
ಮನೆಯೊಳಗೆ ಅಕ್ರಮ ಪ್ರವೇಶ; ಮಾರಕಾಸ್ತ್ರದಿಂದ ಹಲ್ಲೆ: ದಂಪತಿ ಆಸ್ಪತ್ರೆಗೆ
Team Udayavani, Dec 6, 2022, 6:35 AM IST

ಸಿದ್ದಾಪುರ: ಉಳ್ಳೂರು-74 ಗ್ರಾಮದ ತೆಂಕೊದ್ದು ಕುಮಾರ ಶೆಟ್ಟಿ ಅಕ್ರಮಕೂಟ ಕಟ್ಟಿಕೊಂಡು ಮನೆಯ ಒಳಗೆ ಅಕ್ರಮ ಪ್ರವೇಶ ಮಾಡಿ, ಕೊಲೆ ಮಾಡುವ ಉದ್ದೇಶದಿಂದ ಮಾರಕ ಅಸ್ತ್ರದಿಂದ ತಲೆಗೆ ಹೊಡೆದಿದ್ದಾರೆ. ತಪ್ಪಿಸಲು ಬಂದ ಪತ್ನಿ ರುಕ್ಮಿಣಿ ಶೆಟ್ಟಿ ಅವರಿಗೂ ಹಲ್ಲೆ ನಡೆಸಿದ್ದಾರೆ ಎಂದು ತೆಂಕೊದ್ದು ಜಯರಾಮ ಶೆಟ್ಟಿ (46) ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಆರೋಪಿ ತೆಂಕೊದ್ದು ಕುಮಾರ ಶೆಟ್ಟಿಗೂ ಜಯರಾಮ ಶೆಟ್ಟಿ ಅವರ ಮಧ್ಯೆ ಮನಸ್ತಾಪ ಇತ್ತು. ಈ ಹಿನ್ನಲೆಯಲ್ಲಿ ಕುಮಾರ ಶೆಟ್ಟಿಯ ಅಳಿಯ ಪ್ರಸಾದ ಶೆಟ್ಟಿ, ಕುಮಾರ ಶೆಟ್ಟಿ, ಸಂತೋಷ ಕೊಠಾರಿ ಮತ್ತು ಇತರ 4 ಮಂದಿ ಸೇರಿ ಡಿ. 4ರ ರಾತ್ರಿ 8.30ರ ಸಮಯದಲ್ಲಿ ಅಕ್ರಮವಾಗಿ ಜಯರಾಮ ಶೆಟ್ಟಿ ಅವರ ಮನೆಯ ಒಳಗೆ ಪ್ರವೇಶಿಸಿದ್ದರು. ಪ್ರಸಾದ ಶೆಟ್ಟಿ ಮತ್ತು ಸಂತೋಷ್ ಕೊಠಾರಿ ಅವರು ಯಾವುದೂ ಆಯುಧದಿಂದ ಮನೆಯ ಒಳಗಿದ್ದ ಜಯರಾಮ ಶೆಟ್ಟಿ ಅವರ ತಲೆಗೆ ಹೊಡೆದಿದ್ದಾರೆ. ತಪ್ಪಿಸಲು ಬಂದ ಜಯರಾಮ ಶೆಟ್ಟಿಯ ಪತ್ನಿ ರುಕ್ಮಿಣಿ ಶೆಟ್ಟಿ ಅವರಿಗೂ ಹಲ್ಲೆ ನಡೆಸಿದ್ದರು. ಬೊಬ್ಬೆ ಕೇಳಿ ಮನೆಯ ಒಳಗಿದ್ದವರು ಹೊರ ಬಂದಾಗ ಆರೋಪಿಗಳು ಜೀವ ಬೆದರಿಕೆ ಹಾಕಿ ಓಡಿ ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಜಯರಾಮ ಶೆಟ್ಟಿ ಮತ್ತು ರುಕ್ಮಿಣಿ ಶೆಟ್ಟಿ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲಾಗಿದ್ದಾರೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಕಿರುಕುಳದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಆ ಸಂದರ್ಭದ ಸಹಜ ಪ್ರಕ್ರಿಯೆ: ಸಾನ್ಯಾ ಅಯ್ಯರ್

ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ 26.23 ಲಕ್ಷ ರೂ.ಸಂಗ್ರಹ

ಪಠಾಣ್ ಅಬ್ಬರಕ್ಕೆ ನಡುಗಿದ ಬಾಕ್ಸಾಫೀಸ್: ಭಾರತದಲ್ಲೇ 300 ಕೋಟಿ ಗಳಿಸಿ ಶಾರುಖ್ ಸಿನಿಮಾ

ಕೋಮುಗಲಭೆ ಸೃಷ್ಟಿಸುತ್ತಿದೆ ಬಿಜೆಪಿ ಸರ್ಕಾರ; ಆನಂದ ನ್ಯಾಮಗೌಡ

ಉಡುಪಿ: ನಾಗಬನದಲ್ಲಿ ಶ್ರೀಗಂಧ ಮರ ಕಳವು… ಆರೋಪಿ ಬಂಧನ, ಸೊತ್ತು ವಶ