ಶೀರೂರು ಮಠಕ್ಕೆ ಉತ್ತರಾಧಿಕಾರಿ ನೇಮಕಕ್ಕೆ ಸಪ್ತ ಮಠಾಧೀಶರ ಆಗ್ರಹ?


Team Udayavani, Jul 4, 2018, 3:55 AM IST

krishna-mutt-udupi-600.jpg

ಉಡುಪಿ: ಉಡುಪಿ ಅಷ್ಟಮಠಗಳೊಳಗೆ ಉಂಟಾಗಿರುವ ಹೊಸ ಬೆಳವಣಿಗೆಯಲ್ಲಿ ಶೀರೂರು ಮಠಕ್ಕೆ ಉತ್ತರಾಧಿಕಾರಿ ನೇಮಿಸಲು ಇತರ ಏಳು ಮಠಾಧೀಶರು ಆಗ್ರಹಿಸಿದ್ದು, ಇಲ್ಲವಾದರೆ ಶೀರೂರು ಮಠದ ಪಟ್ಟದ ದೇವರನ್ನು ಹಿಂದಿರುಗಿಸಲಾಗದು ಎಂದು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ಶೀರೂರು ಶ್ರೀಗಳ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರ, ಹೇಳಿಕೆಯ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಅಷ್ಟಮಠಗಳ ಕೆಲವೊಂದು ನಿಯಮಕ್ಕೆ ಒಳಪಟ್ಟು ಶೀರೂರು ಶ್ರೀಗಳನ್ನು ಹೊರತುಪಡಿಸಿ ಇತರ ಏಳು ಮಠಾಧೀಶರೂ ಹಲವು  ಸಭೆ ನಡೆಸಿದ್ದರು. ಕೆಲವು ಸಭೆಗಳಲ್ಲಿ ವಿದೇಶದಲ್ಲಿದ್ದ ಪುತ್ತಿಗೆ ಸ್ವಾಮೀಜಿ, ಸಂಚಾರದಲ್ಲಿದ್ದ ಪೇಜಾವರ ಸ್ವಾಮೀಜಿ, ಶೀರೂರು ಸ್ವಾಮೀಜಿಯವರೂ ಪಾಲ್ಗೊಂಡಿದ್ದರು. ಒಬ್ಬರು ಸ್ವಾಮೀಜಿಯವರು ಈ ಬಗ್ಗೆ ಶೀರೂರು ಶ್ರೀ ಜತೆಗೆ ಮಾತುಕತೆ ನಡೆಸಿ ಬಗೆಹರಿಸಲು ಪ್ರಯತ್ನಿಸುವುದಾಗಿ ತಿಳಿಸಿದ ಕಾರಣ ಇತರ ಮಠಾಧೀಶರು ಮಾಧ್ಯಮಗಳಿಗೆ ನೇರ ಹೇಳಿಕೆ ನೀಡುವುದನ್ನು ನಿಲ್ಲಿಸಿದ್ದರು. ಆದರೆ ಇದಾವುದೂ ಫ‌ಲಕಾರಿಯಾಗಿಲ್ಲ ಎನ್ನಲಾಗಿದೆ. ಇತ್ತೀಚೆಗಿನ ಸಭೆ ರವಿವಾರ ನಡೆದಿದೆ.

ಅಷ್ಟ ಮಠಗಳ ನಿಯಮಾನುಸಾರ ಆಯಾ ಮಠದ ಪಟ್ಟದ ದೇವರ ಪೂಜೆಯನ್ನು ಅದೇ ಮಠದ ಸ್ವಾಮೀಜಿ ನಡೆಸಬೇಕು. ಇಲ್ಲವಾದರೆ ಇತರ ಮಠಗಳಲ್ಲಿ ಒಬ್ಬರು ಮಾಡಬೇಕು. ಸ್ವಲ್ಪ ಸಮಯದಿಂದ ಶೀರೂರು ಮಠದ ಪಟ್ಟದ ದೇವರು ಶ್ರೀಕೃಷ್ಣ ಮಠದಲ್ಲಿ ಇತರ ಮಠಾಧೀಶರಿಂದ ಪೂಜೆಗೊಳ್ಳುತ್ತಿದೆ. ಈಗ ಜವಾಬ್ದಾರಿಯುತ ಕಿರಿಯ ಸ್ವಾಮೀಜಿಯವರನ್ನು ಪೀಠಕ್ಕೆ ನೇಮಿಸುವುದಾದರೆ ಮಾತ್ರ ಪಟ್ಟದ ದೇವರನ್ನು ಕೊಡುವುದಾಗಿ ಇತರ ಮಠಾಧೀಶರು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪೇಜಾವರ ಹಿರಿಯ ಶ್ರೀಪಾದರು ‘ನಾವು ಉಡುಪಿಯಲ್ಲಿ ಸದಾ ಕಾಲ ಇರುವುದಿಲ್ಲ. ಆದ್ದರಿಂದ ಇದರ ಬಗ್ಗೆ ಇತರ ಸ್ವಾಮೀಜಿಯವರು ನೋಡಿಕೊಳ್ಳುತ್ತಾರೆ’ ಎಂದು ಪ್ರತಿಕ್ರಿಯೆ ನೀಡಿದರು.

ಉತ್ತರಾಧಿಕಾರಿಯನ್ನು ನೇಮಿಸುವುದಾದರೂ ದ್ವಂದ್ವ ಮಠವಾದ ಸೋದೆ ಮಠಾಧೀಶರು ನೇಮಿಸಬೇಕು. ಆದರೆ ಇದಕ್ಕೆ ಶೀರೂರು ಸ್ವಾಮೀಜಿ ಒಪ್ಪುತ್ತಿಲ್ಲ ಎನ್ನಲಾಗಿದೆ. ಪರ್ಯಾಯ ಪಲಿಮಾರು ಸ್ವಾಮೀಜಿಯವರು ನೇಮಿಸಿದರೆ ಒಪ್ಪಬಹುದೆಂದು ಹೇಳಲಾಗುತ್ತಿದೆ. ‘ನಮ್ಮೊಳಗೆ ಬಗೆಹರಿಸಿಕೊಳ್ಳುತ್ತೇವೆ. ಇಲ್ಲವಾದರೆ ಕಾನೂನಿನ ಮೊರೆ ಹೋಗುತ್ತೇವೆ’ ಎಂದು ಸುದ್ದಿಗಾರರಿಗೆ ಶೀರೂರು ಸ್ವಾಮೀಜಿ ತಿಳಿಸಿದರು.

ಮಂಗಳವಾರ ಬೇರೆ ಪತ್ರಿಕಾಗೋಷ್ಠಿಯ ಸಂದರ್ಭ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಪರ್ಯಾಯ ಶ್ರೀ ಪಲಿಮಾರು ಮಠಾಧೀಶರು, ‘ಶೀರೂರು ಮಠದ ಪಟ್ಟದ ದೇವರಿಗೆ ನಾವು ಪೂಜೆ ಮಾಡುತ್ತಿದ್ದೇವೆ. ಮುಂದೆ ಏನು ಮಾಡಬೇಕೆಂದು ನಿರ್ಧಾರವಾಗಿಲ್ಲ. ಪೇಜಾವರ ಶ್ರೀಗಳೊಂದಿಗೆ ಚರ್ಚಿಸಿ ನಿರ್ಣಯ ತಳೆಯುತ್ತೇವೆ’ ಎಂದರು. ಪುತ್ತಿಗೆ ಶ್ರೀಗಳ ವಿಚಾರ ಕೇಳಿದಾಗ ‘ಅದು ಬೇರೆ ತೆರನಾದ ವಿಷಯ’ ಎಂದರು.

ಟಾಪ್ ನ್ಯೂಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.