ಸ್ಮಾರ್ಟ್‌ ಮಣಿಪಾಲ್‌ ನೀಲನಕಾಶೆ ಸಿದ್ಧ

ಶಿಕ್ಷಣ ಕಾಶಿಯಲ್ಲಿ ಸ್ಮಾರ್ಟ್‌ ಸಿಟಿಯ ಸೌಕರ್ಯ ಯೋಜನೆ

Team Udayavani, Sep 10, 2019, 5:41 AM IST

0809UDSB6A

ಉಡುಪಿ: ಯುರೋಪ್‌ ಸೇರಿದಂತೆ 50ಕ್ಕೂ ಅಧಿಕ ದೇಶಗಳ ವಿದ್ಯಾರ್ಥಿಗಳಿರುವ ಜಾಗತಿಕ ಶಿಕ್ಷಣ ಕೇಂದ್ರ ಮಣಿಪಾಲ ನಗರಿ “ಸ್ಮಾರ್ಟ್‌ ಸಿಟಿ’ಯಾಗಿ ರೂಪುಗೊಳ್ಳುವ ಪರಿಕಲ್ಪನೆಗೆ ರೂಪ ಸಿಕ್ಕಿದೆ. 30 ಕೋ.ರೂ. ಹೂಡಿಕೆಯಲ್ಲಿ ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ(ಪಿಪಿಪಿ ಮಾಡೆಲ್‌) “ಸ್ಮಾರ್ಟ್‌ ಮಣಿಪಾಲ್‌’ ನಿರ್ಮಿಸಲು ಪ್ರಸ್ತಾವನೆಯೊಂದು ಸಿದ್ಧಗೊಳ್ಳುತ್ತಿದೆ.

ಅಂತಾರಾಷ್ಟ್ರೀಯ ಮಟ್ಟದ ಮೂಲಸೌಕರ್ಯ, ಸಂಚಾರ ನಿಯಂತ್ರಣ, ಸುರಕ್ಷತೆ, ಪ್ರವಾಸೋದ್ಯಮ, ಸ್ಥಳೀಯ ಹೂಡಿಕೆ ಹೆಚ್ಚಳ ಮೊದಲಾದವು “ಸ್ಮಾರ್ಟ್‌ ಮಣಿಪಾಲ್‌’ ಯೋಜನೆಯ ಉದ್ದೇಶಗಳು. ಸ್ಮಾರ್ಟ್‌ ಸಿಟಿ ನಿರ್ಮಾಣದಲ್ಲಿ ಖ್ಯಾತಿ ಪಡೆದಿರುವ ಸಂಸ್ಥೆ ಈ ಯೋಜನೆಯ ನೀಲನಕಾಶೆಯನ್ನು ಸಿದ್ಧಪಡಿಸಿದ್ದು ಇದಕ್ಕೆ ಸ್ಥಳೀಯಾಡಳಿತ, ಸರಕಾರ ಮಟ್ಟದ ಒಪ್ಪಿಗೆಗಳು ಇನ್ನಷ್ಟೇ ದೊರೆಯಬೇಕಿದೆ.

ಏನೆಲ್ಲಾ ಸ್ಮಾರ್ಟ್‌?
“ಸ್ಮಾರ್ಟ್‌ ಮಣಿಪಾಲ್‌’ ಮುಖ್ಯವಾಗಿ ಸಂಚಾರ ನಿಯಂತ್ರಣ ವ್ಯವಸ್ಥೆಯನ್ನು ಅತ್ಯಾಧುನಿಕ ದರ್ಜೆಗೇರಿಸುತ್ತದೆ. ಸ್ಮಾರ್ಟ್‌ಪೋಲ್ಸ್‌/ಸ್ಮಾರ್ಟ್‌ ಟವರ್, ಕಂಟ್ರೋಲ್‌ ಸೆಂಟರ್‌, ಬಸ್‌ಬೇ, ಆಟೋ ಬೇ, ಬೈಕ್‌ ಬೇ, ಸೈಕ್ಲಿಂಗ್‌ ಪಾಥ್‌, ಇ-ಟಾಯ್ಲೆಟ್‌, ಸ್ಮಾರ್ಟ್‌ ಲಾಂಜ್‌ ಮೊದಲಾದವುಗಳು ಯೋಜನೆಯ ಪ್ರಮುಖ ಭಾಗಗಳು. ಸ್ಮಾರ್ಟ್‌ ಲೈಟ್ಸ್‌, ಕೆಮರಾ, ಸರ್ವೀಲೆನ್ಸ್‌, ವೈಫೈ ಹಾಟ್‌ಸ್ಪಾಟ್‌, ಡಿಜಿಟಲ್‌ ಡಿಸ್‌ಪ್ಲೇ, ಆರ್‌ಎಫ್ಐಡಿ ಕಾರ್ಡ್‌ ರೀಡರ್‌ ಮೊದಲಾದವುಗಳನ್ನು ಒಳಗೊಂಡ 10ಕ್ಕೂ ಅಧಿಕ ಸ್ಮಾರ್ಟ್‌ ಪೋಲ್‌/ಸ್ಮಾಟ್‌ ಟವರ್‌ಗಳು ಯೋಜನೆಯ ನೀಲನಕಾಶೆಯಲ್ಲಿವೆ. ಮಲ್ಟಿಲೆವೆಲ್‌ ಪಾರ್ಕಿಂಗ್‌, ಇಲೆಕ್ಟ್ರಾನಿಕ್‌ ವಾಹನಗಳ ಚಾರ್ಜಿಂಗ್‌ ವ್ಯವಸ್ಥೆಯೂ ಇದರಲ್ಲಿ ಅಡಕವಾಗಿರುತ್ತದೆ.

“ಎಜುಕೇಶನಲ್‌ ಹಬ್‌’ ಎಂದು ಗುರುತಿಸಲ್ಪಟ್ಟ ಮಣಿಪಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳನ್ನು ಸಂಪರ್ಕಿಸುವ ಕೇಂದ್ರಸ್ಥಳವೂ ಆಗಿದ್ದು ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದಲೂ ಮಹತ್ವದ ಪಟ್ಟಣವಾಗಿದೆ. ಮಣಿಪಾಲದ ಬಳಿಕ ಉಡುಪಿ ನಗರ ಮತ್ತು ಮಲ್ಪೆಯಲ್ಲಿ ಸ್ಮಾರ್ಟ್‌ ಸಿಟಿ ಮಾದರಿಯ ಸೌಲಭ್ಯ ಒದಗಿಸುವ ಉದ್ದೇಶ ಹೊಂದಲಾಗಿದೆ. ಈ ಮೂಲಕ ಸ್ಟಾರ್ಟ್‌ಅಪ್‌ಗ್ಳಿಗೂ ಉತ್ತೇಜನ ನೀಡುವ ಉದ್ದೇಶವಿದೆ ಎಂದು ಮೂಲಗಳು ತಿಳಿಸಿವೆ. ಯೋಜನೆ ಪ್ರಸ್ತಾವನೆ ರೂಪಕ್ಕೆ ಇನ್ನಷ್ಟೇ ಬರಬೇಕಿದೆ.

ಮಣಿಪಾಲ ನಗರಕ್ಕೆ ಸೀಮಿತ
ಮಣಿಪಾಲ ನಗರಕೇಂದ್ರ ಭಾಗಕ್ಕೆ ಮಾತ್ರ ಈ ಸ್ಮಾರ್ಟ್‌ ಸಿಟಿ ಅನ್ವಯಗೊಳ್ಳಲಿದೆ. ಭೋಪಾಲ್‌ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಇರಾದೆ ಹೊಂದಲಾಗಿದೆ. ಈಶ್ವರನಗರ, ಎಂಐಟಿ, ಟೈಗರ್‌ ಸರ್ಕಲ್‌, ಸಿಂಡಿಕೇಟ್‌ ಸರ್ಕಲ್‌ ಮೊದಲಾದೆಡೆ ಸ್ಮಾರ್ಟ್‌ ಬಸ್‌ನಿಲ್ದಾಣಗಳನ್ನು ಯೋಜನೆಯ ರೂಪುರೇಷೆ ಒಳಗೊಂಡಿದೆ.

“ಅಂತಿಮಗೊಂಡಿಲ್ಲ’
ಕೇಂದ್ರ ಸರಕಾರದ ಸ್ಮಾರ್ಟ್‌ಸಿಟಿ ಯೋಜನೆಗೆ ಉಡುಪಿ ಅಥವಾ ಮಣಿಪಾಲ ಆಯ್ಕೆಯಾಗಿಲ್ಲದಿದ್ದರೂ ಖಾಸಗಿ ಸಹಭಾಗಿತ್ವದಲ್ಲಿ ಸ್ಮಾರ್ಟ್‌ ಸಿಟಿ ಮಾದರಿಯ ಸೌಲಭ್ಯಗಳನ್ನು ಇಲ್ಲಿಯೂ ಒದಗಿಸಲು ಸಾಧ್ಯವಿದೆ. ಶಿಕ್ಷಣ, ಆರೋಗ್ಯ, ಪ್ರವಾಸೋದ್ಯಮ, ಹಣಕಾಸು ಕ್ಷೇತ್ರಗಳಲ್ಲಿ ವಿಶ್ವಮಟ್ಟದಲ್ಲಿ ಮಾನ್ಯತೆ ಪಡೆದು ಬೆಳೆಯುತ್ತಿರುವ ಮಣಿಪಾಲಕ್ಕೆ ಪೂರಕವಾಗಿ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ “ಸ್ಮಾರ್ಟ್‌ ಸಿಟಿ’ ಯೋಜನೆ ಅನುಕೂಲವಾಗಲಿದೆ. ಈ ಬಗ್ಗೆ ಪ್ರಾಥಮಿಕ ಹಂತದ ನೀಲನಕಾಶೆಯನ್ನು ಖಾಸಗಿ ಸಂಸ್ಥೆ ಸಿದ್ಧಪಡಿಸಿದೆ. ಅಂತಿಮಗೊಂಡಿಲ್ಲ. ಸರಕಾರದ ಮಟ್ಟಕ್ಕೆ ಬಂದಿಲ್ಲ.
– ಕೆ.ರಘುಪತಿ ಭಟ್‌, ಶಾಸಕರು, ಉಡುಪಿ

ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.