ನೂತನ ಕಟ್ಟಡ ಕದಿರು ಉದ್ಘಾಟನೆ, ಸಮ್ಮಾನ
ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘ
Team Udayavani, Jun 29, 2019, 5:03 AM IST
ಸಿದ್ದಾಪುರ: ಶತಮಾನೋತ್ಸವ ಸಂಭ್ರಮಾಚರಣೆಯ ಸಮೀಪದಲ್ಲಿರುವ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘವು ಸ್ವಂತ ಬಂಡವಾಳದಿಂದ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಕಟ್ಟಡ ಕದಿರು ಉದ್ಘಾಟನೆ ಕಾರ್ಯಕ್ರಮದಲ್ಲಿ ಗಣ್ಯರಿಗೆ ಸಮ್ಮಾನ ನಡೆಯಿತು.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರಕುಮಾರ್ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರ ರಾವ್ ಅವರನ್ನು ಸಂಘದ ವತಿಯಿಂದ ಸಮ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಎ. ಜಯರಾಮ ಭಂಡಾರಿ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಮೇಶ್ ಗಾಣಿಗ ಅವರನ್ನು ಸಂಘದ ಸದಸ್ಯರು ಸಮ್ಮಾನಿಸಿದರು. ಕಟ್ಟಡ ನಿರ್ಮಿಸುವಲ್ಲಿ ಕರ್ತವ್ಯ ನಿರ್ವಹಿಸಿದ ಗುತ್ತಿಗೆದಾರರನ್ನು ಹಾಗೂ ಕಾರ್ಮಿಕರನ್ನು ಗುರುತಿಸಿ, ಗೌರವಿಸಲಾಯಿತು.
ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ದ. ಕ. ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೊಡವೂರು ರವಿರಾಜ್ ಹೆಗ್ಡೆ, ಜಿ. ಪಂ. ಸದಸ್ಯ ರೋಹಿತ್ ಕುಮಾರ್ ಶೆಟ್ಟಿ, ತಾ. ಪಂ. ಸದಸ್ಯರಾದ ಎಸ್. ಕೆ. ವಾಸುದೇವ ಪೈ ಸಿದ್ದಾಪುರ, ಪೂರ್ಣಿಮಾ ನಾಯ್ಕ ಹಳ್ಳಿಹೊಳೆ, ಸಿದ್ದಾಪುರ ಗ್ರಾ. ಪಂ. ಅಧ್ಯಕ್ಷೆ ಸರೋಜಿನಿ ಶೆಟ್ಟಿ, ಹೊಸಂಗಡಿ ಗ್ರಾ. ಪಂ. ಅಧ್ಯಕ್ಷೆ ಯಶೋದಾ ಶೆಟ್ಟಿ, ಕೇಂದ್ರ ಸಹಕಾರಿ ಬ್ಯಾಂಕಿನ ವಲಯ ಮೇಲ್ವಿಚಾರಕ ಅಶೋಕ್ ಕುಮಾರ್ ಶೆಟ್ಟಿ ಹಾಗೂ ಸಂಘದ ಉಪಾಧ್ಯಕ್ಷ ಜಯರಾಮ ಗಾಣಿಗ, ನಿರ್ದೇಶಕರಾದ ಡಿ. ಗೋಪಾಲಕೃಷ್ಣ ಕಾಮತ್, ಚಂದ್ರ ಪ್ರಕಾಶ ಶೆಟ್ಟಿ, ಕೆ. ಸತೀಶ್ ಕುಮಾರ್ ಶೆಟ್ಟಿ ಕಡ್ರಿ, ಬಿ. ಆನಂದ ಶೆಟ್ಟಿ ಭಾಗೀಮನೆ, ಎಸ್. ಕೆ. ವಾಸುದೇವ ಪೈ, ಶಂಕರ ಶೆಟ್ಟಿ ನಳಾಲು, ರಾಘವ ನಾಯ್ಕ, ರೇವತಿ ಶೆಟ್ಟಿ, ರತ್ನ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ಗಾಣಿಗ ಹಾಗೂ ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ
Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!