ಚರ್ಚ್‌ಗಳಲ್ಲಿ ಸರಳ ಆಚರಣೆ, ಮನೆಗಳಲ್ಲಿ ಸಂಭ್ರಮ


Team Udayavani, Dec 25, 2020, 12:31 PM IST

ಚರ್ಚ್‌ಗಳಲ್ಲಿ ಸರಳ ಆಚರಣೆ, ಮನೆಗಳಲ್ಲಿ  ಸಂಭ್ರಮ

ಯುಬಿಎಂಸಿ ಚರ್ಚ್‌ನಲ್ಲಿ ನಿರ್ಮಿಸಿದ ಗೋದಲಿ.

ಉಡುಪಿ, ಡಿ. 24: ಉಡುಪಿ   ಹಾಗೂ  ಬ್ರಹ್ಮಾವರ ತಾಲೂಕಿನ ವಿವಿಧ ಚರ್ಚ್‌ಗಳಲ್ಲಿ ಯೇಸು ಕ್ರಿಸ್ತರ ಜನನಪೂರ್ವ  ಹಾಗೂ ಜನ್ಮದಿನದ ಸಡಗರವನ್ನು ಕೋವಿಡ್‌ -19ರ ನಿಯಮಾವಳಿಯೊಂದಿಗೆ ಧಾರ್ಮಿಕ ವಿಧಿಗಳಿಗೆ ಚ್ಯುತಿ  ಬಾರದಂತೆ ಸರಳವಾಗಿ ಆಚರಿಸಲಾಯಿತು.

ಕಲ್ಯಾಣಪುರ ಕೆಥೆಡ್ರಲ್‌, ಉಡುಪಿ  ಶೋಕಮಾತಾ ಇಗರ್ಜಿ, ಪೆರಂಪಳ್ಳಿ, ಮಣಿಪಾಲ, ಯುಬಿಎಂಸಿ ಮೊದ ಲಾದ  ಚರ್ಚ್‌ಗಳು, ಕ್ರಿಶ್ಚಿಯನ್‌ ಸಮುದಾ ಯಕ್ಕೆ ಸೇರಿದ ಶಿಕ್ಷಣ ಸಂಸ್ಥೆ, ಮಳಿಗೆ, ಮನೆಗಳನ್ನು ದೀಪಗಳಿಂದ ಅಲಂಕರಿಸಲಾಗಿದೆ. ವಿವಿಧ ಚರ್ಚ್‌ ಗಳಲ್ಲಿ ಗುರುವಾರ ಸಂಜೆ ಕ್ರಿಸ್ಮಸ್‌ ಕ್ಯಾರಲ್ಸ್‌, ಬಳಿಕ ಬಲಿಪೂಜೆ ನಡೆಯಿತು. ಅನಂತರ ಜನರು ಪರಸ್ಪರ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ಸೀಮಿತ ಜನರಿಗೆ ಅವಕಾಶ :

ಬಲಿ ಪೂಜೆಯಲ್ಲಿ ಚರ್ಚ್‌ಗಳಲ್ಲಿ ಕೋವಿಡ್‌ ನಿಯಮಾವಳಿಯನ್ನು ಅನುಸರಿಸಲಾಯಿತು. ಚರ್ಚ್‌ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಸೀಮಿತ ಜನರಿಗೆ ಚರ್ಚ್‌ ಒಳಗೆ, ಉಳಿದವರಿಗೆ ಚರ್ಚ್‌ನ ಆವರಣದಲ್ಲಿ ಎಲ್‌ಇಡಿ ಟಿವಿ ಮೂಲಕ  ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.

ಸಾಂಸ್ಕೃತಿಕ ಕಾರ್ಯಕ್ರಮಗಳು ರದ್ದು :

ಈ ಹಿಂದೆ ಕ್ರಿಸ್ಮಸ್‌ ಹಬ್ಬದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಚರ್ಚ್‌ ಸೇರಿದಂತೆ ವಿವಿಧ ಕಡೆಗಳಲ್ಲಿ ಆಚರಿಸಲಾಗುತ್ತಿತ್ತು. ಆದರೆ ಕೋವಿಡ್‌ ಹಿನ್ನೆಲೆಯಲ್ಲಿ ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಈ ಬಾರಿ ಹಬ್ಬದ  ಸಡಗರ ಕೇವಲ ಮನೆಗಳಲ್ಲಿ ಸೀಮಿತ ಗೊಂಡಿದೆ.

ಕ್ರಿಸ್ಮಸ್‌ ಟ್ರೀ, ಅಲಂಕಾರ :

ಕ್ರೈಸ್ತ ಸಮುದಾಯವರ ಮನೆಗಳಲ್ಲಿ ಕ್ರಿಸ್ಮಸ್‌ ಟ್ರೀ, ಬಣ್ಣದ ಆಲಂಕಾರಿಕ ವಸ್ತುಗಳ ಮೂಲಕ  ಸಿಂಗರಿಸಲಾಗಿದೆ. ಡಿ.1ರಂದು ಕೆಲವು ಮನೆಗಳಲ್ಲಿ ನಕ್ಷತ್ರ ತೂಗುದೀಪ ಹಾಕಲಾಗಿದೆ. ಇನ್ನು ಕೆಲವರು ಮನೆ ಆವರಣ, ಗಿಡ, ಮರಗಳಿಗೆ ವಿವಿಧ ರೀತಿಯ ದೀಪಾಲಂಕಾರ ಮಾಡಿದ್ದಾರೆ.

ವಿವಿಧ ತಿಂಡಿ ತಿನಿಸು ತಯಾರಿ :

ಕ್ರಿಸ್ಮಸ್‌ ಹಬ್ಬದ ಸಂಭ್ರಮ ಪ್ರಾರ್ಥನೆ, ಬೋಧನೆಗೆ ಮಾತ್ರ ಸೀಮಿತವಲ್ಲ. ತಿಂಡಿ ತಿನಿಸು ತಯಾರಿಯೂ ಭರ್ಜರಿ ಆಗಿರುತ್ತದೆ. ಹಲವಾರು ಮನೆಗಳಲ್ಲಿ ಕೇಕ್‌, ಕರ್ಜಿಕಾಯಿ, ಕೋಡು ಬಳೆ, ಚಕ್ಕುಲಿ, ಜಾಮೂನು, ರವೆ ಉಂಡೆ, ಕರಿದ ಅವಲಕ್ಕಿ, ರೋಸ್‌ ಕುಕ್‌ಮ, ನಿಪ್ಪಟ್ಟು, ಕ್ಯಾರೆಟ್‌ ಹಲ್ವಾ, ಡೋನಟ್ಸ್‌,  ಅಕ್ಕಿ ಮಿಠಾಯಿ ತಯಾರಿಸಿದ್ದು, ಅವು ಗಳನ್ನು ಮನೆಗೆ ಬಂದ ಬಂಧು-ಬಳಗ, ನೆರೆಹೊರೆಯವರಿಗೆ ಹಂಚಿ ಸಂಭ್ರಮಿ ಸಲು ಸಿದ್ಧತೆ ನಡೆದಿದೆ.

ಬಲಿ ಪೂಜೆ- ಸಂದೇಶ :

ಕಲ್ಯಾಣಪುರ ಮಿಲಾಗ್ರಿಸ್‌ ಕೆಥೆಡ್ರಲ್‌ನಲ್ಲಿ ಹಬ್ಬದ ವಿಶೇಷ ಬಲಿಪೂಜೆಯನ್ನು ಉಡುಪಿ ಧರ್ಮಪ್ರಾಂತ್ಯದ ಬಿಷಪ್‌ ರೆ| ಡಾ| ಜೆರಾಲ್ಡ್  ಐಸಾಕ್‌ ಲೋಬೊ ಅವರು ನೆರವೇರಿಸಿ ಹಬ್ಬದ ಸಂದೇಶವನ್ನು ನೀಡಿದರು. ಉಡುಪಿ ಶೋಕಮಾತಾ ಚರ್ಚ್‌ನ ಧರ್ಮಗುರು ಫಾ| ಚಾರ್ಲ್ಸ್‌ ಮಿನೇಜಸ್‌, ಮಿಷನ್‌ ಕಾಂಪೌಂಡ್‌ ಬಳಿಯ ಬಾಸೆಲ್‌ ಮಿಷನ್‌ ಚರ್ಚ್‌ನಲ್ಲಿ ಫಾ| ಸಂತೋಷ್‌, ಫಾ| ಸ್ಟೀಫ‌ನ್‌ ಬಂಡಿ, ಫಾ| ಮಂಜುನಾಥ್‌ ಅವರು ಬಲಿ ಪೂಜೆ ಹಬ್ಬದ ಸಂದೇಶವನ್ನು ನೀಡಿದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.