ಸಿದ್ದಾಪುರ ಪೇಟೆಗೆ ಬೇಕಿದೆ ಸುಸಜ್ಜಿತ ಸರ್ಕಲ್‌

ವಾಹನಗಳ ದಟ್ಟಣೆ, ನಿತ್ಯ ಟ್ರಾಫಿಕ್‌ ಜಾಮ್‌ ; ಸರ್ಕಲ್‌ ನಿರ್ಮಾಣಕ್ಕಾಗಿ ಹೋರಾಟದ ಚಿಂತನೆ

Team Udayavani, Sep 10, 2019, 5:42 AM IST

37580709SIDE2-1-SIDDAPURA-CIRCLE

ಸಿದ್ದಾಪುರ: ಕುಂದಾಪುರ ತಾಲೂಕಿನಲ್ಲಿ ಅತೀ ವೇಗವಾಗಿ ಬೆಳೆಯುತ್ತಿರುವ ನಗರ ಸಿದ್ದಾಪುರ. ಘಟ್ಟದ ಮೇಲಿನ ಹಾಗೂ ಕೆಳಗಿನ ಪ್ರದೇಶಗಳನ್ನು ಬೆಸೆಯುವ ಪ್ರಮುಖ ನಗರ ಇದಾಗಿದೆ. ಹತ್ತಾರು ಹಳ್ಳಿಗಳ ಪ್ರಮುಖ ವ್ಯಾಪಾರ ಕೇಂದ್ರವಾಗಿರುವ ಸಿದ್ದಾಪುರ ಮೂಲ ಸೌಕರ್ಯದಿಂದ ಸೊರಗುತ್ತಿದೆ.

ಪ್ರತಿದಿನ 10 ಸಾವಿರಕ್ಕೂ ಹೆಚ್ಚು ಜನರು ಹಾಗೂ ಸುಮಾರು ಮೂರು ಸಾವಿರಕ್ಕೂ ಹೆಚ್ಚು ವಾಹನ ಓಡಾಟ ಇರುವ ಸಿದ್ದಾಪುರ ಪೇಟೆಗೆ ಬಹು ಮುಖ್ಯವಾಗಿ ಸುಸಜ್ಜಿತ ಸರ್ಕಲ್‌ ಬೇಕಾಗಿದೆ. ಅದರ ನಿರ್ಮಾಣಕ್ಕಾಗಿ ಹೋರಾಟದ ಮಾಡುವ ಬಗೆಗಿನ ಚರ್ಚೆ ಜನರಿಂದ ಕೇಳಿಬರುತ್ತಿದೆ.

ಪ್ರತಿನಿತ್ಯ ಟ್ರಾಫಿಕ್‌ ಜಾಮ್‌
ಸಿದ್ದಾಪುರ ಪೇಟೆಗೆ ಒಂದು ಕಡೆಯಿಂದ ಕುಂದಾಪುರ ಹಾಗೂ ಶಿವಮೊಗ್ಗ ರಾಜ್ಯ ಹೆದ್ದಾರಿ ಬಂದು ಸೇರಿದರೆ, ಇನ್ನೊಂದು ಕಡೆಯಿಂದ ಮಂಗಳೂರು ಹಾಗೂ ಉಡುಪಿ ಜಿಲ್ಲೆಯನ್ನು ಶಿವಮೊಗ್ಗ ಜಿಲ್ಲೆಗೆ ಬೆಸೆಯುವ ಪ್ರಮುಖ ಹೆದ್ದಾರಿ ಬಂದು ಸೇರುತ್ತದೆ. ಇದರ ಪರಿಣಾಮ ಪೇಟೆಯ ಸರ್ಕಲ್‌ನಲ್ಲಿ ವಾಹನಗಳ ದಟ್ಟಣೆಯಿಂದ ಪ್ರತಿನಿತ್ಯ ಟ್ರಾಫಿಕ್‌ ಜಾಮ್‌ನೊಂದಿಗೆ ಸಣ್ಣಪುಟ್ಟ ಅಪಘಾತಗಳು ನಡೆಯುತ್ತಿರುತ್ತವೆ. ಇದರ ಪರಿಣಾಮ ಸಾರ್ವಜನಿಕರು ತೊಂದರೆಗೆ ಸಿಲುಕುತ್ತಿದ್ದಾರೆ.

ಅಪಘಾತ ಸ್ಥಳ
ಬೆಳಗ್ಗೆ ಹಾಗೂ ಸಂಜೆಯ ವೇಳೆ ಜನ ಜಂಗುಳಿ ಇದ್ದು, ಈ ಸಂದರ್ಭದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ, ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇರುತ್ತದೆ. ಎಷ್ಟು ಜಾಗರೂಕತೆ ಮಾಡಿದರೂ ಆಗಾಗ ಸಣ್ಣಪುಟ್ಟ ಅಪಘಾತಗಳು ನಡೆಯುತ್ತಲೇ ಇರುತ್ತವೆ. ಇದ್ದ ಸರ್ಕಲ್‌ ಚಿಕ್ಕದಾಗಿದ್ದರಿಂದ ಸಿ.ಸಿ. ಕೆಮರಾ ಹೊರತು ಪಡಿಸಿ ಸಿಗ್ನಲ್‌ ಜತೆಗೆ ಯಾವುದೇ ದೊಡ್ಡ ಮಟ್ಟದ ನಾಮಫಲಕ ಇಲ್ಲದಿರುವುದರಿಂದ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಇರುವ ಸಣ್ಣ ಸರ್ಕಲ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಅನ್ನುವ ಹಾಗಾಗಿದೆ. ಸರ್ಕಲ್‌ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ಸಾರ್ವಜನಿಕವಾಗಿ ಸರ್ಕಲ್‌ ನಿರ್ಮಾಣ ಹೋರಾಟ ಸಮಿತಿಯನ್ನು ರಚಿಸಲಾಗುವುದು ಎಂದು ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಎಚ್ಚರಿಕೆಯನ್ನು ನೀಡಿದ್ದಾರೆ.

ಬೇಡಿಕೆಗಳು ಬಂದಿವೆ
ಸಿದ್ದಾಪುರ ಸರ್ಕಲ್‌ ನಿರ್ಮಾಣದ ಬಗ್ಗೆ ಜನಪ್ರತಿನಿಧಿಗಳಿಂದ ಹಾಗೂ ಸಾರ್ವಜನಿಕ ಬೇಡಿಕೆಗಳು ಬಂದಿವೆ. ಈ ಕುರಿತು ಶಾಸಕರು ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಸರ್ಕಲ್‌ ನಿರ್ಮಿಸುತ್ತೇವೆ.
– ದುರ್ಗಾದಾಸ್‌, ಎಂಜಿನಿಯರ್‌ ಲೋಕೋಪಯೋಗಿ ಇಲಾಖೆ ಕುಂದಾಪುರ

ಇಲಾಖೆಗೆ ಮನವಿ
ಸಾರ್ವಜನಿಕ ಸುರಕ್ಷೆಯ ದೃಷ್ಟಿಯಲ್ಲಿ ಸಿದ್ದಾಪುರದಲ್ಲಿ ಒಂದು ಸುಸಜ್ಜಿತವಾದ ಸರ್ಕಲ್‌ ನಿರ್ಮಾಣವಾಗಬೇಕು. ನಿರ್ಮಾಣದ ಬಗ್ಗೆ ಗ್ರಾ. ಪಂ. ನಿರ್ಣಯದೊಂದಿಗೆ ಲೋಕೋಪಯೋಗಿ ಇಲಾಖೆಗೆ ಮನವಿ ಮಾಡಲಾಗಿದೆ. ಇದರ ಬಗ್ಗೆ ಕ್ಷೇತ್ರ ಶಾಸಕರ ಗಮನಕ್ಕೆ ತಂದು ಪ್ರಸಕ್ತ ಸಾಲಿನಲ್ಲಿ ಸರ್ಕಲ್‌ ನಿರ್ಮಾಣ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು.
-ರೋಹಿತ್‌ ಕುಮಾರ ಶೆಟ್ಟಿ,
ಸದಸ್ಯ ಜಿ.ಪಂ.ಸಿದ್ದಾಪುರ

ಹೋರಾಟಕ್ಕೆ ಸಿದ್ಧ
ಸಿದ್ದಾಪುರ ಪೇಟೆಯ ವಾಹನಗಳ ದಟ್ಟಣೆ ಹೆಚ್ಚಾದ ಪರಿಣಾಮ ಸಣ್ಣಪುಟ್ಟ ಅಪಘಾತಗಳು ನಡೆಯುತ್ತಿವೆ. ಅಲ್ಲದೆ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ರಸ್ತೆ ದಾಟಲು ಕಷ್ಟವಾಗುತ್ತಿದೆ. ಸುರಕ್ಷೆಯ ದೃಷ್ಟಿಯಲ್ಲಿ ಸಿದ್ದಾಪುರದಲ್ಲಿ ಸುಸಜ್ಜಿತವಾದ ಸರ್ಕಲ್‌ ನಿರ್ಮಾಣವಾಗಬೇಕು. ಇದರ ಬಗ್ಗೆ ಜನಪ್ರತಿನಿಧಿಗಳಿಗೆ ಹಾಗೂ ಇಲಾಖಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಸರ್ಕಲ್‌ ನಿರ್ಮಾಣ ವಾಗದಿದ್ದಲ್ಲಿ ಸಂಘಟನೆಯ ಮೂಲಕ ಹೋರಾಟ ಮಾಡಬೇಕಾಗುತ್ತದೆ.
– ಸುದರ್ಶನ ಶೆಟ್ಟಿ ಬಾಳೆಬೇರು,ಗೌರವಾಧ್ಯಕ್ಷರು, ಜಯ ಕರ್ನಾಟಕ ಸಂಘಟನೆ,ಸಿದ್ದಾಪುರ ವಲಯ

ಸತೀಶ ಆಚಾರ್‌ ಉಳ್ಳೂರು

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.