ಕೃಷ್ಣಾಷ್ಟಮಿ: ಮಕ್ಕಳ ಚಿಕಿತ್ಸೆಗೆ ವೇಷ ಹಾಕಲಿರುವ ರವಿ ಕಟಪಾಡಿ


Team Udayavani, Sep 12, 2017, 7:00 AM IST

Ravi-Katapady,.jpg

ಉಡುಪಿ: ಕಳೆದ 3 ವರ್ಷಗಳಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಸಂದರ್ಭ ವಿವಿಧ ವೇಷ ಧರಿಸಿ, ಬಡ ಮಕ್ಕಳಿಗೆ ನೆರವಾಗುತ್ತಿರುವ ರವಿ ಕಟಪಾಡಿ ಅವರು ಬಳಗದೊಂದಿಗೆ ಸೇರಿ ಈ ಬಾರಿಯೂ 4 ಮಕ್ಕಳ ಚಿಕಿತ್ಸೆಗೆ ನೆರವಾಗುವ ಮಹಾದಾಸೆ ಹೊಂದಿದ್ದಾರೆ. 

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರವಿ ಕೆ. ಅವರು ರವಿ ಮತ್ತು ಫ್ರೆಂಡ್ಸ್‌ ಕಟಪಾಡಿ ಬಳಗವು ಅನಾರೋಗ್ಯದಿಂದ ಬಳಲುತ್ತಿರುವ 4 ಬಡ ಮಕ್ಕಳ ಕುಟುಂಬಕ್ಕೆ ಆರ್ಥಿಕ ಸಹಾಯ ಹಸ್ತ ನೀಡುವ ಉದ್ದೇಶದಿಂದ ಸೆ. 13, 14ರಂದು ಕ್ರಾಂಪಸ್‌ ವೇಷ ತೊಟ್ಟು ಹಣ ಸಂಗ್ರಹಿಸಲು ಮುಂದಾಗಿದೆ. ಸೆ.13, ಬೆಳಗ್ಗೆ 7 ಗಂಟೆಗೆ ಗ್ರಾಂಪಸ್‌ ವೇಷದೊಂದಿಗೆ ಕಟಪಾಡಿಯಿಂದ ಹೊರಡಲಿದ್ದೇವೆ. 

ಕಟಪಾಡಿ, ಮಲ್ಪೆ, ಪಡುಕೆರೆ, ಉದ್ಯಾವರ, ಉಡುಪಿ, ನಿಟ್ಟೂರು, ರಾಜಾಂಗಣದಲ್ಲಿ ಪ್ರದರ್ಶನ ನೀಡಿ, ಸಂಗ್ರಹವಾಗುವ ಹಣವನ್ನು ಮಕ್ಕಳಿಗೆ ನೀಡಲಿದ್ದೇವೆ ಎಂದರು.

ಮೂಡುಬಿದಿರೆಯ ದರೆಗುಡ್ಡೆ – ಪಣಪಿಲ ಪುನಿಕೆಬೆಟ್ಟುವಿನ ಒಂದೂವರೆ ವರ್ಷದ ಲಾವಣ್ಯ, ಶಿವಮೊಗ್ಗದ ಶಾಹೀನಾ ಅವರ ಪುತ್ರಿ ಮೆಹಕ್‌ ಜಿ, ಉಡುಪಿ ದೆಂದೂರುಕಟ್ಟೆಯ ಸುನೀತಾ ಪ್ರಕಾಶ್‌ ಅವರ ಒಂದುವರೆ ತಿಂಗಳಿನ ಮಗು ಹಾಗೂ ಬನ್ನಂಜೆಯ ಎಳೆಯ ಮಗುವಿಗೆ ಆರ್ಥಿಕ ಸಹಾಯ ಹಸ್ತ ನೀಡಲಿದ್ದಾರೆ.

ಈ ವೇಷಕ್ಕಾಗಿ ನನ್ನ 75ಕ್ಕೂ ಅಧಿಕ ಸ್ನೇಹಿತರು ದುಡಿಯುತ್ತಿದ್ದು, ಸಂಗ್ರಹವಾದ ಹಣವನ್ನು ಸಮನಾಗಿ ಹಂಚಿ ನಾಲ್ವರು ಮಕ್ಕಳ ಚಿಕಿತ್ಸೆಗೆ ನೀಡಲಿದ್ದೇವೆ. ಸೆ. 19ರ ಸಂಜೆ 4 ಗಂಟೆಗೆ ಕಟಪಾಡಿ ವಿಜಯ ಬ್ಯಾಂಕಿನ ಬಳಿ ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುವುದು. ಕಾರ್ಯಕ್ರಮದಲ್ಲಿ ಕೇಮಾರು ಮಠದ ಶ್ರೀ ಈಶ ವಿಠಲದಾಸ ಶ್ರೀಪಾದರು, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಹಾಗೂ ಎಸ್ಪಿ ಡಾ| ಸಂಜೀವ್‌ ಎಂ. ಪಾಟೀಲ್‌ ಭಾಗವಹಿಸಲಿದ್ದಾರೆ ಎಂದರು.

ನೀವು ನೆರವು ನೀಡಬಹುದು ಆರೋಗ್ಯ ಸಮಸ್ಯೆಯಿಂದ ಬಳಲು ತ್ತಿರುವ ಮಕ್ಕಳ ಚಿಕಿತ್ಸೆ ವೆಚ್ಚಕ್ಕಾಗಿ ವೇಷ ಹಾಕುವ ರವಿ ಕೆ. ಅವರ ಸಾಮಾಜಿಕ ಕಾರ್ಯಕ್ಕೆ ಕೈ ಜೋಡಿಸುವ ದಾನಿಗಳು ಪಾಂಗಾಳ ವಿಜಯ ಬ್ಯಾಂಕಿನ ಎಸ್‌ಬಿ ಖಾತೆ: 117206331000013 (ಐಎಫ್‌ಎಸ್‌ಸಿ ಕೋಡ್‌: VIGB 0001172) ಗೆ ಜಮಾ ಮಾಡಬಹುದು. 
ಸುದ್ದಿಗೋಷ್ಠಿಯಲ್ಲಿ ಪ್ರಾಧ್ಯಾಪಕ ದಯಾನಂದ, ಸುಧೀಶ್‌, ಚರಣ್‌ರಾಜ್‌, ಅರುಣ್‌ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.