ಉಡುಪಿ, ಬೆಳ್ತಂಗಡಿ ಧರ್ಮಪ್ರಾಂತದ ಧರ್ಮಾಧ್ಯಕ್ಷರಿಂದ ಕ್ರಿಸ್ಮಸ್‌ ಸಂದೇಶ

ಸರಳ ಕ್ರಿಸ್ಮಸ್‌ ಆಚರಣೆ

Team Udayavani, Dec 21, 2021, 6:15 AM IST

ಉಡುಪಿ, ಬೆಳ್ತಂಗಡಿ ಧರ್ಮಪ್ರಾಂತದ ಧರ್ಮಾಧ್ಯಕ್ಷರಿಂದ ಕ್ರಿಸ್ಮಸ್‌ ಸಂದೇಶ

ಉಡುಪಿ: ಕ್ರೈಸ್ತ ಜಯಂತಿಯ ಶುಭಾಶಯಗಳು. ಜಗತ್ತಿನಾದ್ಯಂತ ಜಾತಿ, ಮತ, ಧರ್ಮ, ಭೇದಭಾವವಿಲ್ಲದೆ ಸರ್ವರೂ ಸಂತೋಷದಿಂದ ಆಚರಿಸುವ ಹಬ್ಬ ಕ್ರಿಸ್ಮಸ್‌. ಪ್ರಭು ಏಸು ಮಾನವರಾಗಿ ಒಂದು ಗೋದಲಿಯಲ್ಲಿ ಜನಿಸಿದರು. ದೀನರಾಗಿ ನಮ್ಮ ಮಧ್ಯೆ ವಾಸ ಮಾಡಿದರು. ಇದರ ವಿಶೇಷತೆ ದೀನತೆಯಾಗಿದೆ. ಪ್ರಭು ಏಸು ಶಾಂತಿಯ ದೂತರಾಗಿ ಬಂದರು. ಅವರು ಜನಿಸಿದಾಗ ದೇವದೂತರು ಆಡಿದ ಗೀತೆ, ಮಹೋನ್ನತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ಸುಮನಸ್ಕರಿಗೆ ಶಾಂತಿ. ಈ ಶಾಂತಿ, ಸಮಾಧಾನ ಸದಾ ನಮ್ಮೊಡನೆ ಇರಲಿ ಎಂದು ಪ್ರಾರ್ಥಿಸುತ್ತೇನೆ.

ಡಿ. 25ರಂದು ಜಗತ್ತಿನಾದ್ಯಂತ ಕ್ರಿಸ್ಮಸ್‌ ಹಬ್ಬ ಆಚರಿಸಲಾಗುತ್ತದೆ. ಕೋವಿಡ್‌ 3ನೇ ಅಲೆ ಅಪ್ಪಳಿಸುತ್ತಿದೆ. ಆದ ಕಾರಣ ನಮ್ಮ ಧರ್ಮಪ್ರಾಂತದಲ್ಲಿ ಈ ವರ್ಷ ಪೂಜೆಗೆ ಮಾತ್ರ ಆದ್ಯತೆ ನೀಡುತ್ತೇವೆ. ಜನದಟ್ಟನೆ ಕಡಿಮೆ ಮಾಡಲು ಪೂಜೆಯ ಸಂಖ್ಯೆ ಹೆಚ್ಚಿಸಲಿದ್ದೇವೆ. ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ, ಜನಸೇರಲು ಅವಕಾಶವಿಲ್ಲ. ಪೂಜೆಗೆ ಆಗಮಿಸುವಾಗ ಕೋವಿಡ್‌ ನಿಯಮಾವಳಿ ಪಾಲಿಸಲು ಸೂಚನೆ ನೀಡಲಾಗಿದೆ. ಸರಳ ಹಾಗೂ ಭಕ್ತಿ ಪೂರ್ವಕವಾಗಿ ಹಬ್ಬವನ್ನು ಆಚರಿಸಲಿದ್ದೇವೆ.

ಧರ್ಮಪ್ರಾಂತದಲ್ಲಿ ವಿಶೇಷವಾಗಿ ಲಸಿಕೆ ಕಾರ್ಯಕ್ರಮವನ್ನು ಧರ್ಮಕೇಂದ್ರ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಉಡುಪಿ ಧರ್ಮ ಪ್ರಾಂತದಲ್ಲಿ ಶೇ. 95ಕ್ಕಿಂತ ಹೆಚ್ಚಿನವರು ಲಸಿಕೆ ಪಡೆದುಕೊಂಡಿದ್ದಾರೆ.
-ಡಾ| ಜೆರಾಲ್ಡ್  ಐಸಾಕ್‌ ಲೋಬೋ,
ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷರು

ಜಗಕ್ಕೆಲ್ಲ ಪರಮಾನಂದ ತರುವ ಹಬ್ಬ
ಬೆಳ್ತಂಗಡಿ: ನಾಡಿನ ಸಮಸ್ತ ಜನರಿಗೆ ಕ್ರಿಸ್ಮಸ್‌ ಹಬ್ಬದ ಶುಭಾಶಯಗಳನ್ನು ಪ್ರೀತಿಯಿಂದ ಕೋರುತ್ತೇನೆ. ಜಗಕ್ಕೆಲ್ಲ ಪರಮಾನಂದವನ್ನು ತರುವ ಕ್ರಿಸ್ಮಸ್‌ ಹಬ್ಬದಂದು ದೇವರ ಪುತ್ರರಾದ ಶ್ರೀ ಯೇಸುಕ್ರಿಸ್ತರು ನಮ್ಮ ನಾಡನ್ನು ಆಶೀರ್ವದಿಸಲೆಂದು ಪ್ರಾರ್ಥಿಸುತ್ತೇನೆ.

ಅಸತ್ಯ, ಅಜ್ಞಾನ ಮತ್ತು ಮರಣದಲ್ಲಿ ಮುಳುಗಿ ದಾರಿ ಕಾಣದೆ ಕತ್ತಲಲ್ಲಿ ವಾಸಿಸುತ್ತಿದ್ದ ಜನರಿಗೆ ಸತ್ಯವನ್ನೂ ಬೆಳಕನ್ನೂ ನಿತ್ಯಜೀವವನ್ನೂ ನೀಡಲೆಂದು ಬಂದವರೇ ಯೇಸುಕ್ರಿಸ್ತರು. ಅವರಲ್ಲಿ ನಂಬಿಕೆಯಿಟ್ಟು ಅವರನ್ನು ತಮ್ಮ ಹೃದಯಕ್ಕೆ ಬರಮಾಡಿಕೊಳ್ಳುವವರಿಗೆ ದೇವರ ಮಕ್ಕಳಾಗಲು ಶಕ್ತಿಯನ್ನು ಅವರು ನೀಡುವರು.
ಪರಿಶುದ್ಧ ಹೃದಯದಲ್ಲಿ ಮಾತ್ರ ದೇವರು ವಾಸವಿರುತ್ತಾರೆ. ಆದ್ದರಿಂದ ನಮ್ಮ ಹೃದಯಗಳಿಂದ ಎಲ್ಲ ಕೆಡುಕುಗಳನ್ನು ನೀಗಿಸಿ ಶುದ್ಧವಾದ ನಮ್ಮ ಹೃದಯಕ್ಕೆ ಯೇಸುವನ್ನು ಬರಮಾಡಿಕೊಳ್ಳೋಣ. ಆಗ ಮಾನವರಾದ ನಮಗೆ ಮುಕ್ತಿ ಲಭಿಸುತ್ತದೆ.

ಸಮಾಜದಲ್ಲಿ ನೆಮ್ಮದಿ, ಏಕತೆ ಮತ್ತು ನೈಜವಾದ ಸಮೃದ್ಧಿ ನೆಲೆಯಾಗಬೇಕಾದರೆ ಪ್ರತಿಯೊಬ್ಬರ ಹೃದಯದಲ್ಲಿಯೂ ದೇವರಿಗೆ ವಾಸಿಸಲು ಅವಕಾಶ ನೀಡಬೇಕು. ನಾಡಿನ ಸಮಸ್ತ ಬಾಂಧವರಿಗೆ ಕ್ರಿಸ್ಮಸ್‌ ಹಬ್ಬದ ಶುಭಾಶಯಗಳನ್ನು ಕೋರುವಾಗ ಸುಖ, ಶಾಂತಿ ಮತ್ತು ನೆಮ್ಮದಿ ನಮ್ಮದಾಗಲೆಂದು ಪ್ರಾರ್ಥಿಸುತ್ತೇನೆ.
-ರೈ| ರೆ| ಡಾ| ಲಾರನ್ಸ್‌ ಮುಕ್ಕುಯಿ
ಬೆಳ್ತಂಗಡಿ ಧರ್ಮಪ್ರಾಂತದ ಧರ್ಮಾಧ್ಯಕ್ಷರು

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.