ಮಣಿಪಾಲ, ಉಡುಪಿ, ಮಲ್ಪೆ ಆಗಲಿದೆ ಸ್ಮಾರ್ಟ್‌ ಸಿಟಿ!

ಖಾಸಗಿ, ಸಾರ್ವಜನಿಕ ಸಹಭಾಗಿತ್ವ; ಡಿಪಿಆರ್‌ ಪೂರ್ಣ

Team Udayavani, Nov 12, 2020, 4:04 AM IST

ಮಣಿಪಾಲ, ಉಡುಪಿ, ಮಲ್ಪೆ ಆಗಲಿದೆ ಸ್ಮಾರ್ಟ್‌ ಸಿಟಿ!

ಉಡುಪಿ: ಉಡುಪಿ, ಮಣಿಪಾಲ ಮತ್ತು ಮಲ್ಪೆಯನ್ನು “ಸ್ಮಾರ್ಟ್‌ ಸಿಟಿ’ ಪರಿಕಲ್ಪನೆಯಲ್ಲಿ ಅಭಿವೃದ್ಧಿ ಪಡಿಸಲು ಅಗತ್ಯವಿರುವ ಸಿದ್ಧತೆ ನಡೆಯುತ್ತಿದ್ದು, ಇದೀಗ ಡಿಪಿಆರ್‌ ಪೂರ್ಣಗೊಂಡಿದೆ. ಯೋಜನೆ ಅನುಮೋದನೆಗೆ ರಾಜ್ಯ ಸರಕಾರ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆಯುತ್ತಿದೆ.

ಅಂತಾರಾಷ್ಟ್ರೀಯ ಗುಣ್ಣಮಟ್ಟದ ಮೂಲಸೌಕರ್ಯ, ಸಂಚಾರ ನಿಯಂತ್ರಣ, ಸುರಕ್ಷತೆ, ಪ್ರವಾಸೋದ್ಯಮ, ಸ್ಥಳೀಯ ಹೂಡಿಕೆ ಹೆಚ್ಚಳ ಮೊದಲಾದವು “ಸ್ಮಾರ್ಟ್‌ ಸಿಟಿ’ಯ ಮುಖ್ಯ ಯೋಜನೆಯ ಉದ್ದೇಶವಾಗಿದೆ. ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ (ಪಿಪಿಪಿ ಮಾಡೆಲ್‌) ಮಣಿಪಾಲ, ಉಡುಪಿ, ಮಲ್ಪೆ ಯನ್ನು ಸ್ಮಾರ್ಟ್‌ ಸಿಟಿಯಾಗಿ ಪರಿವರ್ತಿಸಲು ಬೆಂಗಳೂರಿನ ಸಂಸ್ಥೆ ಯೋಜನೆಯ ನೀಲನಕಾಶೆ ತಯಾರಿಸಿದೆ.

ಪಿಪಿಪಿ ಮಾಡೆಲ್‌
ಪಿಪಿಪಿ ಮಾಡೆಲ್‌ ಅನ್ವಯ ಸ್ಥಳೀಯಾಡಳಿತ ಅಂದರೆ ನಗರಸಭೆ ಹಾಗೂ ಜಿಲ್ಲಾಡಳಿತ ಖಾಸಗಿ ಸಂಸ್ಥೆಗೆ ಸ್ಮಾರ್ಟ್‌ ಸಿಟಿ ಅಭಿವೃದ್ದಿಗೆ ಅಗತ್ಯವಿರುವ ಸ್ಥಳವನ್ನು ನೀಡುತ್ತದೆ. ಈ ಯೋಜನೆಗೆ ಸ್ಥಳೀಯಾಡಳಿತದಿಂದ ಯಾವುದೇ ರೀತಿಯಾಗಿ ಆರ್ಥಿಕ ಸಹಾಯವಿರುವುದಿಲ್ಲ. ಸ್ಮಾರ್ಟ್‌ ಸಿಟಿ ಸಂಪೂರ್ಣವಾಗಿ ನಿರ್ಮಾಣವಾದ ಬಳಿಕ ಸಂಸ್ಥೆಗೆ ಆಯಾ ಸ್ಥಳದಿಂದ ಬರುವ ಜಾಹೀರಾತುಗಳು ಹಾಗೂ ಅಭಿವೃದ್ಧಿ ಪಡಿಸಿದ ಸ್ಥಳಗಳ ವಾಣಿಜ್ಯ ಅಂಗಡಿಗಳ ಆದಾಯದಿಂದ ನಗರ ನಿರ್ವಹಣೆ ಹಾಗೂ ಯೋಜನೆ ತಗಲಿದ ಮೊತ್ತ ಹಿಂಪಡೆಯಲಿದೆ.

ನಗರದ ತುಂಬ ಹದ್ದಿನ ಕಣ್ಣು
ಇನ್ನೂ ನಗರದ ಪ್ರಮುಖ ಕಡೆಗಳಲ್ಲಿ ಸಂಚಾರಿ ನಿಯಮವನ್ನು ಉಲ್ಲಂ ಸುವ ವಾಹನಗಳ ಪತ್ತೆಗೆ ಎಲ್‌ಪಿ ಕ್ಯಾಮೆರಾ, ಸ್ಮಾರ್ಟ್‌ಪೋಲ್ಸ್‌, ಸ್ಮಾರ್ಟ್‌ ಟವರ್, ಕಂಟ್ರೋಲ್‌ ಸೆಂಟರ್‌, ಬಸ್‌ಬೇ, ಆಟೋ ಬೇ, ಬೈಕ್‌ ಬೇ, ಸೈಕ್ಲಿಂಗ್‌ ಪಾಥ್‌, ಇ-ಟಾಯ್ಲೆಟ್‌, ಸ್ಮಾರ್ಟ್‌ ಲಾಂಜ್‌ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಸ್ಮಾರ್ಟ್‌ ಲೈಟ್ಸ್‌, ಕೆಮರಾ, ಸರ್ವೀಲೆನ್ಸ್‌, ವೈಫೈ ಹಾಟ್‌ಸ್ಪಾಟ್‌, ಡಿಜಿಟಲ್‌ ಡಿಸ್‌ಪ್ಲೇ, ಆರ್‌ಎಫ್ಐಡಿ ಕಾರ್ಡ್‌ ರೀಡರ್‌ ಮೊದಲಾದವುಗಳನ್ನು ಒಳಗೊಂಡ 10ಕ್ಕೂ ಅಧಿಕ ಸ್ಮಾರ್ಟ್‌ ಪೋಲ್‌, ಸ್ಮಾಟ್‌ ಟವರ್‌ಗಳನ್ನು ನಿರ್ಮಿಸುವ ಯೋಜನೆ ಇದೆ.

ಏನೆಲ್ಲ ಸ್ಮಾರ್ಟ್‌?
ಸ್ಮಾರ್ಟ್‌ ಮಣಿಪಾಲ, ಉಡುಪಿ, ಮಲ್ಪೆಯ ಚಿತ್ರಣ ಸಂಪೂರ್ಣವಾಗಿ ಬದಲಾಗಲಿದೆ. ಮಲ್ಟಿಲೆವೆಲ್‌ ಪಾರ್ಕಿಂಗ್‌ ವ್ಯವಸ್ಥೆಯಿಂದ ಪ್ರಸ್ತುತ ಉಡುಪಿ, ಮಲ್ಪೆ, ಮಣಿಪಾಲದಲ್ಲಿ ಕಾಡುತ್ತಿರುವ ಪಾರ್ಕಿಂಗ್‌ ಸಮಸ್ಯೆಗೆ ಮುಕ್ತಿ ಸಿಗಲಿದೆ. ಟ್ರಾಫಿಕ್‌ ಸಮಸ್ಯೆ ಸಂಪೂರ್ಣವಾಗಿ ಪರಿಹಾರವಾಗಲಿದೆ. ಮುಂದೆ ರೋಡ್‌ಗೆ ಇಳಿಯಲಿರುವ ಇಲೆಕ್ಟ್ರಾನಿಕ್‌ ವಾಹನಗಳಿಗಾಗಿ ಚಾರ್ಜಿಂಗ್‌ ವ್ಯವಸ್ಥೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಆಯ್ದ ಭಾಗದಲ್ಲಿ ಪ್ಯಾನಿಕ್‌ ಬಟನ್‌ ವ್ಯವಸ್ಥೆ ಇರಲಿದೆ.

ನೀಲನಕಾಶೆ ಸಿದ್ಧ
ಕೇಂದ್ರ ಸರಕಾರ ಸ್ಮಾರ್ಟ್‌ ಸಿಟಿಯಾಗಿ ಘೋಷಣೆ ಮಾಡಿದ ಬಳಿಕ ಏನೆಲ್ಲ ಸೌಲಭ್ಯ ನೀಡುತ್ತದೆಯೋ ಅದೆಲ್ಲವು ನಮ್ಮ ಪಿಪಿಪಿ ಮಾಡೆಲ್‌ ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಇರಲಿದೆ. ಬೆಂಗಳೂರಿನ ಸಂಸ್ಥೆಯೊಂದು ನೀಲನಕಾಶೆ ಸಿದ್ಧಪಡಿಸಿದೆ. ನಗರ ಪ್ರದೇಶಗಳಿಗೆ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆ ಅನುಕೂಲವಾಗಲಿದೆ. ಡಿಪಿಆರ್‌ ಪೂರ್ಣಗೊಂಡಿದ್ದು, ಸರಕಾರದಿಂದ ಅನುಮೋದನೆ ಸಿಕ್ಕದ ಬಳಿಕ ಶೀಘ್ರದಲ್ಲಿ ಟೆಂಡರ್‌ ಆಗಲಿದೆ.
– ಕೆ.ರಘುಪತಿ ಭಟ್‌,  ಶಾಸಕರು, ಉಡುಪಿ

ವಿವಿಧ ಸಮಸ್ಯೆಗಳು ದೂರ
ಮಣಿಪಾಲ, ಉಡುಪಿ, ಮಲ್ಪೆ ಆರ್ಥಿಕ, ಶೈಣಿಕ, ಪ್ರವಾಸಿ ತಾಣವಾಗಿರುವುದರಿಂದ ಇಲ್ಲಿ ಸ್ಮಾರ್ಟ್‌ ಸಿಟಿ ನಿರ್ಮಾಣ ಮಾಡಲು ಖಾಸಗಿ ಸಂಸ್ಥೆ ಮುಂದೆ ಬಂದಿದೆ. ಸ್ಮಾರ್ಟ್‌ ಸಿಟಿ ನಿರ್ಮಾಣವಾದರೆ ಟ್ರಾಫಿಕ್‌ ಸೇರಿದಂತೆ ವಿವಿಧ ಸಮಸ್ಯೆಗಳು ದೂರವಾಗಲಿದೆ.
-ಜಿ.ಜಗದೀಶ್‌, ಜಿಲ್ಲಾಧಿಕಾರಿ, ಉಡುಪಿ

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.