ಪುತ್ತಿಗೆ ಶ್ರೀಗಳಿಗೆ ಇಂದು ಅಭಿನಂದನೆ


Team Udayavani, Jul 22, 2017, 7:30 AM IST

puttige-1.gif

ಉಡುಪಿ: ವಿದೇಶಗಳಲ್ಲಿ ಹಲವು ಧಾರ್ಮಿಕ ಕೇಂದ್ರಗಳನ್ನು ತೆರೆದ ಉಡುಪಿಯ ಮೊದಲ ಯತಿ ಶ್ರೀ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರನ್ನು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜು. 22 ಸಂಜೆ 5ಕ್ಕೆ ನಾಗರಿಕರ ವತಿಯಿಂದ ಸಮ್ಮಾನಿಸಲಾಗುತ್ತಿದೆ. 

ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು, ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಶ್ರೀಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿ, ಧರ್ಮ ಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ, ಸಚಿವ ಪ್ರಮೋದ್‌ ಮಧ್ವರಾಜ್‌ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಜೋಡುಕಟ್ಟೆ ಯಿಂದ 4 ಗಂಟೆಗೆ ಶೋಭಾಯಾತ್ರೆಯಲ್ಲಿ ಶ್ರೀಪಾದ ರನ್ನು ಬರಮಾಡಿಕೊಳ್ಳಲಾಗುತ್ತದೆ.

ಶ್ರೀಪಾದರು ಅಮೆರಿಕ, ಕೆನಡ, ಇಂಗ್ಲೆಂಡ್‌, ಆಸ್ಟ್ರೇಲಿಯ ಮೊದಲಾದ ದೇಶಗಳಿಗೆ ಭೇಟಿ ನೀಡಿದಾಗ ಅಲ್ಲಿನ ಭಾರತೀಯ ಮೂಲದವರು ತಮ್ಮ ಧಾರ್ಮಿಕ ಆಚರಣೆಗಳಿಗೆ ಅಗತ್ಯದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಬೇಡಿಕೆ ಇಟ್ಟರು. ಇದರ ಪರಿಣಾಮವೇ ಒಂದೊಂದಾಗಿ ಅಸ್ತಿತ್ವಕ್ಕೆ ಬರುತ್ತಿರುವ ಶ್ರದ್ಧಾ ಕೇಂದ್ರಗಳು. ಅಲ್ಲಿನ ಕಾನೂನು, ಹಣಕಾಸು ವ್ಯವಸ್ಥೆ, ಕಾಲಮಾನ ಎಲ್ಲವೂ ಭಾರತಕ್ಕಿಂತ ಸಂಪೂರ್ಣ ಭಿನ್ನವಾಗಿದ್ದರೂ, ಇಲ್ಲಿನ ಧಾರ್ಮಿಕ ನಿಯಮಗಳನ್ನೂ ಉಳಿಸಿಕೊಂಡು ಆ ವ್ಯವಸ್ಥೆಯಲ್ಲಿ ಕೇಂದ್ರಗಳನ್ನು ತೆರೆದುದು ಶ್ರೀಪಾದರ ಸಾಗರೋತ್ತರ ಸಾಧನೆಯಾಗಿದೆ. 

ಮೊದಲು ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ತಾತ್ಕಾಲಿಕ ಕೇಂದ್ರಗಳನ್ನು ತೆರೆದ ಶ್ರೀಪಾದರು ವ್ಯವಸ್ಥೆಗಳನ್ನು ಕ್ರೋಡೀಕರಿಸಿಕೊಂಡು ವಿಗ್ರಹಗಳ ಪ್ರತಿಷ್ಠಾಪನೆ ಮಾಡಿದರು. ಇದಕ್ಕಾಗಿ ಕೋಟ್ಯಂತರ ರೂ. ವೆಚ್ಚವಾಗುತ್ತಿದೆ.
  
ಗಜಪೃಷ್ಠ- ಬ್ರಹ್ಮರಥ ಶೈಲಿ
ಎಂಟು ವರ್ಷಗಳ ಹಿಂದೆ ಅಮೆರಿಕದ ಎಡಿಸನ್‌ ನಗರದಲ್ಲಿ ಜಾಗವನ್ನು ಖರೀದಿಸಿ “ಕೃಷ್ಣ ವೃಂದಾವನ’ ಕ್ಷೇತ್ರವೆಂದು ಹೆಸರಿಸಿದ್ದ ಶ್ರೀಪಾದರು ಇತ್ತೀಚೆಗೆ ಅಲ್ಲಿ ಉಡುಪಿ ಶ್ರೀಕೃಷ್ಣನನ್ನು ಹೋಲುವ ಕೃಷ್ಣ ವಿಗ್ರಹದ ಪ್ರತಿಷ್ಠೆ ನಡೆಸಿದರು. 
ದೇವಸ್ಥಾನವನ್ನು ಉಡುಪಿ ಅನಂತೇಶ್ವರ ದೇವಸ್ಥಾನದ ಗಜಪೃಷ್ಠ ಆಯದಲ್ಲಿ, ಶ್ರೀಕೃಷ್ಣ ಮಠದ ಬ್ರಹ್ಮರಥದ ಮಾದರಿಯಲ್ಲಿ ನಿರ್ಮಿಸಲಾಗಿದೆ. ಒಟ್ಟು ವಿಸ್ತೀರ್ಣ ಸುಮಾರು 3.5 ಎಕ್ರೆ. ಪೂಜಾಗೃಹ, ಭೋಜನಾಲಯ, ಸಿಬಂದಿ ವಸತಿಗೃಹ, ಸುಮಾರು 300 ಜನರು ಸೇರಬಹುದಾದ ಸಮುದಾಯ ಸಭಾಂಗಣವಿದೆ. ದಾರುಶಿಲ್ಪ ವೈಭವ, ವಾಸ್ತುಶಿಲ್ಪದ ಸಮ್ಮಿಲನಗಳು ಇದರ ವೈಶಿಷ್ಟé. 

ಕುಶಲಕರ್ಮಿಗಳು
ವಿಗ್ರಹದ ಪಾಣಿಪೀಠ (ಕಲ್ಲು), ಮರದ ಕೆತ್ತನೆಗಳನ್ನು ಮೂಡಬಿದಿರೆಯ ಹರೀಶ ಆಚಾರ್ಯರ ನೇತೃತ್ವದಲ್ಲಿ ನಿರ್ಮಿಸಿ ಸಮುದ್ರದ ಮಾರ್ಗದ ಮೂಲಕ ಎಡಿಸನ್‌ಗೆ ಸಾಗಿಸಿ ಜೋಡಿಸಲಾಗಿದೆ. ಎಡಿಸನ್‌ನಲ್ಲಿ ಮರದ ಕೆತ್ತನೆಗಳನ್ನುಹರೀಶ ಆಚಾರ್ಯರ ಕುಶಲಕರ್ಮಿಗಳು ಜೋಡಿಸಿ ದರು. ಇದರ ಸಾಗಾಟದ ಖರ್ಚೇ ಸುಮಾರು 50 ಲ.ರೂ.  ಕೃಷ್ಣ ವಿಗ್ರಹವನ್ನು ಸಾಲಿಗ್ರಾಮ ಶಿಲೆಯಿಂದ ರಚಿಸಲಾಗಿದೆ. ನೇಪಾಲದ ಗಂಡಕಿ ನದಿಯಲ್ಲಿ ಸಿಗುವ ಸಾಲಿಗ್ರಾಮದ ಶಿಲೆಯಲ್ಲಿ  ವಿಗ್ರಹವನ್ನು ನೇಪಾಲದಲ್ಲಿ ನಿಂತು ಸುಮಾರು ಆರು ತಿಂಗಳ ಪರಿಶ್ರಮದಲ್ಲಿ ಕಡೆದವರು ಶಿರಸಿಯ ಹರೀಶ ಆಚಾರ್ಯರು. 

ಟಾಪ್ ನ್ಯೂಸ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.