್; ಪ್ರಸಕ್ತ ವರ್ಷದ ಮೊದಲ ಸ್ಮಾರ್ಟ್ಫೋನ್
ಕಾಶೀ ಮಠಾಧೀಶರು ಡಿ. 18ರಂದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಹಿನ್ನೆಲೆಯಲ್ಲಿ ಶ್ರೀಪಾದರು ನೀಡಿದ ಪಚ್ಚೆ ಮಣಿಯ ಚಿನ್ನದ ಹಾರವನ್ನು ಡಿ. 31ರಂದು ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ದೇವಸ್ಥಾನಗಳ ಪ್ರಮುಖರು ಪರ್ಯಾಯ ಶ್ರೀಪಾದರಿಗೆ ಹಸ್ತಾಂತರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ